Homeಮುಖಪುಟರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇ‌ಖರ್‌ ರಾವ್‌‌ ಅವರ ನಾಯಕತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಮಹತ್ವಾಕಾಂಕ್ಷೆಯಿಂದ ‘ಭಾರತ್‌ ರಾಷ್ಟ್ರ ಸಮಿತಿ’ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದು, ಟಿಆರ್‌ಎಸ್‌ ಅನ್ನು ಅದರಲ್ಲಿ ವಿಲೀನಗೊಳಿಸಿದ್ದಾರೆ.

ಟಿಆರ್‌ಎಸ್‌‌ 2000 ರಲ್ಲಿ ಪ್ರಾರಂಭವಾಗಿತ್ತು. ಇದೀಗ ಪಕ್ಷವನ್ನು ರಾಷ್ಟ್ರೀಯ ಮಟ್ಟದಲ್ಲಿ ಕಟ್ಟಲು ಪಕ್ಷದ ಸಮಾವೇಶದಲ್ಲಿ ಪಕ್ಷವನ್ನು ಭಾರತ್‌ ರಾಷ್ಟ್ರ ಸಮಿತಿಯಲ್ಲಿ ವಿಲೀನಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾವೇಶದಲ್ಲಿ 280 ಕ್ಕೂ ಹೆಚ್ಚು ಪಕ್ಷದ ಕಾರ್ಯಕಾರಿ ಸದಸ್ಯರು, ಶಾಸಕರು ಮತ್ತು ಸಂಸದರು ಟಿಆರ್‌ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನೊಂದಿಗೆ ವಿಲೀನಗೊಳಿಸುವ ನಿರ್ಣಯವನ್ನು ಅಂಗೀಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಉಚಿತ ಮದ್ಯ ಮತ್ತು ಕೋಳಿ ವಿತರಿಸಿದ ಟಿಆರ್‌ಎಸ್ ನಾಯಕ!

ಮುಖ್ಯಮಂತ್ರಿ ಕೆಸಿಆರ್ ಶೀಘ್ರದಲ್ಲೇ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅದು ವಹಿಸುವ ಪಾತ್ರಗಳನ್ನು ವಿಸ್ತರಿಸಲಿದ್ದಾರೆ. ಪಕ್ಷಕ್ಕೆ ಮರು ನಾಮಕರಣ ಮಾಡುವ ಸಮಾರಂಭದಲ್ಲಿ ಜೆಡಿಎಸ್‌ನ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

‘ಭಾರತ್‌ ರಾಷ್ಟ್ರ ಸಮಿತಿ’ ಪಕ್ಷವನ್ನು ಪ್ರಾರಂಭಿಸಿದ ತೆಲಂಗಾಣ ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ನ 20 ಶಾಸಕರು ಸಹ ಭಾಗವಹಿಸಿದ್ದರು. ಇಷ್ಟೆ ಅಲ್ಲದೆ ತಮಿಳುನಾಡಿನ ದಲಿತ ನಾಯಕ ತಿರುಮಾವಲವನ್‌ ಅವರ ಪಕ್ಷದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)ಯ ಸೇರಿದ ಇಬ್ಬರು ಸಂಸದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹೊಸ ಸಂಘಟನೆಯು ‘ವಿವಿಧ ಪ್ರಾದೇಶಿಕ ಪಕ್ಷಗಳ ಒಕ್ಕೂಟ’ ಆಗಿರುತ್ತದೆ, ಅದು ಆಯಾ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು JD(S) ಕಾರ್ಯಕಾರಿಯೊಬ್ಬರು ಹೇಳಿದ್ದಾರೆ ಎಂದು PTI ಗೆ ತಿಳಿಸಿದ್ದಾರೆ. ಬಿಜೆಪಿಯ ವಿರುದ್ಧ ಒಗ್ಗಟ್ಟಿನ ರಂಗವನ್ನು ಹುಟ್ಟು ಹಾಕುವ ಆಲೋಚನೆ ಇತ್ತು. ಈ ಮೂಲಕ ಎಲ್ಲಾ ವಿವಿಧ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಬೆಳೆಯಲು ಬಯಸುತ್ತವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

ತಿರುಮಾವಳವನ್ ಟ್ವೀಟ್ ಮಾಡಿ ರಾಷ್ಟ್ರಮಟ್ಟದ ರಾಜಕಾರಣಕ್ಕೆ ಗಮನ ಹರಿಸಿದ ಕೆಸಿಆರ್‌ ಅವರ ಪ್ರಯತ್ನಗಳಿಗಾಗಿ ಅಭಿನಂದಿಸಿದ್ದಾರೆ. ತಿರುಮಾವಳವನ್‌ ಅವರ ವಿಸಿಕೆ ಪಕ್ಷವು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆಯ ಮಿತ್ರಪಕ್ಷವಾಗಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

2024ರ ಲೋಕಸಭೆ ಚುನಾವಣೆಗೆ ಪಕ್ಷವು ಹಲವು ರಾಜ್ಯಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಟಿಆರ್‌ಎಸ್ ಮೂಲಗಳು ತಿಳಿಸಿವೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...