Homeರಾಷ್ಟ್ರೀಯಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಲಕ್ನೊ ನಿವಾಸಿಗಳು ತಮ್ಮ ಆಯುಷ್ಯದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ

- Advertisement -
- Advertisement -

ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಸರಾಸರಿ ಭಾರತೀಯ ನಿವಾಸಿಗಳು ತಮ್ಮ ಜೀವನದ ಐದು ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾನಿಲಯದ (ಇಪಿಐಸಿ) ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ವರದಿ ಮಾಡಿದೆ. ಈ ವರದಿಯು, ದೆಹಲಿಯಲ್ಲಿ ಪ್ರಸ್ತುತ ಮಾಲಿನ್ಯದ ಮಟ್ಟವು ಮುಂದುವರಿದರೆ ಅಲ್ಲಿ ವಾಸಿಸುವ ಜನರು 10 ವರ್ಷಗಳವರೆಗೆ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ಸೂಚಿಸಿದೆ.

ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ವಾಯು ಮಾಲಿನ್ಯದ ಅತಿ ಹೆಚ್ಚು ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಇದಕ್ಕೆ ಕಾರಣ ಹೆಚ್ಚಿನ ಜನಸಂಖ್ಯೆ ಮತ್ತು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಎಂದು ವರದಿಯೂ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಆದರೆ ದೆಹಲಿಯಲ್ಲಿ ಸರಾಸರಿ ವಾರ್ಷಿಕ PM2.5 ಸಾಂದ್ರತೆಯೆಯೂ 21 ಪಟ್ಟು ಹೆಚ್ಚು ಹೊಂದಿದೆ. ದೆಹಲಿಯ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 107 ಮೈಕ್ರೋಗ್ರಾಂಗಳನ್ನು ಮೀರಿದೆ.

‘PM2.5’ ಎಂಬುವುದು 2.5 ಮೈಕ್ರೊಮೀಟರ್‌ಗಳಿಗಿಂತ ಕಡಿಮೆ ವ್ಯಾಸವನ್ನು ಹೊಂದಿರುವ ಕಣಗಳನ್ನು ಸೂಚಿಸುತ್ತದೆ. ಇದು ಮಾನವ ಕೂದಲುಗಿಂತ 100 ಪಟ್ಟು ಹೆಚ್ಚು ತೆಳ್ಳಗಿರುತ್ತದೆ. ವಾತಾವರಣದಲ್ಲಿ ನಡೆಯುವ ಇಂಧನ ಮತ್ತು ರಾಸಾಯನಿಕ ಕ್ರಿಯೆಗಳನ್ನು ಸುಡುವ ಪರಿಣಾಮವಾಗಿ ಈ ಕಣಗಳು ರೂಪುಗೊಳ್ಳುತ್ತವೆ.

2013 ರಿಂದ ವಿಶ್ವದ ಮಾಲಿನ್ಯದಲ್ಲಿ 44% ನಷ್ಟು ಹೆಚ್ಚಳವು ಭಾರತದಿಂದ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು WHO ಮಾರ್ಗಸೂಚಿಗಳಿಗಿಂತ ಸುಮಾರು 11 ಪಟ್ಟು ಹೆಚ್ಚಾಗಿದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನಸಂಖ್ಯೆ ಬೆಳವಣಿಗೆಯು ಮತ್ತೊಂದು ಪ್ರಮುಖ ಅಂಶವಾಗಿದ್ದು, ಇದರಿಂದಾಗಿ ಶಕ್ತಿ ಮತ್ತು ಪಳೆಯುಳಿಕೆ ಇಂಧನ ಬಳಕೆಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

130 ಕೋಟಿ ಭಾರತೀಯರು ವಾರ್ಷಿಕ ಸರಾಸರಿ ಕಣಗಳ ಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾರ್ಗಸೂಚಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 63% ಕ್ಕಿಂತ ಹೆಚ್ಚು ಜನಸಂಖ್ಯೆಯು ಭಾರತದ ಸ್ವಯಂ ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡವಾದ ಪ್ರತಿ ಘನ ಮೀಟರ್‌ಗೆ 40 ಮೈಕ್ರೋಗ್ರಾಂಗಳನ್ನು ಮೀರುವ ಪ್ರದೇಶಗಳಲ್ಲಿದೆ.

ಸಿಂದೂ-ಗಂಗಾ ಬಯಲು ಪ್ರದೇಶವು 50 ಕೋಟಿಗೂ ಹೆಚ್ಚು ಭಾರತೀಯರ ನೆಲೆಯಾಗಿದ್ದು, ಇದು ಭಾರತದ ಅತ್ಯಂತ ಕಲುಷಿತ ಪ್ರದೇಶವಾಗಿದೆ. ಹೊಸ ವರದಿಯ ಪ್ರಕಾರ, ಇಲ್ಲಿ ವಾಸಿಸುವ ಜನರು ತಮ್ಮ ಜೀವಿತಾವಧಿಯ 7.6 ವರ್ಷಗಳನ್ನು ಕಳೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಲಕ್ನೋ ನಿವಾಸಿಗಳು ತಮ್ಮ ಜೀವನದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಉಲ್ಲೇಖಿಸಿದೆ.

ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ಹೆಚ್ಚಿನ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ವಾಯು ಮಾಲಿನ್ಯವು ಜಾಗತಿಕವಾಗಿ 2.2 ವರ್ಷಗಳ ಜೀವಿತಾವಧಿಯನ್ನು ಕಸಿಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನು ಧೂಮಾಪಾನ ಮಾಡಿದ ಪರಿಣಾಮಕ್ಕೆ ಹೋಲಿಸಬಹುದಾಗಿದೆ. ವಾಯು ಮಾಲಿನ್ಯದಿಂದ ಆಲ್ಕೋಹಾಲ್ ಬಳಕೆ ಮತ್ತು ಅಸುರಕ್ಷಿತ ನೀರು ಬಳಸಿ ಮೃತಪಡುವುದಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಅಸುನೀಗುತ್ತಿದ್ದಾರೆ. ಎಚ್‌ಐವಿ ಏಡ್ಸ್‌ ರೋಗಕ್ಕೆ ಸಾಯುವುದಕ್ಕಿಂತ ಆರು ಪಟ್ಟು ಹೆಚ್ಚು ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಾರೆ. ಸಂಘರ್ಷ ಮತ್ತು ಭಯೋತ್ಪಾದನೆಯಲ್ಲಿ ಮೃತಪಡುವುದಕ್ಕಿಂತ 89 ಪಟ್ಟು ಹೆಚ್ಚಿನ ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...