Homeಮುಖಪುಟಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ

ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ

- Advertisement -
- Advertisement -

ಅಹಮದಾಬಾದ್: ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಪ್ರಯಾಣಿಕರಲ್ಲಿ 241 ಜನರು ಮೃತಪಟ್ಟಿರುವ ಶಂಕೆಯಿದೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದು ದೃಢವಾಗಿದೆ. ಆತನನ್ನು ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.

ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ದೃಢಪಟ್ಟಿರುವ ವ್ಯಕ್ತಿಯನ್ನು 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಅವರಿಗೆ ಅಹಮದಾಬಾದ್‌ನ ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದು ಸಾವಿನ ಸಂಖ್ಯೆಯನ್ನು ನಿಖರವಾಗಿ ಈಗ ಹೇಳಲು ಸಾಧ್ಯವಿಲ್ಲವೆಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2009ರ ಸೆಪ್ಟೆಂಬರ್​ 2ರಂದು ಬೆಲ್​ 430 ಹೆಲಿಕಾಪ್ಟರ್​ ಪತನವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ
ವೈ. ಎಸ್​ ರಾಜಶೇಖರ್​ ರೆಡ್ಡಿ ಮೃತಪಟ್ಟಿದ್ದರು. ಗುರುವಾರ (ಜೂ.12) ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

ಮಾಜಿ ಸಿಎಂ ವಿಜಯ್​ ರೂಪಾನಿಯವರು ತಮ್ಮ ಮಗಳನ್ನು ಭೇಟಿ ಮಾಡಲು ಇದೇ ವಿಮಾನದಲ್ಲಿ ಲಂಡನ್​ಗೆ ತೆರಳುತ್ತಿದ್ದರು. ವಿಜಯ್​ ರೂಪಾನಿಯವರು ಗುಜರಾತ್​ನ 16ನೇ ಮುಖ್ಯಮಂತ್ರಿಯಾಗಿದ್ದರು. ಇವರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಜೆ ವಿಮಾನದಲ್ಲಿದ್ದರು. ಸಂಜೆ ನಂತರ, ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ 241 ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘಟನೆ “ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ” ಎಂದು ಹೇಳಿದರು. ವಿಮಾನ ಟೇಕ್ ಆಫ್‌ಗೆ ಅನುಮತಿ ಪಡೆದ ಸುಮಾರು ಒಂಬತ್ತು ನಿಮಿಷಗಳ ನಂತರ ಅಪಘಾತ ಸಂಭವಿಸಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಇದಕ್ಕಾಗಿ ಏರ್ ಇಂಡಿಯಾವು 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದೆ.

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಇದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ 

ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...