Homeಮುಖಪುಟವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ.

- Advertisement -
- Advertisement -

ತಿರುವನಂತಪುರಂ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಕಂಪನಿಗೆ 50 ವರ್ಷಗಳ ಕಾಲ ಹಸ್ತಾಂತರಿಸುವ ಕೇಂದ್ರದ ನಿರ್ಧಾರವನ್ನು ಕೇರಳದ ಎಲ್‌ಡಿಎಫ್ ಸರ್ಕಾರ ತೀವ್ರವಾಗಿ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

“ಈ ನಿರ್ಣಯವು ನವದೆಹಲಿಯಲ್ಲಿ ನಡೆದಿದ್ದ ವೈಯಕ್ತಿಕ ಸಭೆಯಲ್ಲಿ ಪ್ರಧಾನಿ ಮೋದಿ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಮತ್ತು ನಿರ್ವಹಣೆಯನ್ನು ರಾಜ್ಯ ಸರ್ಕಾರ ಪ್ರಮುಖ ಪಾಲುದಾರರಾಗಿರುವ ಸ್ಪೇಷಲ್ ಪರ್ಪಸ್ ವೆಹಿಕಲ್‌ಗೆ (ಎಸ್‌ಪಿವಿ) ವರ್ಗಾಯಿಸಬೇಕೆಂಬ ಕೇರಳದ ಪುನರಾವರ್ತಿತ ಮನವಿಯನ್ನು ತಳ್ಳಿಹಾಕಿ, ಅದಾನಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಪಿಣರಾಯಿ ಹೇಳಿದ್ದಾರೆ.

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಬುಧವಾರ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಅದರಂತೆ, ಆಗಸ್ಟ್ 12ರೊಳಗೆ ಪಡೆದುಕೊಳ್ಳಬೇಕು ಎಂದು ಟೆಂಡರ್ ನಲ್ಲಿ ಷರತ್ತು ವಿಧಿಸಲಾಗಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಗಡುವನ್ನು ನವೆಂಬರ್ 12ಕ್ಕೆ  ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿದೆ.

ಈ 6 ವಿಮಾನ ನಿಲ್ದಾಣಗಳಲ್ಲಿ, 3ರ ನಿರ್ವಹಣೆಯ ಹಕ್ಕನ್ನು ಅದಾನಿ ಸಂಸ್ಥೆಗೆ ವಹಿಸುವ ಕುರಿತ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ತಿರುವನಂತಪುರಂ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಖಾಸಗಿ ಕಂಪನಿಯೊಂದರ ಪಾಲ್ಗೊಳ್ಳುವಿಕೆಯು “2003 ರಲ್ಲಿ ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಒತ್ತಿಹೇಳಿದ್ದಾರೆ.

ಕೇರಳ ಸರ್ಕಾರವು 2005 ರಲ್ಲಿ 23.57 ಎಕರೆಗಳನ್ನು ಉಚಿತವಾಗಿ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ, ಅಂತಾರಾಷ್ಟ್ರೀಯ ಟರ್ಮಿನಲ್ ನಿರ್ಮಾಣಕ್ಕಾಗಿ ಹಸ್ತಾಂತರಿಸಿತ್ತು.

ಕೇಂದ್ರ ಸಚಿವ ಸಂಪುಟ ಬುಧವಾರ ನಡೆಸಿದ “ಏಕಪಕ್ಷೀಯ ನಿರ್ಧಾರ”ದ ಅಡಿಯಲ್ಲಿ ರಾಜ್ಯ ಸರ್ಕಾರವು “ಸಂಪೂರ್ಣ ಸಹಕಾರ” ನೀಡಲು ಸಾಧ್ಯವಾಗುವುದಿಲ್ಲ ಎಂದ ವಿಜಯನ್ ಈ ಕುರಿತು ಪ್ರಧಾನಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಕೊಚ್ಚಿ ಮತ್ತು ಕಣ್ಣೂರು ವಿಮಾನ ನಿಲ್ದಾಣಗಳ ಬಗ್ಗೆಯೂ ಉಲ್ಲೇಖಿಸಿದ್ದು, ಇವುಗಳನ್ನು ಸ್ಪೇಷಲ್ ಪರ್ಪಸ್ ವೆಹಿಕಲ್‌ ಮೂಲಕ ರಾಜ್ಯ ಸರ್ಕಾರವು ನಿರ್ವಹಿಸುತ್ತಿದೆ.

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲು ಕೇರಳದ ಮುಖ್ಯಮಂತ್ರಿ ಇಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ವಿಶೇಷವೆಂದರೆ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಖಾಸಗಿ ಕಂಪನಿಗಳಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

“ಸ್ಪರ್ಧಾತ್ಮಕವಾಗಿ ಕಾರ್ಯಾಚರಣೆ ನಡೆಸುವ ಖಾಸಗಿ ಘಟಕದ ಮೂಲಕ ಈ ವಿಮಾನ ನಿಲ್ದಾಣವು ಅಭಿವೃದ್ಧಿ ಹೊಂದುತ್ತದೆ. ಆದರೆ ಭೂಮಿ ಮತ್ತು ವಿಮಾನ ನಿಲ್ದಾಣದ ಮಾಲೀಕತ್ವ ಮತ್ತು ಎಟಿಸಿಯು ಜವಾಬ್ದಾರಿ, ಭದ್ರತೆ, ಕಸ್ಟಮ್ಸ್ ಮತ್ತು ವಲಸೆಯ ಜವಾಬ್ದಾರಿಗಳು ಇನ್ನೂ ಸರ್ಕಾರಿ ಸಂಸ್ಥೆಗಳೊಂದಿಗೆ ಉಳಿದಿವೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ವಿ ಮುರಳೀಧರನ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದರು. “ಕೇಂದ್ರ ಕ್ಯಾಬಿನೆಟ್ ನಿರ್ಧಾರವು, ವಿಶ್ವ ದರ್ಜೆಯ ಪ್ರಯಾಣಿಕರ ಸೇವೆಗಳನ್ನು ಸಮಯಕ್ಕೆ ತಲುಪಿಸುತ್ತದೆ ಮತ್ತು ಸೌಲಭ್ಯಗಳನ್ನು ಸುಧಾರಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...