Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...