Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಅಸ್ಸಾಂನಲ್ಲಿ ಜೈರಾಮ್‌ ರಮೇಶ್‌ ಕಾರಿನ ಮೇಲೆ ದಾಳಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಅಸ್ಸಾಂನಲ್ಲಿ ಜೈರಾಮ್‌ ರಮೇಶ್‌ ಕಾರಿನ ಮೇಲೆ ದಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ 8ನೇ ದಿನವಾದ ಇಂದು ಅಸ್ಸಾಂನಲ್ಲಿ ಮುಂದುವರಿದಿದ್ದು, ಸುನೀತ್‌ಪುರದ ಜುಮುಗುರಿಹತ್‌ನಲ್ಲಿ ನನ್ನ ವಾಹನದ ಮೇಲೆ ಬಿಜೆಪಿ ಗುಂಪು ದಾಳಿ ಮಾಡಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ.

ಅವರು ಕಾರನ್ನು ಅಡ್ಡಗಟ್ಟಿದ್ದಾರೆ, ಭಾರತ್ ಜೋಡೋ ನ್ಯಾಯ ಯಾತ್ರೆಯ ಸ್ಟಿಕ್ಕರ್‌ಗಳನ್ನು ವಿಂಡ್‌ಶೀಲ್ಡ್‌ನಿಂದ ಹರಿದು ಹಾಕಿದ್ದಾರೆ. ನೀರು ಎಸೆದು ಘೋಷಣೆಗಳನ್ನು ಕೂಗಿದ್ದಾರೆ. ಆದರೆ ನಾವು ನಮ್ಮ ಸಂಯಮವನ್ನು ಕಾಯ್ದುಕೊಂಡು, ಪುಂಡ ಪೋಕರಿಗಳಿಗೆ ಕೈ ಬೀಸಿ ಮುಂದೆ ಸಾಗಿದ್ದೇವೆ. ಇದು ನಿಸ್ಸಂದೇಹವಾಗಿ ಅಸ್ಸಾಂ ಸಿಎಂ
ಹಿಮಂತ ಬಿಸ್ವಾ ಶರ್ಮಾ ಮಾಡಿಸುತ್ತಿರುವುದು, ಇದಕ್ಕೆ ನಾವು ಬೆದರುವುದಿಲ್ಲ ಮತ್ತು ಸೈನಿಕರಾಗಿ ಮುಂದುವರಿಯುತ್ತೇವೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ ಇಂದು ನಾಗಾನ್ ಜಿಲ್ಲೆಯ ಕಡೆಗೆ ಸಾಗುತ್ತಿದೆ. ಈ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ನಾನು ಮತ್ತು ಅಸ್ಸಾಂನ ಜನರು ಸಿಎಂಗೆ ಹೆದರುವುದಿಲ್ಲ, ಭಾರತದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಯಾರು? ಉತ್ತರ ಹಿಮಂತ ಬಿಸ್ವಾ ಶರ್ಮಾ, ಇದು ಅಸ್ಸಾಂನ ಜನರು ಮತ್ತು ಇಡೀ ದೇಶಕ್ಕೆ ತಿಳಿದಿದೆ. ಇದು ರಾಹುಲ್ ಗಾಂಧಿಯ ಪ್ರಯಾಣವಲ್ಲ, ಅಸ್ಸಾಂನ ಜನರ ಪ್ರಯಾಣ ಎಂದು ನಮಗೆ ಬೆದರಿಕೆ ಹಾಕುತ್ತಿರುವವರು ತಿಳಿದುಕೊಳ್ಳಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂನ ಯುವಕರು ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ. ಇಲ್ಲಿನ ಯುವಕರು ಲಕ್ಷಗಟ್ಟಲೆ ಖರ್ಚು ಮಾಡಿ ಶಾಲಾ-ಕಾಲೇಜಿಗೆ ಹೋಗುತ್ತಾರೆ, ಆದರೆ ಅಸ್ಸಾಂನಲ್ಲಿ ಅವರಿಗೆ ಉದ್ಯೋಗ ಸಿಗುವುದಿಲ್ಲ. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿಯಿಂದ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಸಣ್ಣ ಪುಟ್ಟ ವ್ಯಾಪಾರಗಳು ಕೂಡ ಹಾಳಾಗಿದೆ. ಆಯ್ದ ಕೈಗಾರಿಕೋದ್ಯಮಿಗಳಿಗಾಗಿ ಇಡೀ ದೇಶದ ಸರ್ಕಾರ ನಡೆಯುತ್ತದೆ. ಇದರ ವಿರುದ್ಧ ನಾವು ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಅಪಹರಣಕ್ಕೊಳಗಿ 2015ರಿಂದ ನಾಪತ್ತೆಯಾಗಿರುವ ವ್ಯಕ್ತಿಯ ಕುಟುಂಬಸ್ಥರಾದ ಅಮೋನಿ ದಿರು ಪುಲ್ಲೋಮ್ ಅವರನ್ನು ಅರುಣಾಚಲ ಪ್ರದೇಶದ ರಾಜಧಾನಿ ಬಳಿಯ ಕ್ಯಾಂಪ್‌ಸೈಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

ವಕೀಲರಾದ ಪುಲ್ಲೋಮ್ ಅವರ ಮಾವ 2015ರಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಅಪಹರಣಕ್ಕೊಳಗಾಗಿದ್ದರು ಮತ್ತು ಅಂದಿನಿಂದ ಅವರು ಪತ್ತೆಯಾಗಿರಲಿಲ್ಲ. ಅವರು ರಾಹುಲ್‌ ಗಾಂಧಿ ಜೊತೆ ನೋವನ್ನು ಹಂಚಿಕೊಂಡಿದ್ದಾರೆ. ತನ್ನ ಮಾವನನ್ನು ಬೇಗ ಭಾರತಕ್ಕೆ ಕರೆಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ರಾಹುಲ್‌ ಗಾಂಧಿ ಆಕೆಯ ನೋವುಗಳನ್ನು ಆಲಿಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ: ಕಾಸರಗೋಡಿನಿಂದ-ತಿರುವನಂತಪುರಂವರೆಗೆ DYFIನಿಂದ ಮಾನವ ಸರಪಳಿ: ಲಕ್ಷಾಂತರ ಜನರು ಭಾಗಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...