Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...