Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...