Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...