Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಅಸ್ಸಾಂನಲ್ಲಿ ಜೈರಾಮ್‌ ರಮೇಶ್‌ ಕಾರಿನ ಮೇಲೆ ದಾಳಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಅಸ್ಸಾಂನಲ್ಲಿ ಜೈರಾಮ್‌ ರಮೇಶ್‌ ಕಾರಿನ ಮೇಲೆ ದಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ 8ನೇ ದಿನವಾದ ಇಂದು ಅಸ್ಸಾಂನಲ್ಲಿ ಮುಂದುವರಿದಿದ್ದು, ಸುನೀತ್‌ಪುರದ ಜುಮುಗುರಿಹತ್‌ನಲ್ಲಿ ನನ್ನ ವಾಹನದ ಮೇಲೆ ಬಿಜೆಪಿ ಗುಂಪು ದಾಳಿ ಮಾಡಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ.

ಅವರು ಕಾರನ್ನು ಅಡ್ಡಗಟ್ಟಿದ್ದಾರೆ, ಭಾರತ್ ಜೋಡೋ ನ್ಯಾಯ ಯಾತ್ರೆಯ ಸ್ಟಿಕ್ಕರ್‌ಗಳನ್ನು ವಿಂಡ್‌ಶೀಲ್ಡ್‌ನಿಂದ ಹರಿದು ಹಾಕಿದ್ದಾರೆ. ನೀರು ಎಸೆದು ಘೋಷಣೆಗಳನ್ನು ಕೂಗಿದ್ದಾರೆ. ಆದರೆ ನಾವು ನಮ್ಮ ಸಂಯಮವನ್ನು ಕಾಯ್ದುಕೊಂಡು, ಪುಂಡ ಪೋಕರಿಗಳಿಗೆ ಕೈ ಬೀಸಿ ಮುಂದೆ ಸಾಗಿದ್ದೇವೆ. ಇದು ನಿಸ್ಸಂದೇಹವಾಗಿ ಅಸ್ಸಾಂ ಸಿಎಂ
ಹಿಮಂತ ಬಿಸ್ವಾ ಶರ್ಮಾ ಮಾಡಿಸುತ್ತಿರುವುದು, ಇದಕ್ಕೆ ನಾವು ಬೆದರುವುದಿಲ್ಲ ಮತ್ತು ಸೈನಿಕರಾಗಿ ಮುಂದುವರಿಯುತ್ತೇವೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ ಇಂದು ನಾಗಾನ್ ಜಿಲ್ಲೆಯ ಕಡೆಗೆ ಸಾಗುತ್ತಿದೆ. ಈ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ನಾನು ಮತ್ತು ಅಸ್ಸಾಂನ ಜನರು ಸಿಎಂಗೆ ಹೆದರುವುದಿಲ್ಲ, ಭಾರತದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಯಾರು? ಉತ್ತರ ಹಿಮಂತ ಬಿಸ್ವಾ ಶರ್ಮಾ, ಇದು ಅಸ್ಸಾಂನ ಜನರು ಮತ್ತು ಇಡೀ ದೇಶಕ್ಕೆ ತಿಳಿದಿದೆ. ಇದು ರಾಹುಲ್ ಗಾಂಧಿಯ ಪ್ರಯಾಣವಲ್ಲ, ಅಸ್ಸಾಂನ ಜನರ ಪ್ರಯಾಣ ಎಂದು ನಮಗೆ ಬೆದರಿಕೆ ಹಾಕುತ್ತಿರುವವರು ತಿಳಿದುಕೊಳ್ಳಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂನ ಯುವಕರು ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ. ಇಲ್ಲಿನ ಯುವಕರು ಲಕ್ಷಗಟ್ಟಲೆ ಖರ್ಚು ಮಾಡಿ ಶಾಲಾ-ಕಾಲೇಜಿಗೆ ಹೋಗುತ್ತಾರೆ, ಆದರೆ ಅಸ್ಸಾಂನಲ್ಲಿ ಅವರಿಗೆ ಉದ್ಯೋಗ ಸಿಗುವುದಿಲ್ಲ. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿಯಿಂದ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಸಣ್ಣ ಪುಟ್ಟ ವ್ಯಾಪಾರಗಳು ಕೂಡ ಹಾಳಾಗಿದೆ. ಆಯ್ದ ಕೈಗಾರಿಕೋದ್ಯಮಿಗಳಿಗಾಗಿ ಇಡೀ ದೇಶದ ಸರ್ಕಾರ ನಡೆಯುತ್ತದೆ. ಇದರ ವಿರುದ್ಧ ನಾವು ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಅಪಹರಣಕ್ಕೊಳಗಿ 2015ರಿಂದ ನಾಪತ್ತೆಯಾಗಿರುವ ವ್ಯಕ್ತಿಯ ಕುಟುಂಬಸ್ಥರಾದ ಅಮೋನಿ ದಿರು ಪುಲ್ಲೋಮ್ ಅವರನ್ನು ಅರುಣಾಚಲ ಪ್ರದೇಶದ ರಾಜಧಾನಿ ಬಳಿಯ ಕ್ಯಾಂಪ್‌ಸೈಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

ವಕೀಲರಾದ ಪುಲ್ಲೋಮ್ ಅವರ ಮಾವ 2015ರಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಅಪಹರಣಕ್ಕೊಳಗಾಗಿದ್ದರು ಮತ್ತು ಅಂದಿನಿಂದ ಅವರು ಪತ್ತೆಯಾಗಿರಲಿಲ್ಲ. ಅವರು ರಾಹುಲ್‌ ಗಾಂಧಿ ಜೊತೆ ನೋವನ್ನು ಹಂಚಿಕೊಂಡಿದ್ದಾರೆ. ತನ್ನ ಮಾವನನ್ನು ಬೇಗ ಭಾರತಕ್ಕೆ ಕರೆಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ರಾಹುಲ್‌ ಗಾಂಧಿ ಆಕೆಯ ನೋವುಗಳನ್ನು ಆಲಿಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ: ಕಾಸರಗೋಡಿನಿಂದ-ತಿರುವನಂತಪುರಂವರೆಗೆ DYFIನಿಂದ ಮಾನವ ಸರಪಳಿ: ಲಕ್ಷಾಂತರ ಜನರು ಭಾಗಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...