Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...