Homeಮುಖಪುಟವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ.

- Advertisement -
- Advertisement -

ತಿರುವನಂತಪುರಂ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಕಂಪನಿಗೆ 50 ವರ್ಷಗಳ ಕಾಲ ಹಸ್ತಾಂತರಿಸುವ ಕೇಂದ್ರದ ನಿರ್ಧಾರವನ್ನು ಕೇರಳದ ಎಲ್‌ಡಿಎಫ್ ಸರ್ಕಾರ ತೀವ್ರವಾಗಿ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

“ಈ ನಿರ್ಣಯವು ನವದೆಹಲಿಯಲ್ಲಿ ನಡೆದಿದ್ದ ವೈಯಕ್ತಿಕ ಸಭೆಯಲ್ಲಿ ಪ್ರಧಾನಿ ಮೋದಿ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಮತ್ತು ನಿರ್ವಹಣೆಯನ್ನು ರಾಜ್ಯ ಸರ್ಕಾರ ಪ್ರಮುಖ ಪಾಲುದಾರರಾಗಿರುವ ಸ್ಪೇಷಲ್ ಪರ್ಪಸ್ ವೆಹಿಕಲ್‌ಗೆ (ಎಸ್‌ಪಿವಿ) ವರ್ಗಾಯಿಸಬೇಕೆಂಬ ಕೇರಳದ ಪುನರಾವರ್ತಿತ ಮನವಿಯನ್ನು ತಳ್ಳಿಹಾಕಿ, ಅದಾನಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಪಿಣರಾಯಿ ಹೇಳಿದ್ದಾರೆ.

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಬುಧವಾರ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಅದರಂತೆ, ಆಗಸ್ಟ್ 12ರೊಳಗೆ ಪಡೆದುಕೊಳ್ಳಬೇಕು ಎಂದು ಟೆಂಡರ್ ನಲ್ಲಿ ಷರತ್ತು ವಿಧಿಸಲಾಗಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಗಡುವನ್ನು ನವೆಂಬರ್ 12ಕ್ಕೆ  ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿದೆ.

ಈ 6 ವಿಮಾನ ನಿಲ್ದಾಣಗಳಲ್ಲಿ, 3ರ ನಿರ್ವಹಣೆಯ ಹಕ್ಕನ್ನು ಅದಾನಿ ಸಂಸ್ಥೆಗೆ ವಹಿಸುವ ಕುರಿತ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ತಿರುವನಂತಪುರಂ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಖಾಸಗಿ ಕಂಪನಿಯೊಂದರ ಪಾಲ್ಗೊಳ್ಳುವಿಕೆಯು “2003 ರಲ್ಲಿ ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ” ಎಂದು ಪಿಣರಾಯಿ ವಿಜಯನ್ ಒತ್ತಿಹೇಳಿದ್ದಾರೆ.

ಕೇರಳ ಸರ್ಕಾರವು 2005 ರಲ್ಲಿ 23.57 ಎಕರೆಗಳನ್ನು ಉಚಿತವಾಗಿ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ, ಅಂತಾರಾಷ್ಟ್ರೀಯ ಟರ್ಮಿನಲ್ ನಿರ್ಮಾಣಕ್ಕಾಗಿ ಹಸ್ತಾಂತರಿಸಿತ್ತು.

ಕೇಂದ್ರ ಸಚಿವ ಸಂಪುಟ ಬುಧವಾರ ನಡೆಸಿದ “ಏಕಪಕ್ಷೀಯ ನಿರ್ಧಾರ”ದ ಅಡಿಯಲ್ಲಿ ರಾಜ್ಯ ಸರ್ಕಾರವು “ಸಂಪೂರ್ಣ ಸಹಕಾರ” ನೀಡಲು ಸಾಧ್ಯವಾಗುವುದಿಲ್ಲ ಎಂದ ವಿಜಯನ್ ಈ ಕುರಿತು ಪ್ರಧಾನಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಕೊಚ್ಚಿ ಮತ್ತು ಕಣ್ಣೂರು ವಿಮಾನ ನಿಲ್ದಾಣಗಳ ಬಗ್ಗೆಯೂ ಉಲ್ಲೇಖಿಸಿದ್ದು, ಇವುಗಳನ್ನು ಸ್ಪೇಷಲ್ ಪರ್ಪಸ್ ವೆಹಿಕಲ್‌ ಮೂಲಕ ರಾಜ್ಯ ಸರ್ಕಾರವು ನಿರ್ವಹಿಸುತ್ತಿದೆ.

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲು ಕೇರಳದ ಮುಖ್ಯಮಂತ್ರಿ ಇಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ವಿಶೇಷವೆಂದರೆ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಖಾಸಗಿ ಕಂಪನಿಗಳಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

“ಸ್ಪರ್ಧಾತ್ಮಕವಾಗಿ ಕಾರ್ಯಾಚರಣೆ ನಡೆಸುವ ಖಾಸಗಿ ಘಟಕದ ಮೂಲಕ ಈ ವಿಮಾನ ನಿಲ್ದಾಣವು ಅಭಿವೃದ್ಧಿ ಹೊಂದುತ್ತದೆ. ಆದರೆ ಭೂಮಿ ಮತ್ತು ವಿಮಾನ ನಿಲ್ದಾಣದ ಮಾಲೀಕತ್ವ ಮತ್ತು ಎಟಿಸಿಯು ಜವಾಬ್ದಾರಿ, ಭದ್ರತೆ, ಕಸ್ಟಮ್ಸ್ ಮತ್ತು ವಲಸೆಯ ಜವಾಬ್ದಾರಿಗಳು ಇನ್ನೂ ಸರ್ಕಾರಿ ಸಂಸ್ಥೆಗಳೊಂದಿಗೆ ಉಳಿದಿವೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ವಿ ಮುರಳೀಧರನ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದರು. “ಕೇಂದ್ರ ಕ್ಯಾಬಿನೆಟ್ ನಿರ್ಧಾರವು, ವಿಶ್ವ ದರ್ಜೆಯ ಪ್ರಯಾಣಿಕರ ಸೇವೆಗಳನ್ನು ಸಮಯಕ್ಕೆ ತಲುಪಿಸುತ್ತದೆ ಮತ್ತು ಸೌಲಭ್ಯಗಳನ್ನು ಸುಧಾರಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...