Homeರಾಷ್ಟ್ರೀಯಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಲಕ್ನೊ ನಿವಾಸಿಗಳು ತಮ್ಮ ಆಯುಷ್ಯದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ

- Advertisement -
- Advertisement -

ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಸರಾಸರಿ ಭಾರತೀಯ ನಿವಾಸಿಗಳು ತಮ್ಮ ಜೀವನದ ಐದು ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾನಿಲಯದ (ಇಪಿಐಸಿ) ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ವರದಿ ಮಾಡಿದೆ. ಈ ವರದಿಯು, ದೆಹಲಿಯಲ್ಲಿ ಪ್ರಸ್ತುತ ಮಾಲಿನ್ಯದ ಮಟ್ಟವು ಮುಂದುವರಿದರೆ ಅಲ್ಲಿ ವಾಸಿಸುವ ಜನರು 10 ವರ್ಷಗಳವರೆಗೆ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ಸೂಚಿಸಿದೆ.

ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ವಾಯು ಮಾಲಿನ್ಯದ ಅತಿ ಹೆಚ್ಚು ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಇದಕ್ಕೆ ಕಾರಣ ಹೆಚ್ಚಿನ ಜನಸಂಖ್ಯೆ ಮತ್ತು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಎಂದು ವರದಿಯೂ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಆದರೆ ದೆಹಲಿಯಲ್ಲಿ ಸರಾಸರಿ ವಾರ್ಷಿಕ PM2.5 ಸಾಂದ್ರತೆಯೆಯೂ 21 ಪಟ್ಟು ಹೆಚ್ಚು ಹೊಂದಿದೆ. ದೆಹಲಿಯ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 107 ಮೈಕ್ರೋಗ್ರಾಂಗಳನ್ನು ಮೀರಿದೆ.

‘PM2.5’ ಎಂಬುವುದು 2.5 ಮೈಕ್ರೊಮೀಟರ್‌ಗಳಿಗಿಂತ ಕಡಿಮೆ ವ್ಯಾಸವನ್ನು ಹೊಂದಿರುವ ಕಣಗಳನ್ನು ಸೂಚಿಸುತ್ತದೆ. ಇದು ಮಾನವ ಕೂದಲುಗಿಂತ 100 ಪಟ್ಟು ಹೆಚ್ಚು ತೆಳ್ಳಗಿರುತ್ತದೆ. ವಾತಾವರಣದಲ್ಲಿ ನಡೆಯುವ ಇಂಧನ ಮತ್ತು ರಾಸಾಯನಿಕ ಕ್ರಿಯೆಗಳನ್ನು ಸುಡುವ ಪರಿಣಾಮವಾಗಿ ಈ ಕಣಗಳು ರೂಪುಗೊಳ್ಳುತ್ತವೆ.

2013 ರಿಂದ ವಿಶ್ವದ ಮಾಲಿನ್ಯದಲ್ಲಿ 44% ನಷ್ಟು ಹೆಚ್ಚಳವು ಭಾರತದಿಂದ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು WHO ಮಾರ್ಗಸೂಚಿಗಳಿಗಿಂತ ಸುಮಾರು 11 ಪಟ್ಟು ಹೆಚ್ಚಾಗಿದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನಸಂಖ್ಯೆ ಬೆಳವಣಿಗೆಯು ಮತ್ತೊಂದು ಪ್ರಮುಖ ಅಂಶವಾಗಿದ್ದು, ಇದರಿಂದಾಗಿ ಶಕ್ತಿ ಮತ್ತು ಪಳೆಯುಳಿಕೆ ಇಂಧನ ಬಳಕೆಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

130 ಕೋಟಿ ಭಾರತೀಯರು ವಾರ್ಷಿಕ ಸರಾಸರಿ ಕಣಗಳ ಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾರ್ಗಸೂಚಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 63% ಕ್ಕಿಂತ ಹೆಚ್ಚು ಜನಸಂಖ್ಯೆಯು ಭಾರತದ ಸ್ವಯಂ ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡವಾದ ಪ್ರತಿ ಘನ ಮೀಟರ್‌ಗೆ 40 ಮೈಕ್ರೋಗ್ರಾಂಗಳನ್ನು ಮೀರುವ ಪ್ರದೇಶಗಳಲ್ಲಿದೆ.

ಸಿಂದೂ-ಗಂಗಾ ಬಯಲು ಪ್ರದೇಶವು 50 ಕೋಟಿಗೂ ಹೆಚ್ಚು ಭಾರತೀಯರ ನೆಲೆಯಾಗಿದ್ದು, ಇದು ಭಾರತದ ಅತ್ಯಂತ ಕಲುಷಿತ ಪ್ರದೇಶವಾಗಿದೆ. ಹೊಸ ವರದಿಯ ಪ್ರಕಾರ, ಇಲ್ಲಿ ವಾಸಿಸುವ ಜನರು ತಮ್ಮ ಜೀವಿತಾವಧಿಯ 7.6 ವರ್ಷಗಳನ್ನು ಕಳೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಲಕ್ನೋ ನಿವಾಸಿಗಳು ತಮ್ಮ ಜೀವನದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಉಲ್ಲೇಖಿಸಿದೆ.

ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ಹೆಚ್ಚಿನ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ವಾಯು ಮಾಲಿನ್ಯವು ಜಾಗತಿಕವಾಗಿ 2.2 ವರ್ಷಗಳ ಜೀವಿತಾವಧಿಯನ್ನು ಕಸಿಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನು ಧೂಮಾಪಾನ ಮಾಡಿದ ಪರಿಣಾಮಕ್ಕೆ ಹೋಲಿಸಬಹುದಾಗಿದೆ. ವಾಯು ಮಾಲಿನ್ಯದಿಂದ ಆಲ್ಕೋಹಾಲ್ ಬಳಕೆ ಮತ್ತು ಅಸುರಕ್ಷಿತ ನೀರು ಬಳಸಿ ಮೃತಪಡುವುದಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಅಸುನೀಗುತ್ತಿದ್ದಾರೆ. ಎಚ್‌ಐವಿ ಏಡ್ಸ್‌ ರೋಗಕ್ಕೆ ಸಾಯುವುದಕ್ಕಿಂತ ಆರು ಪಟ್ಟು ಹೆಚ್ಚು ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಾರೆ. ಸಂಘರ್ಷ ಮತ್ತು ಭಯೋತ್ಪಾದನೆಯಲ್ಲಿ ಮೃತಪಡುವುದಕ್ಕಿಂತ 89 ಪಟ್ಟು ಹೆಚ್ಚಿನ ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...