Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...