Homeರಾಷ್ಟ್ರೀಯಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಪ್ರತಿ ಭಾರತೀಯರನ್ನು ಸರಾಸರಿ ಐದು ವರ್ಷ ಮುಂಚಯೆ ಕೊಲ್ಲುತ್ತಿರುವ ‘ವಾಯು ಮಾಲಿನ್ಯ’!

ಲಕ್ನೊ ನಿವಾಸಿಗಳು ತಮ್ಮ ಆಯುಷ್ಯದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ

- Advertisement -
- Advertisement -

ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಸರಾಸರಿ ಭಾರತೀಯ ನಿವಾಸಿಗಳು ತಮ್ಮ ಜೀವನದ ಐದು ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾನಿಲಯದ (ಇಪಿಐಸಿ) ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ವರದಿ ಮಾಡಿದೆ. ಈ ವರದಿಯು, ದೆಹಲಿಯಲ್ಲಿ ಪ್ರಸ್ತುತ ಮಾಲಿನ್ಯದ ಮಟ್ಟವು ಮುಂದುವರಿದರೆ ಅಲ್ಲಿ ವಾಸಿಸುವ ಜನರು 10 ವರ್ಷಗಳವರೆಗೆ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ಸೂಚಿಸಿದೆ.

ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತವು ವಾಯು ಮಾಲಿನ್ಯದ ಅತಿ ಹೆಚ್ಚು ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಇದಕ್ಕೆ ಕಾರಣ ಹೆಚ್ಚಿನ ಜನಸಂಖ್ಯೆ ಮತ್ತು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಎಂದು ವರದಿಯೂ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಆದರೆ ದೆಹಲಿಯಲ್ಲಿ ಸರಾಸರಿ ವಾರ್ಷಿಕ PM2.5 ಸಾಂದ್ರತೆಯೆಯೂ 21 ಪಟ್ಟು ಹೆಚ್ಚು ಹೊಂದಿದೆ. ದೆಹಲಿಯ ‘PM2.5’ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 107 ಮೈಕ್ರೋಗ್ರಾಂಗಳನ್ನು ಮೀರಿದೆ.

‘PM2.5’ ಎಂಬುವುದು 2.5 ಮೈಕ್ರೊಮೀಟರ್‌ಗಳಿಗಿಂತ ಕಡಿಮೆ ವ್ಯಾಸವನ್ನು ಹೊಂದಿರುವ ಕಣಗಳನ್ನು ಸೂಚಿಸುತ್ತದೆ. ಇದು ಮಾನವ ಕೂದಲುಗಿಂತ 100 ಪಟ್ಟು ಹೆಚ್ಚು ತೆಳ್ಳಗಿರುತ್ತದೆ. ವಾತಾವರಣದಲ್ಲಿ ನಡೆಯುವ ಇಂಧನ ಮತ್ತು ರಾಸಾಯನಿಕ ಕ್ರಿಯೆಗಳನ್ನು ಸುಡುವ ಪರಿಣಾಮವಾಗಿ ಈ ಕಣಗಳು ರೂಪುಗೊಳ್ಳುತ್ತವೆ.

2013 ರಿಂದ ವಿಶ್ವದ ಮಾಲಿನ್ಯದಲ್ಲಿ 44% ನಷ್ಟು ಹೆಚ್ಚಳವು ಭಾರತದಿಂದ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು WHO ಮಾರ್ಗಸೂಚಿಗಳಿಗಿಂತ ಸುಮಾರು 11 ಪಟ್ಟು ಹೆಚ್ಚಾಗಿದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನಸಂಖ್ಯೆ ಬೆಳವಣಿಗೆಯು ಮತ್ತೊಂದು ಪ್ರಮುಖ ಅಂಶವಾಗಿದ್ದು, ಇದರಿಂದಾಗಿ ಶಕ್ತಿ ಮತ್ತು ಪಳೆಯುಳಿಕೆ ಇಂಧನ ಬಳಕೆಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

130 ಕೋಟಿ ಭಾರತೀಯರು ವಾರ್ಷಿಕ ಸರಾಸರಿ ಕಣಗಳ ಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾರ್ಗಸೂಚಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. 63% ಕ್ಕಿಂತ ಹೆಚ್ಚು ಜನಸಂಖ್ಯೆಯು ಭಾರತದ ಸ್ವಯಂ ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡವಾದ ಪ್ರತಿ ಘನ ಮೀಟರ್‌ಗೆ 40 ಮೈಕ್ರೋಗ್ರಾಂಗಳನ್ನು ಮೀರುವ ಪ್ರದೇಶಗಳಲ್ಲಿದೆ.

ಸಿಂದೂ-ಗಂಗಾ ಬಯಲು ಪ್ರದೇಶವು 50 ಕೋಟಿಗೂ ಹೆಚ್ಚು ಭಾರತೀಯರ ನೆಲೆಯಾಗಿದ್ದು, ಇದು ಭಾರತದ ಅತ್ಯಂತ ಕಲುಷಿತ ಪ್ರದೇಶವಾಗಿದೆ. ಹೊಸ ವರದಿಯ ಪ್ರಕಾರ, ಇಲ್ಲಿ ವಾಸಿಸುವ ಜನರು ತಮ್ಮ ಜೀವಿತಾವಧಿಯ 7.6 ವರ್ಷಗಳನ್ನು ಕಳೆದುಕೊಳ್ಳುತ್ತಾರೆ. ನಿರ್ದಿಷ್ಟವಾಗಿ ಲಕ್ನೋ ನಿವಾಸಿಗಳು ತಮ್ಮ ಜೀವನದ 9.5 ವರ್ಷಗಳನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಉಲ್ಲೇಖಿಸಿದೆ.

ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ಹೆಚ್ಚಿನ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ವಾಯು ಮಾಲಿನ್ಯವು ಜಾಗತಿಕವಾಗಿ 2.2 ವರ್ಷಗಳ ಜೀವಿತಾವಧಿಯನ್ನು ಕಸಿಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನು ಧೂಮಾಪಾನ ಮಾಡಿದ ಪರಿಣಾಮಕ್ಕೆ ಹೋಲಿಸಬಹುದಾಗಿದೆ. ವಾಯು ಮಾಲಿನ್ಯದಿಂದ ಆಲ್ಕೋಹಾಲ್ ಬಳಕೆ ಮತ್ತು ಅಸುರಕ್ಷಿತ ನೀರು ಬಳಸಿ ಮೃತಪಡುವುದಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಅಸುನೀಗುತ್ತಿದ್ದಾರೆ. ಎಚ್‌ಐವಿ ಏಡ್ಸ್‌ ರೋಗಕ್ಕೆ ಸಾಯುವುದಕ್ಕಿಂತ ಆರು ಪಟ್ಟು ಹೆಚ್ಚು ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಾರೆ. ಸಂಘರ್ಷ ಮತ್ತು ಭಯೋತ್ಪಾದನೆಯಲ್ಲಿ ಮೃತಪಡುವುದಕ್ಕಿಂತ 89 ಪಟ್ಟು ಹೆಚ್ಚಿನ ಜನರು ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...