Homeಮುಖಪುಟಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

- Advertisement -
- Advertisement -

ಏರ್‌ ಇಂಡಿಯಾ ಮಾರಾಟ ಮಾಡುತ್ತಿರುವುದು ನಿಜವಾಗಿಯೂ ಟಾಟಾ ಕಂಪೆನಿಗೆ ನೀಡಿರುವ ಉಡುಗೊರೆಯಾಗಿದೆ ಎಂದು ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ)ದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೊಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಅಧಿಕಾರಕ್ಕೆ ಏರಿದ ನಂತರ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುತ್ತಲೆ ಬರುತ್ತಿದೆ. ಈ ಪಟ್ಟಿಗೆ ಹೊಸದಾಗಿ ಏರ್‌ ಇಂಡಿಯಾ ಕೂಡಾ ಸೇರಿಕೊಂಡಿದೆ. ಟಾಟಾ ಕಂಪೆನಿಯಿಂದಲೇ ಪ್ರಾರಂಭವಾಗಿದ್ದ ಏರ್‌ ಇಂಡಿಯಾ(ಆಗ ಅದಕ್ಕೆ ಟಾಟಾ ಏರ್‌ಲೈನ್ಸ್‌ ಎಂದು ಹೆಸರಿತ್ತು) ಉದ್ದಿಮೆಯನ್ನು ಸರ್ಕಾರವು ಈ ಹಿಂದೆ ರಾಷ್ಟ್ರೀಕರಣಗೊಳಿಸಿತ್ತು. ಇದೀಗ ಮತ್ತೆ ಐದು ದಶಕಗಳ ನಂತರ ಏರ್‌ ಇಂಡಿಯಾ ಟಾಟಾ ಕಂಪೆನಿಯ ತೆಕ್ಕೆಗೆ ಸೇರುತ್ತಿದೆ.

ಇದನ್ನೂ ಓದಿ: ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ

ಏರ್ ಇಂಡಿಯಾವನ್ನು ಪಡೆಯಲು ಟಾಟಾ ಕಂಪೆನಿಯು 18,000 ಕೋಟಿ ಮೊತ್ತವನ್ನು ಬಿಡ್‌ ಮಾಡಿದ್ದು, ಒಕ್ಕೂಟ ಸರ್ಕಾರ ಇದನ್ನು ಸ್ವೀಕರಿಸಿದೆ. ಸರ್ಕಾರ ಬಿಡಿ ಸ್ವೀಕರಿಸಿರುವುದನ್ನು ರತನ್ ಟಾಟಾ ಕಳೆದ ಶುಕ್ರವಾರ ಸ್ವಾಗತಿಸಿದ್ದರು.

ಏರ್‌ ಇಂಡಿಯಾ ಮತ್ತೆ ಟಾಟಾ ಕಂಪೆನಿಗೆ ಸೇರುತ್ತಿರುವುದಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, “ಒಕ್ಕೂಟ ಸರ್ಕಾರ ಏರ್‌‌ ಇಂಡಿಯಾ ಮಾರಾಟ ಮಾಡುತ್ತಿರುವುದು ಟಾಟಾ ಕಂಪೆನಿಗೆ ನೀಡಿರುವ ಉಡುಗೊರೆಯಾಗಿದೆ. ಇದು ಹೆದ್ದಾರಿಯಲ್ಲಿ ಹಾಡ ಹಗಲೇ ನಡೆಯುತ್ತಿರುವ ದರೋಡೆಯಾಗಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಗ್ಗೆಯು ಆಕ್ರೋಶ ವ್ಯಕ್ತಪಡಿಸಿದ ಯಚೂರಿ, “ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ವಜಾಗೊಳಿಸಬೇಕು. ಅವರ ಭಾಷಣಗಳು ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸೆಗೆ ಪ್ರಚೋದನೆಯಾಗಿತ್ತು. ಅವರ ಮಗ ಆರೋಪಿಯಾಗಿದ್ದಾಗ ಕೂಡಾ ಅವರು ಸಚಿವರಾಗಿ ಉಳಿದುಕೊಂಡಿದ್ದಾರೆ. ಇದರಿಂದ ನ್ಯಾಯ  ಸಿಗಲು ಸಾಧ್ಯವಿಲ್ಲ” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...