Homeಮುಖಪುಟವಾಯು ಮಾಲಿನ್ಯ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ದೆಹಲಿ ಸರ್ಕಾರ

ವಾಯು ಮಾಲಿನ್ಯ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ದೆಹಲಿ ಸರ್ಕಾರ

- Advertisement -
- Advertisement -

ವಾಯು ಮಾಲಿನ್ಯ ಇದ್ದರೂ ಶಾಲೆ ತೆರೆದಿರುವುದರ ಬಗ್ಗೆ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ. ಇದರ ನಂತರ ಮುಂದಿನ ಆದೇಶದವರೆಗೆ ದೆಹಲಿಯ ಶಾಲೆಗಳನ್ನು ನಾಳೆಯಿಂದ ಮುಚ್ಚಲಾಗುವುದು ಎಂದು ರಾಜ್ಯ ಪರಿಸರ ಸಚಿವ ಗೋಪಾಲ್ ರೈ ಗುರುವಾರ ಘೋಷಿಸಿದ್ದಾರೆ.

“ವಾಯು ಗುಣಮಟ್ಟ ಸುಧಾರಿಸುವ ಮುನ್ಸೂಚನೆಯನ್ನು ಪರಿಗಣಿಸಿ ನಾವು ಶಾಲೆಗಳನ್ನು ಪುನರಾರಂಭಿಸಿದ್ದೇವೆ. ಆದಾಗ್ಯೂ, ವಾಯು ಮಾಲಿನ್ಯದ ಮಟ್ಟವು ಮತ್ತೆ ಹೆಚ್ಚಾಗಿದ್ದು, ಮುಂದಿನ ಆದೇಶದವರೆಗೆ ನಾವು ಶುಕ್ರವಾರದಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ” ಎಂದು ಗೋಪಾಲ್ ರೈ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: ಸೋಮವಾರದಿಂದ ಶಾಲಾ- ಕಾಲೇಜು ಮತ್ತೆ ಆರಂಭ

ಹದಗೆಡುತ್ತಿರುವ ಗಾಳಿಯ ಗುಣಮಟ್ಟಕ್ಕೆ ಮುಖ್ಯ ಕಾರಣವೆಂದು ಪರಿಗಣಿಸಲಾದ ಕೈಗಾರಿಕೆ ಮತ್ತು ವಾಹನದ ಮಾಲಿನ್ಯದ ವಿರುದ್ದ ಕ್ರಮ ಕೈಗೊಳ್ಳಲು ಒಕ್ಕೂಟ ಸರ್ಕಾರ, ದೆಹಲಿ ಮತ್ತು ನೆರೆಯ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ 24 ಗಂಟೆಗಳ ಅಲ್ಟಿಮೇಟಮ್ ನೀಡಿದೆ.

ಶಾಲೆಗಳ ಪುನರಾರಂಭದ ಕುರಿತು ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಿದ ಸುಪ್ರೀಂ ಕೋರ್ಟ್, “ಮೂರು-ನಾಲ್ಕು ವರ್ಷದ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ, ಆದರೆ ವಯಸ್ಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ. “ನಿಮ್ಮ ಸರ್ಕಾರದ ಆಡಳಿತವನ್ನು ನಡೆಸಲು ನಾವು ಯಾರನ್ನಾದರೂ ನೇಮಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಹೇಳಿದ್ದಾರೆ.

ನವೆಂಬರ್ 13 ರಿಂದ ಮುಚ್ಚಲ್ಪಟ್ಟ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳ ತರಗತಿಗಳು ಸೋಮವಾರದಿಂದ ಪುನರಾರಂಭಗೊಂಡಿದ್ದವು.

ಕಳೆದ ತಿಂಗಳು ದೀಪಾವಳಿಯ ನಂತರ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟಿದೆ. ಕೃಷಿ ಭೂಮಿಯಲ್ಲಿ ಹೊತ್ತಿಸಲಾಗುತ್ತಿರುವ ಬೆಂಕಿ ಕೂಡಾ ಈ ವಾಯು ಮಾಲಿನ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ದೆಹಲಿಯು ಒಂದು ತಿಂಗಳಿನಿಂದ ವಾಯು ಮಾಲಿನ್ಯದಿಂದ ಬಳಲುತ್ತಿದೆ. ಮುಂದಿನ ಆದೇಶದವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧವಿದೆ.

ಇದನ್ನೂ ಓದಿ:ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...