Homeರಾಷ್ಟ್ರೀಯಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಲಕ್ನೊ ನಿವಾಸಿಗಳು ತಮ್ಮ ಆಯುಷ್ಯದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ

- Advertisement -
- Advertisement -

ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಸರಾಸರಿ ಭಾರತೀಯ ನಿವಾಸಿಗಳು ತಮ್ಮ ಜೀವನದ ಐದು ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾನಿಲಯದ (ಇಪಿಐಸಿ) ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ವರದಿ ಮಾಡಿದೆ. ಈ ವರದಿಯು, ದೆಹಲಿಯಲ್ಲಿ ಪ್ರಸ್ತುತ ಮಾಲಿನ್ಯದ ಮಟ್ಟವು ಮುಂದುವರಿದರೆ ಅಲ್ಲಿ ವಾಸಿಸುವ ಜನರು 10 ವರ್ಷಗಳವರೆಗೆ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ಸೂಚಿಸಿದೆ.

ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ವಾಯು ಮಾಲಿನ್ಯದ ಅತಿ ಹೆಚ್ಚು ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಇದಕ್ಕೆ ಕಾರಣ ಹೆಚ್ಚಿನ ಜನಸಂಖ್ಯೆ ಮತ್ತು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಎಂದು ವರದಿಯೂ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಆದರೆ ದೆಹಲಿಯಲ್ಲಿ ಸರಾಸರಿ ವಾರ್ಷಿಕ PM2.5 ಸಾಂದ್ರತೆಯೆಯೂ 21 ಪಟ್ಟು ಹೆಚ್ಚು ಹೊಂದಿದೆ. ದೆಹಲಿಯ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 107 ಮೈಕ್ರೋಗ್ರಾಂಗಳನ್ನು ಮೀರಿದೆ.

‘PM2.5’ ಎಂಬುವುದು 2.5 ಮೈಕ್ರೊಮೀಟರ್‌ಗಳಿಗಿಂತ ಕಡಿಮೆ ವ್ಯಾಸವನ್ನು ಹೊಂದಿರುವ ಕಣಗಳನ್ನು ಸೂಚಿಸುತ್ತದೆ. ಇದು ಮಾನವ ಕೂದಲುಗಿಂತ 100 ಪಟ್ಟು ಹೆಚ್ಚು ತೆಳ್ಳಗಿರುತ್ತದೆ. ವಾತಾವರಣದಲ್ಲಿ ನಡೆಯುವ ಇಂಧನ ಮತ್ತು ರಾಸಾಯನಿಕ ಕ್ರಿಯೆಗಳನ್ನು ಸುಡುವ ಪರಿಣಾಮವಾಗಿ ಈ ಕಣಗಳು ರೂಪುಗೊಳ್ಳುತ್ತವೆ.

2013 ರಿಂದ ವಿಶ್ವದ ಮಾಲಿನ್ಯದಲ್ಲಿ 44% ನಷ್ಟು ಹೆಚ್ಚಳವು ಭಾರತದಿಂದ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು WHO ಮಾರ್ಗಸೂಚಿಗಳಿಗಿಂತ ಸುಮಾರು 11 ಪಟ್ಟು ಹೆಚ್ಚಾಗಿದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನಸಂಖ್ಯೆ ಬೆಳವಣಿಗೆಯು ಮತ್ತೊಂದು ಪ್ರಮುಖ ಅಂಶವಾಗಿದ್ದು, ಇದರಿಂದಾಗಿ ಶಕ್ತಿ ಮತ್ತು ಪಳೆಯುಳಿಕೆ ಇಂಧನ ಬಳಕೆಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

130 ಕೋಟಿ ಭಾರತೀಯರು ವಾರ್ಷಿಕ ಸರಾಸರಿ ಕಣಗಳ ಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾರ್ಗಸೂಚಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 63% ಕ್ಕಿಂತ ಹೆಚ್ಚು ಜನಸಂಖ್ಯೆಯು ಭಾರತದ ಸ್ವಯಂ ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡವಾದ ಪ್ರತಿ ಘನ ಮೀಟರ್‌ಗೆ 40 ಮೈಕ್ರೋಗ್ರಾಂಗಳನ್ನು ಮೀರುವ ಪ್ರದೇಶಗಳಲ್ಲಿದೆ.

ಸಿಂದೂ-ಗಂಗಾ ಬಯಲು ಪ್ರದೇಶವು 50 ಕೋಟಿಗೂ ಹೆಚ್ಚು ಭಾರತೀಯರ ನೆಲೆಯಾಗಿದ್ದು, ಇದು ಭಾರತದ ಅತ್ಯಂತ ಕಲುಷಿತ ಪ್ರದೇಶವಾಗಿದೆ. ಹೊಸ ವರದಿಯ ಪ್ರಕಾರ, ಇಲ್ಲಿ ವಾಸಿಸುವ ಜನರು ತಮ್ಮ ಜೀವಿತಾವಧಿಯ 7.6 ವರ್ಷಗಳನ್ನು ಕಳೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಲಕ್ನೋ ನಿವಾಸಿಗಳು ತಮ್ಮ ಜೀವನದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಉಲ್ಲೇಖಿಸಿದೆ.

ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ಹೆಚ್ಚಿನ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ವಾಯು ಮಾಲಿನ್ಯವು ಜಾಗತಿಕವಾಗಿ 2.2 ವರ್ಷಗಳ ಜೀವಿತಾವಧಿಯನ್ನು ಕಸಿಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನು ಧೂಮಾಪಾನ ಮಾಡಿದ ಪರಿಣಾಮಕ್ಕೆ ಹೋಲಿಸಬಹುದಾಗಿದೆ. ವಾಯು ಮಾಲಿನ್ಯದಿಂದ ಆಲ್ಕೋಹಾಲ್ ಬಳಕೆ ಮತ್ತು ಅಸುರಕ್ಷಿತ ನೀರು ಬಳಸಿ ಮೃತಪಡುವುದಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಅಸುನೀಗುತ್ತಿದ್ದಾರೆ. ಎಚ್‌ಐವಿ ಏಡ್ಸ್‌ ರೋಗಕ್ಕೆ ಸಾಯುವುದಕ್ಕಿಂತ ಆರು ಪಟ್ಟು ಹೆಚ್ಚು ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಾರೆ. ಸಂಘರ್ಷ ಮತ್ತು ಭಯೋತ್ಪಾದನೆಯಲ್ಲಿ ಮೃತಪಡುವುದಕ್ಕಿಂತ 89 ಪಟ್ಟು ಹೆಚ್ಚಿನ ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...