Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...