Homeಮುಖಪುಟವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ.

- Advertisement -
- Advertisement -

ತಿರುವನಂತಪುರಂ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಕಂಪನಿಗೆ 50 ವರ್ಷಗಳ ಕಾಲ ಹಸ್ತಾಂತರಿಸುವ ಕೇಂದ್ರದ ನಿರ್ಧಾರವನ್ನು ಕೇರಳದ ಎಲ್‌ಡಿಎಫ್ ಸರ್ಕಾರ ತೀವ್ರವಾಗಿ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

“ಈ ನಿರ್ಣಯವು ನವದೆಹಲಿಯಲ್ಲಿ ನಡೆದಿದ್ದ ವೈಯಕ್ತಿಕ ಸಭೆಯಲ್ಲಿ ಪ್ರಧಾನಿ ಮೋದಿ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಮತ್ತು ನಿರ್ವಹಣೆಯನ್ನು ರಾಜ್ಯ ಸರ್ಕಾರ ಪ್ರಮುಖ ಪಾಲುದಾರರಾಗಿರುವ ಸ್ಪೇಷಲ್ ಪರ್ಪಸ್ ವೆಹಿಕಲ್‌ಗೆ (ಎಸ್‌ಪಿವಿ) ವರ್ಗಾಯಿಸಬೇಕೆಂಬ ಕೇರಳದ ಪುನರಾವರ್ತಿತ ಮನವಿಯನ್ನು ತಳ್ಳಿಹಾಕಿ, ಅದಾನಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಪಿಣರಾಯಿ ಹೇಳಿದ್ದಾರೆ.

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಬುಧವಾರ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಅದರಂತೆ, ಆಗಸ್ಟ್ 12ರೊಳಗೆ ಪಡೆದುಕೊಳ್ಳಬೇಕು ಎಂದು ಟೆಂಡರ್ ನಲ್ಲಿ ಷರತ್ತು ವಿಧಿಸಲಾಗಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಗಡುವನ್ನು ನವೆಂಬರ್ 12ಕ್ಕೆ  ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿದೆ.

ಈ 6 ವಿಮಾನ ನಿಲ್ದಾಣಗಳಲ್ಲಿ, 3ರ ನಿರ್ವಹಣೆಯ ಹಕ್ಕನ್ನು ಅದಾನಿ ಸಂಸ್ಥೆಗೆ ವಹಿಸುವ ಕುರಿತ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ತಿರುವನಂತಪುರಂ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಖಾಸಗಿ ಕಂಪನಿಯೊಂದರ ಪಾಲ್ಗೊಳ್ಳುವಿಕೆಯು “2003 ರಲ್ಲಿ ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಒತ್ತಿಹೇಳಿದ್ದಾರೆ.

ಕೇರಳ ಸರ್ಕಾರವು 2005 ರಲ್ಲಿ 23.57 ಎಕರೆಗಳನ್ನು ಉಚಿತವಾಗಿ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ, ಅಂತಾರಾಷ್ಟ್ರೀಯ ಟರ್ಮಿನಲ್ ನಿರ್ಮಾಣಕ್ಕಾಗಿ ಹಸ್ತಾಂತರಿಸಿತ್ತು.

ಕೇಂದ್ರ ಸಚಿವ ಸಂಪುಟ ಬುಧವಾರ ನಡೆಸಿದ “ಏಕಪಕ್ಷೀಯ ನಿರ್ಧಾರ”ದ ಅಡಿಯಲ್ಲಿ ರಾಜ್ಯ ಸರ್ಕಾರವು “ಸಂಪೂರ್ಣ ಸಹಕಾರ” ನೀಡಲು ಸಾಧ್ಯವಾಗುವುದಿಲ್ಲ ಎಂದ ವಿಜಯನ್ ಈ ಕುರಿತು ಪ್ರಧಾನಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಕೊಚ್ಚಿ ಮತ್ತು ಕಣ್ಣೂರು ವಿಮಾನ ನಿಲ್ದಾಣಗಳ ಬಗ್ಗೆಯೂ ಉಲ್ಲೇಖಿಸಿದ್ದು, ಇವುಗಳನ್ನು ಸ್ಪೇಷಲ್ ಪರ್ಪಸ್ ವೆಹಿಕಲ್‌ ಮೂಲಕ ರಾಜ್ಯ ಸರ್ಕಾರವು ನಿರ್ವಹಿಸುತ್ತಿದೆ.

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲು ಕೇರಳದ ಮುಖ್ಯಮಂತ್ರಿ ಇಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ವಿಶೇಷವೆಂದರೆ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಖಾಸಗಿ ಕಂಪನಿಗಳಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

“ಸ್ಪರ್ಧಾತ್ಮಕವಾಗಿ ಕಾರ್ಯಾಚರಣೆ ನಡೆಸುವ ಖಾಸಗಿ ಘಟಕದ ಮೂಲಕ ಈ ವಿಮಾನ ನಿಲ್ದಾಣವು ಅಭಿವೃದ್ಧಿ ಹೊಂದುತ್ತದೆ. ಆದರೆ ಭೂಮಿ ಮತ್ತು ವಿಮಾನ ನಿಲ್ದಾಣದ ಮಾಲೀಕತ್ವ ಮತ್ತು ಎಟಿಸಿಯು ಜವಾಬ್ದಾರಿ, ಭದ್ರತೆ, ಕಸ್ಟಮ್ಸ್ ಮತ್ತು ವಲಸೆಯ ಜವಾಬ್ದಾರಿಗಳು ಇನ್ನೂ ಸರ್ಕಾರಿ ಸಂಸ್ಥೆಗಳೊಂದಿಗೆ ಉಳಿದಿವೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ವಿ ಮುರಳೀಧರನ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದರು. “ಕೇಂದ್ರ ಕ್ಯಾಬಿನೆಟ್ ನಿರ್ಧಾರವು, ವಿಶ್ವ ದರ್ಜೆಯ ಪ್ರಯಾಣಿಕರ ಸೇವೆಗಳನ್ನು ಸಮಯಕ್ಕೆ ತಲುಪಿಸುತ್ತದೆ ಮತ್ತು ಸೌಲಭ್ಯಗಳನ್ನು ಸುಧಾರಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...