Homeರಾಷ್ಟ್ರೀಯಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಲಕ್ನೊ ನಿವಾಸಿಗಳು ತಮ್ಮ ಆಯುಷ್ಯದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ

- Advertisement -
- Advertisement -

ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಸರಾಸರಿ ಭಾರತೀಯ ನಿವಾಸಿಗಳು ತಮ್ಮ ಜೀವನದ ಐದು ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾನಿಲಯದ (ಇಪಿಐಸಿ) ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ವರದಿ ಮಾಡಿದೆ. ಈ ವರದಿಯು, ದೆಹಲಿಯಲ್ಲಿ ಪ್ರಸ್ತುತ ಮಾಲಿನ್ಯದ ಮಟ್ಟವು ಮುಂದುವರಿದರೆ ಅಲ್ಲಿ ವಾಸಿಸುವ ಜನರು 10 ವರ್ಷಗಳವರೆಗೆ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ಸೂಚಿಸಿದೆ.

ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ವಾಯು ಮಾಲಿನ್ಯದ ಅತಿ ಹೆಚ್ಚು ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಇದಕ್ಕೆ ಕಾರಣ ಹೆಚ್ಚಿನ ಜನಸಂಖ್ಯೆ ಮತ್ತು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಎಂದು ವರದಿಯೂ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಆದರೆ ದೆಹಲಿಯಲ್ಲಿ ಸರಾಸರಿ ವಾರ್ಷಿಕ PM2.5 ಸಾಂದ್ರತೆಯೆಯೂ 21 ಪಟ್ಟು ಹೆಚ್ಚು ಹೊಂದಿದೆ. ದೆಹಲಿಯ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 107 ಮೈಕ್ರೋಗ್ರಾಂಗಳನ್ನು ಮೀರಿದೆ.

‘PM2.5’ ಎಂಬುವುದು 2.5 ಮೈಕ್ರೊಮೀಟರ್‌ಗಳಿಗಿಂತ ಕಡಿಮೆ ವ್ಯಾಸವನ್ನು ಹೊಂದಿರುವ ಕಣಗಳನ್ನು ಸೂಚಿಸುತ್ತದೆ. ಇದು ಮಾನವ ಕೂದಲುಗಿಂತ 100 ಪಟ್ಟು ಹೆಚ್ಚು ತೆಳ್ಳಗಿರುತ್ತದೆ. ವಾತಾವರಣದಲ್ಲಿ ನಡೆಯುವ ಇಂಧನ ಮತ್ತು ರಾಸಾಯನಿಕ ಕ್ರಿಯೆಗಳನ್ನು ಸುಡುವ ಪರಿಣಾಮವಾಗಿ ಈ ಕಣಗಳು ರೂಪುಗೊಳ್ಳುತ್ತವೆ.

2013 ರಿಂದ ವಿಶ್ವದ ಮಾಲಿನ್ಯದಲ್ಲಿ 44% ನಷ್ಟು ಹೆಚ್ಚಳವು ಭಾರತದಿಂದ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು WHO ಮಾರ್ಗಸೂಚಿಗಳಿಗಿಂತ ಸುಮಾರು 11 ಪಟ್ಟು ಹೆಚ್ಚಾಗಿದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನಸಂಖ್ಯೆ ಬೆಳವಣಿಗೆಯು ಮತ್ತೊಂದು ಪ್ರಮುಖ ಅಂಶವಾಗಿದ್ದು, ಇದರಿಂದಾಗಿ ಶಕ್ತಿ ಮತ್ತು ಪಳೆಯುಳಿಕೆ ಇಂಧನ ಬಳಕೆಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

130 ಕೋಟಿ ಭಾರತೀಯರು ವಾರ್ಷಿಕ ಸರಾಸರಿ ಕಣಗಳ ಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾರ್ಗಸೂಚಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 63% ಕ್ಕಿಂತ ಹೆಚ್ಚು ಜನಸಂಖ್ಯೆಯು ಭಾರತದ ಸ್ವಯಂ ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡವಾದ ಪ್ರತಿ ಘನ ಮೀಟರ್‌ಗೆ 40 ಮೈಕ್ರೋಗ್ರಾಂಗಳನ್ನು ಮೀರುವ ಪ್ರದೇಶಗಳಲ್ಲಿದೆ.

ಸಿಂದೂ-ಗಂಗಾ ಬಯಲು ಪ್ರದೇಶವು 50 ಕೋಟಿಗೂ ಹೆಚ್ಚು ಭಾರತೀಯರ ನೆಲೆಯಾಗಿದ್ದು, ಇದು ಭಾರತದ ಅತ್ಯಂತ ಕಲುಷಿತ ಪ್ರದೇಶವಾಗಿದೆ. ಹೊಸ ವರದಿಯ ಪ್ರಕಾರ, ಇಲ್ಲಿ ವಾಸಿಸುವ ಜನರು ತಮ್ಮ ಜೀವಿತಾವಧಿಯ 7.6 ವರ್ಷಗಳನ್ನು ಕಳೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಲಕ್ನೋ ನಿವಾಸಿಗಳು ತಮ್ಮ ಜೀವನದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಉಲ್ಲೇಖಿಸಿದೆ.

ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ಹೆಚ್ಚಿನ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ವಾಯು ಮಾಲಿನ್ಯವು ಜಾಗತಿಕವಾಗಿ 2.2 ವರ್ಷಗಳ ಜೀವಿತಾವಧಿಯನ್ನು ಕಸಿಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನು ಧೂಮಾಪಾನ ಮಾಡಿದ ಪರಿಣಾಮಕ್ಕೆ ಹೋಲಿಸಬಹುದಾಗಿದೆ. ವಾಯು ಮಾಲಿನ್ಯದಿಂದ ಆಲ್ಕೋಹಾಲ್ ಬಳಕೆ ಮತ್ತು ಅಸುರಕ್ಷಿತ ನೀರು ಬಳಸಿ ಮೃತಪಡುವುದಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಅಸುನೀಗುತ್ತಿದ್ದಾರೆ. ಎಚ್‌ಐವಿ ಏಡ್ಸ್‌ ರೋಗಕ್ಕೆ ಸಾಯುವುದಕ್ಕಿಂತ ಆರು ಪಟ್ಟು ಹೆಚ್ಚು ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಾರೆ. ಸಂಘರ್ಷ ಮತ್ತು ಭಯೋತ್ಪಾದನೆಯಲ್ಲಿ ಮೃತಪಡುವುದಕ್ಕಿಂತ 89 ಪಟ್ಟು ಹೆಚ್ಚಿನ ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...