Homeಮುಖಪುಟಪ್ರವಾಸೋದ್ಯಮ ಹೆಚ್ಚಿಸುವ ಗುರಿ | ಪಹಲ್ಗಾಮ್‌ನಲ್ಲಿ ಸಚಿವ ಸಂಪುಟ ಸಭೆ ನಡೆಸಲಿರುವ ಸಿಎಂ ಒಮರ್ ಅಬ್ದುಲ್ಲಾ

ಪ್ರವಾಸೋದ್ಯಮ ಹೆಚ್ಚಿಸುವ ಗುರಿ | ಪಹಲ್ಗಾಮ್‌ನಲ್ಲಿ ಸಚಿವ ಸಂಪುಟ ಸಭೆ ನಡೆಸಲಿರುವ ಸಿಎಂ ಒಮರ್ ಅಬ್ದುಲ್ಲಾ

- Advertisement -
- Advertisement -

ಏಪ್ರಿಲ್ 22 ರಂದು ಭಯೋತ್ಪಾದಕ ದಾಳಿ ನಡೆದ ಪಹಲ್ಗಾಮ್‌ನಲ್ಲೆ ಸಚಿವ ಸಂಪುಟ ಸಭೆ ನಡೆಸಲು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸರ್ಕಾರ ತೀರ್ಮಾನಿಸಿದ್ದಾರೆ. ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರದ ಪ್ರವಾಸೋದ್ಯಮ ವಲಯದ ಮೇಲೆ ತೀವ್ರ ಪರಿಣಾಮ ಬೀರಿದ್ದು, ಇಂದು (ಮಂಗಳವಾರ) ನಡೆಯುವ ಸಚಿವ ಸಂಪುಟ ಸಭೆಯು ಜನರ ಆತ್ಮವಿಶ್ವಾಸವನ್ನು ಪುನಃಸ್ಥಾಪಿಸಲು ಮತ್ತು ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಇದಾಗಿದೆ ಎಂದು ವರದಿ ಹೇಳಿದೆ. ಪ್ರವಾಸೋದ್ಯಮ ಹೆಚ್ಚಿಸುವ ಗುರಿ

ಏಪ್ರಿಲ್ 22 ರ ದಾಳಿಯ ನಂತರ ಕಣಿವೆಯಲ್ಲಿ ಪ್ರವಾಸೋದ್ಯಮವನ್ನು ಹೇಗೆ ಪುನರುಜ್ಜೀವನಗೊಳಿಸುವುದು ಎಂಬುದರ ಕುರಿತು ಸಲಹೆಗಳನ್ನು ಸಂಗ್ರಹಿಸಲು ಸಿಎಂ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪಹಲ್ಗಾಮ್‌ನಲ್ಲಿ ಪ್ರವಾಸೋದ್ಯಮ ಪಾಲುದಾರರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಪಹಲ್ಗಾಮ್‌ನಲ್ಲಿ ಸಂಪುಟ ಸಭೆ ನಡೆಸುವುದು ಕಾಶ್ಮೀರ ಪ್ರವಾಸಿಗರಿಗೆ ಸುರಕ್ಷಿತ ತಾಣವಾಗಿ ಉಳಿದಿದೆ ಎಂಬ ಸಂದೇಶವನ್ನು ಕಳುಹಿಸುವ ಉದ್ದೇಶಪೂರ್ವಕ ಪ್ರಯತ್ನವೆಂದು ಪರಿಗಣಿಸಲಾಗಿದೆ. ಶ್ರೀನಗರ ಮತ್ತು ಜಮ್ಮುವಿನ ಅವಳಿ ರಾಜಧಾನಿಗಳ ಹೊರಗೆ ನಡೆಯಲಿರುವ ಒಮರ್ ನೇತೃತ್ವದ ಸರ್ಕಾರದ ಈ ಅವಧಿಯಲ್ಲಿ ಇದು ಮೊದಲ ಕ್ಯಾಬಿನೆಟ್ ಸಭೆಯಾಗಲಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸುವಾಗ ಸ್ಥಳೀಯ ಕುದುರೆ ಸವಾರ ಸಾವನ್ನಪ್ಪಿದ್ದರು. ಜೊತೆಗೆ ಮೇ 7-10 ರಂದು ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಮಿಲಿಟರಿ ಘರ್ಷಣೆಯ ನಂತರ, ಕಣಿವೆಯಲ್ಲಿ ಪ್ರವಾಸೋದ್ಯಮ ವಲಯವು ಗಣನೀಯ ನಷ್ಟವನ್ನು ಅನುಭವಿಸಿದೆ ಎಂದು ವರದಿ ಹೇಳಿದೆ.

ಈ ದಾಳಿಗಳ ನಂತರ, ಪ್ರವಾಸಿಗರು ಪ್ರದೇಶವನ್ನು ತೊರೆದಿದ್ದು ಮತ್ತು ವ್ಯಾಪಕ ಬುಕಿಂಗ್ ರದ್ದತಿ ನಡೆಯಿತು. ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿರುವ ಹೋಟೆಲ್‌ಗಳು, ದಕ್ಷಿಣ ಕಾಶ್ಮೀರದ ಪಹಲ್ಗಾಮ್, ಮಧ್ಯ ಕಾಶ್ಮೀರದ ಸೋನಾಮಾರ್ಗ್ ಮತ್ತು ಉತ್ತರ ಕಾಶ್ಮೀರದ ಗುಲ್ಮಾರ್ಗ್ ಸೇರಿದಂತೆ ಬಹುತೇಕ ಶೂನ್ಯ ಜನಪ್ರವಾಹ ಅನುಭವಿಸುತ್ತಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಪಹಲ್ಗಾಮ್‌ನಲ್ಲಿ ಇಂದಿನ ಸಂಪುಟ ಸಭೆಯ ನಂತರ, ಮುಖ್ಯಮಂತ್ರಿ ಮೇ 28 (ಬುಧವಾರ) ರಂದು ಉತ್ತರ ಕಾಶ್ಮೀರದ ಗುಲ್ಮಾರ್ಗ್‌ನ ವಿಶ್ವಪ್ರಸಿದ್ಧ ಸ್ಕೀ ರೆಸಾರ್ಟ್‌ನಲ್ಲಿ ಅಧಿಕೃತ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ, ಎಲ್ಲಾ ಕ್ಯಾಬಿನೆಟ್ ಮಂತ್ರಿಗಳು, ಸಿಎಂ ಸಲಹೆಗಾರ, ಮುಖ್ಯ ಕಾರ್ಯದರ್ಶಿ, ಇಲಾಖೆಗಳ ಮುಖ್ಯಸ್ಥರು ಮತ್ತು ಇತರ ಹಿರಿಯ ನಾಗರಿಕ ಮತ್ತು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಸ್ತುತ ನಿರ್ಜನ ಸ್ಥಳಗಳಲ್ಲಿ ಸರ್ಕಾರಿ ಸಭೆಗಳನ್ನು ನಡೆಸುವುದು ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಮತ್ತು ಕೆಲವು ಪ್ರವಾಸಿಗರು ಕಣಿವೆಗೆ ಪ್ರಯಾಣಿಸುವುದನ್ನು ಪರಿಗಣಿಸಲು ಪ್ರೇರೇಪಿಸಬಹುದು ಎಂದು ಪ್ರವಾಸೋದ್ಯಮ ಪಾಲುದಾರರೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಪಹಲ್ಗಾಮ್, ಗುಲ್ಮಾರ್ಗ್ ಮತ್ತು ಇತರ ಸ್ಥಳಗಳಲ್ಲಿ ಸರ್ಕಾರಿ ಸಭೆಗಳನ್ನು ನಡೆಸುವ ಸಿಎಂ ಅವರ ನಿರ್ಧಾರವು “ಮನೆ ಬಾಗಿಲಿನಲ್ಲೇ ಆಡಳಿತ” ಉಪಕ್ರಮದ ಭಾಗವಾಗಿದೆ ಎಂದು ಹಿರಿಯ ಎನ್‌ಸಿ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಒತ್ತಿ ಹೇಳಿದ್ದಾರೆ. “ನಿಮಗೆ ನೆನಪಿರಬಹುದು, ಅವರು ಕಳೆದ ಬಾರಿ ಸಿಎಂ ಆಗಿದ್ದಾಗ, ಅವರು ಆಗಾಗ್ಗೆ ಸಿವಿಲ್ ಸೆಕ್ರೆಟರಿಯೇಟ್‌ನ ಹೊರಗೆ ವಿವಿಧ ಸ್ಥಳಗಳಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸುತ್ತಿದ್ದರು” ಎಂದು ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಇತ್ತೀಚಿನ ಸಭೆಯಲ್ಲಿ, ಸಿಎಂ ಒಮರ್ ಅಬ್ದುಲ್ಲಾ ಅವರು ಪ್ರವಾಸಿಗರಲ್ಲಿ ವಿಶ್ವಾಸ ಮೂಡಿಸಲು ಮತ್ತು ಸುಂದರವಾದ ಕಣಿವೆಗೆ ಮರಳುವಂತೆ ಪ್ರೋತ್ಸಾಹಿಸಲು ಕಾಶ್ಮೀರದಲ್ಲಿ ಪಿಎಸ್‌ಯು ಸಮ್ಮೇಳನಗಳು, ಸಭೆಗಳು, ಪ್ರೋತ್ಸಾಹಕ ಪ್ರವಾಸಗಳು ಮತ್ತು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ನಡೆಸುವ ಪ್ರಸ್ತಾಪವನ್ನು ಮಾಡಿದ್ದಾರೆ. ಪ್ರವಾಸೋದ್ಯಮ ಹೆಚ್ಚಿಸುವ ಗುರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...