Homeಅಂಕಣಗಳುವಿಮಾನ ನಿಲ್ದಾಣ ತೆರೆಯಿತು, ವಿ.ಐ.ಎಸ್.ಎಲ್ ಮುಚ್ಚಿತು

ವಿಮಾನ ನಿಲ್ದಾಣ ತೆರೆಯಿತು, ವಿ.ಐ.ಎಸ್.ಎಲ್ ಮುಚ್ಚಿತು

- Advertisement -
- Advertisement -

ಶಿವಮೊಗ್ಗದ ಕಡೆಯಿಂದ ಎರಡು ಸುದ್ದಿಗಳು ಬಂದಿವೆ. ಮೊದಲನೆಯದಾಗಿ ನಾಲ್ಕು ನೂರು ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ವೇಗವಾಗಿ ರೆಡಿಯಾಗಿದೆ. ಅದೇ ಟೈಮಿಗೆ ಸರಿಯಾಗಿ ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಐರನ್ ಸ್ಟೀಲ್ ಕಂಪನಿ ಮುಚ್ಚುತ್ತಿದೆ. ವಿಶ್ವೇಶ್ವರಯ್ಯನವರೂ ಕೂಡ ನೂರು ವರ್ಷ ಬದುಕಿದ್ದರು. ಕಾರ್ಖಾನೆಗೂ ನೂರು ವರ್ಷ ತುಂಬಿದೆ. ಆದ್ರೂ ಯಾರೂ ಉಳಿಸಿಕೊಳ್ಳುವುದಕ್ಕಾಗಲಿಲ್ಲ ಎನ್ನುತ್ತಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ವೇಗದ ರೈಲು ಬಂದಿದೆ. ಕೇವಲ ಐದು ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಿಂದ ಬೆಂಗಳೂರು ತಲುಪುವ ರೈಲುಗಳಿವೆ. ಮನಸ್ಸು ಮಾಡಿದ್ದರೆ ಮೂರು ಗಂಟೆಯ ಅವಧಿಯಲ್ಲಿ ತಲುಪುವ ರೈಲು ತರಬಹುದಿತ್ತು. ಆಗ ವಿಮಾನ ನಿಲ್ದಾಣಕ್ಕೆ ಸುರಿಯುವ ನಾಲ್ಕು ನೂರು ಕೋಟಿಯನ್ನು ವಿ.ಐ.ಎಸ್.ಎಲ್‌ಗೆ ವಿನಿಯೋಗಿಸಿ ಸಾವಿರಾರು ಕಾರ್ಮಿಕರನ್ನು ಉಳಿಸಿಕೊಳ್ಳಬಹುದಿತ್ತು. ಆದರೇನು ಈ ರಾಜಕಾರಣಿಗಳಿಗೆ ಬಡವರ ಹೊಟ್ಟೆಗಿಂತ, ಅವರಿಂದ ದೂರವಿದ್ದು ಆಕಾಶದಲ್ಲಿ ಹಾರಾಡುವ ಚಪಲ. ಈಗಾಗಲೇ ಅರಗ ಜ್ಞಾನೇಂದ್ರರ ಮುಂದಾಳತ್ವದಲ್ಲಿ ಎಂ.ಪಿ.ಎಂ (ಮೈಸೂರ್ ಪೇಪರ್ ಮಿಲ್ಸ್) ಬಾಗಿ ಹಾಕಿ ಅದನ್ನು ಸ್ಮಾರಕವನ್ನಾಗಿಸಲಾಗಿದೆ ಈಗ ವಿ.ಐ.ಎಸ್.ಎಲ್ ಸರದಿ. ಅಂತೂ ಎಡೂರಪ್ಪನ ಕಾಲದಲ್ಲಿ ಭದ್ರಾವತಿಯ ಎರಡು ಪ್ರಮುಖ ಕಾರ್ಖಾನೆಗಳು ಗುಜರಿಯ ತಾಣವಾಗಿ ಹೋದವಲ್ಲಾ ಥೂತ್ತೇರಿ.

******

ಎಡೂರಪ್ಪ ಶಿವಮೊಗ್ಗಕ್ಕೆ ಹೋದ ಕೂಡಲೇ ಹೆಲಿಪ್ಯಾಡಿಗೆ ಓಡುವ ಮಾರಿಕೊಂಡ ಮಾಧ್ಯಮದವರು, ಅವರ ಹಿಂದೆಯೇ ಹೋಗಿ ಮನೆಯ ವರಾಂಡದಲ್ಲಿ ಠಳಾಯಿಸಿ ಎಡೂರಪ್ಪನವರ ಆತಿಥ್ಯ ಸ್ವೀಕರಿಸಿ ಅವರು ಊರು ಬಿಡುವವರೆಗೂ ಸುತ್ತುವರೆದಿದ್ದರೂ, ಅಪ್ಪಿತಪ್ಪಿ ವಿ.ಐ.ಎಸ್.ಎಲ್ ಕತೆ ಕೇಳಲಿಲ್ಲವಂತಲ್ಲಾ. ಹಾಳಾಗಿ ಹೋಗಲಿ ಭದ್ರಾವತಿಗಾದರೂ ಹೋಗಿ ಕೊನೆಯುಸಿರಿನ ಕಾರ್ಖಾನೆಯ ಅಂತಿಮ ದರ್ಶನ ಪಡೆಯಬಹುದಿತ್ತಲ್ಲಾ. ಏಕೆಂದರೆ ವಿ.ಐ.ಎಸ್.ಎಲ್‌ನ ಕಾರ್ಮಿಕರು ಬರಿ ಕಾರ್ಮಿಕರಾಗಿರಲಿಲ್ಲ. ನಮ್ಮ ಸಂಸ್ಕೃತಿಯ ವಕ್ತಾರರಾಗಿದ್ದರು. ಅವರು ಸ್ಥಾಪಿಸಿಕೊಂಡ ಸಂಘದಿಂದ ನಾಟಕ ಕಲಿತು ಆಡಿದರು, ಇಡೀ ನಾಡಿನಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ತಂದರು. ಅವರಾಡಿದಂತೆ ಜೋಕುಮಾರಸ್ವಾಮಿ ಮತ್ತು ಹಯವದನ ನಾಟಕ ಇನ್ನಾರೂ ಆಡಲಿಲ್ಲ. ಕೆಲವರು ಸಿನಿಮಾಕ್ಕೂ ಹೋದರು. ನೂರು ವರ್ಷದಲ್ಲಿ ಭವ್ಯ ಇತಿಹಾಸ ಹೊಂದಿದ ವಿ.ಐ.ಎಸ್.ಎಲ್‌ಗೆ ಕಬ್ಬಿಣದ ಅದಿರಿನ ಕೊರತೆಯಿರಲಿಲ್ಲ. ನಮ್ಮ ನಾಡಿನ ಗಣಿ ಗುಡ್ಡಗಳು ಚೀನಾದಲ್ಲಿ ಶೇಖರಗೊಂಡಿರುವಾಗ ವಿ.ಐ.ಎಸ್.ಎಲ್‌ಗೆ ಅದಿರಿನ ಕೊರತೆಯಿತ್ತೇ? ಆದರೇನು, ನಮ್ಮ ರಾಜಕಾರಣಿಗಳು ಎಲ್ಲವನ್ನು ಸರ್ವನಾಶ ಮಾಡುತ್ತಿದ್ದಾರೆ. ಜನರ ಮನಸ್ಸನ್ನ ಬೇರೆಡೆಗೆ ತಿರುಗಿಸಲು ಉತ್ಸವ ಮಾಡುತ್ತಿದ್ದಾರೆ. ಇದೇ ಎಡೂರಪ್ಪನವರು ಮಾಡಿರುವ ದಾಖಲೆಗಳಲ್ಲಿ ಎಂ.ಪಿ.ಎಂ, ವಿ.ಐ.ಎಸ್.ಎಲ್ ಮುಳುಗಿ ಹೋದ ಘಟನೆಗಳೂ ಸೇರಿವೆಯಂತಲ್ಲಾ, ಥೂತ್ತೇರಿ.

*****

ಬ್ರಾಹ್ಮಣ್ಯದ ಕೈಗೆ ಸಿಕ್ಕಿ ಸಾವಿರಾರು ವರ್ಷದಿಂದ ಶೂದ್ರ ಸಮೂಹ ನರಳುತ್ತಿರುವಾಗ ಬ್ರಾಹ್ಮಣರು ಎಂದೂ ವಿಶ್ವಾಸದ್ರೋಹಿಗಳಲ್ಲ ಎಂದು ಸೋದೆ ಮಠದ ವಿಶ್ವವಲ್ಲಭ ತೀರ್ಥಸ್ವಾಮಿ ಘೋಷಿಸಿದ್ದಾರಲ್ಲಾ. ಈ ಬಗ್ಗೆ ಅವರನ್ನೇ ಕೇಳಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್, “ತಪ್ಪು ನೋಡದೆ ಬಂದೆಯಾ ಎನ್ನಯ ತಂದೆ ತಪ್ಪನೊಡದೆ ಬಂದೆಯಾ…..”

“ಹಲೋ ಯಾರು?”

“ಸ್ವಾಮೀಜಿ, ನಾನು ಯಾಹು ಅಂತ ಪತ್ರಕರ್ತ.”

“ಪತ್ರಕರ್ತರು ಅಂದ ಮೇಲೆ ಪ್ರಶ್ನೆ ವುಂಟಲ್ಲಾ ಕೇಳಿ.”

“ಏನಿಲ್ಲ ತಾವು ಈಚೆಗೆ ಬ್ರಾಹ್ಮಣರು ವಿಶ್ವಾಸದ್ರೋಹಿಗಳಲ್ಲ ಅಂತ ಹೇಳೀದ್ದಿರಿ..”

“ಹೌದು ಹೇಳಿದ್ದೇನೆ.”

“ಈ ಮಾತು ಅಪರಾಧವಾಗುತ್ತೆ ಸ್ವಾಮಿ.”

“ಯಂತಕ್ಕೆ?”

“ನಮ್ಮ ಶ್ರೇಣೀಕರಣದ ವ್ಯವಸ್ಥೆಯಲ್ಲಿ ಬ್ರಾಹ್ಮಣ ಹಿಂದೂ ಧರ್ಮದ ಕಳಸ ಪ್ರಾಯವಾಗಿ ತುದೀಲಿದೆ, ಇನ್ನುಳಿದ ಜಾತಿಗಳು ಕೆಳಗಿವೆ. ಬ್ರಾಹ್ಮಣ ವಿಶ್ವಾಸದ್ರೋಹಿಯಲ್ಲ ಅಂದಕೂಡಲೇ ವಿಶ್ವಾಸದ್ರೋಹದ ಜಾತಿ ಹುಟ್ಟಿಕೊಳ್ಳುತ್ತೆ ಅದ್ಯಾವುದು ಅಂತ?”

“ನಾನು ನಮ್ಮ ಬ್ರಾಹ್ಮಣರ ಬಗ್ಗೆ ಹೇಳಿದ್ದು.”

“ಅದೇ ಸ್ವಾಮಿ ನೀವು ವಿಶ್ವಾಸಿಗರು ಅನ್ನದಾದ್ರೆ ವಿಶ್ವಾಸದ್ರೋಹಿಗಳು ಯಾರಾದರೂ ಇರಬೇಕಲ್ಲವ?”

“ಅದು ನಮಗೆ ಗೊತ್ತಿಲ್ಲ.”

“ಮತ್ತೆ ಬ್ರಾಹ್ಮಣ ಬುದ್ಧಿಶಕ್ತಿಯಿಂದ ಕೆಲಸ ಮಾಡ್ತನೆ ಅಂದಿದ್ದಿರಿ.”

“ಅದು ಹೌದು”

“ಹಾಗಾದರೆ ಉಳಿದವರು ಯಾವ ಶಕ್ತಿ ಬಳಸಿ ಕೆಲಸ ಮಾಡ್ತರೆ?”

“ಅದು ನನಗೆ ಗೊತ್ತಿಲ್ಲ.”

“ಅಂಬೇಡ್ಕರ್ ಯಾವ ಶಕ್ತಿ ಬಳಸಿ ಸಂವಿಧಾನ ಬರೆದರು?”

“ನಾನು ಹೇಳಿದ ಅರ್ಥ ಬೇರೆ.”

“ಯಾವ ಅರ್ಥನೂ ಇಲ್ಲ. ಬ್ರಾಹ್ಮಣ ವಿಶ್ವಾಸದ್ರೋಹಿಯಲ್ಲ, ಆತ ಬುದ್ಧಿಶಕ್ತಿಯಿಂದ ಕೆಲಸ ಮಾಡ್ತನೆ ಅನ್ನೊ ನಿಮ್ಮ ಮಾತನ್ನ ವಿಸ್ತರಿಸೋದಾದ್ರೆ ತನ್ನ ಬುದ್ಧಿಶಕ್ತಿಯಿಂದ ವಿಶ್ವಾಸದ್ರೋಹ ಕಾಣದಂಗೆ ಮಾಡ್ತನಲ್ಲವೆ?”

“ಇದು ಅತಿಯಾಯ್ತು.”

“ಇಲ್ಲ ಸ್ವಾಮಿ ಈ ರಾಷ್ಟ್ರದಲ್ಲಿ ವಿಶ್ವಾಸದ್ರೋಹ ಮಾಡಿದ ನೂರಾರು ಬ್ರಾಹ್ಮಣರ ಪಟ್ಟಿಕೊಡಬಲ್ಲೆ. ಆ ಪಟ್ಟಿ ವಳಗಡೆ ನಿಮ್ಮ ಉಡುಪಿ ಮಠದ ಯತಿಗಳೂ ಅವುರೆ. ರಾಮಚಂದ್ರಾಪುರ ಮಠದ ಯತಿಗಳಂತೂ ಮುಂಚೂಣಿಲವುರೆ. ರಾಜಕೀಯವಾಗಿ ನಿಮಗೆ ಉತ್ತರ ಕೊಡದಾದ್ರೆ ರಾಮಕೃಷ್ಣ ಹೆಗಡೆ ಬ್ರಾಹ್ಮಣರಲ್ಲವ?”

“ಅವರು ಹವ್ಯಕರು.”

“ಹವ್ಯಕ ಬ್ರಾಹ್ಮಣರು ಅನ್ನಿ. ಉಪಪಂಗಡದ ವಿಷಯ ತೆಗೆದು ನುಣುಚಿಕೊಬೇಡಿ.”

“ಇಲ್ಲ ಹೇಳಿ.”

“ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.”

“ಹೌದು ಆಗಿದ್ದರು.”

“ಚುನಾವಣೆಲಿ ದೇವೇಗೌಡ್ರು ಬಂಗಾರಪ್ಪ ಇಡೀ ನಾಡನ್ನ ತಿರುಗಿ ಅವರಿಗಾಗಿ ಮತ ಕೇಳಿದ್ರು.”

“ನನಗೆ ಗೊತ್ತಿಲ್ಲ.”

“ಅದಕ್ಕೆ ಐತಿಹಾಸಿಕ ದಾಖಲೆಗಳಿವೆ ಕೇಳಿ. ಆಗ ಜನತಾರಂಗ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಆಯ್ಕೆ ಮಾಡುವಾಗ ಹೆಗಡೆ ಮುಂಚೂಣಿಗೆ ಬಂದ್ರು.”

“ಅವರ ಬುದ್ಧಿಶಕ್ತಿ ದೊಡ್ಡದಿತ್ತು. ಅದಕ್ಕೆ ಬಂದರು.”

“ಆಯ್ತು ಅವರ ಬುದ್ಧಿಶಕ್ತಿ ಬಗ್ಗೆ ಎಲ್ಲರಿಗೂ ಗೌರವ ಇತ್ತು. ಆಗ ಭಾರತದ ಪಾದಯಾತ್ರೆ ಮಾಡುತಿದ್ದ ಚಂದ್ರಶೇಖರ್ ಕರ್ನಾಟಕವನ್ನ ಸರಿದಾರಿಗೆ ತಂದು ಕೇಂದ್ರಕ್ಕೆ ಬನ್ನಿ. ದೇವೇಗೌಡರನ್ನ ಚೆನ್ನಾಗಿ ನೋಡಿಕೊಳ್ಳಿ ಅಂತ ಹೇಳಿದ್ರು.”

“ನನಗೆ ಗೊತ್ತಿಲ್ಲ.”

“ಗೊತ್ತಿಲ್ಲ ಅಂದ್ರೆ ಕೇಳಿ; ಮುಂದೆ ನಿಮ್ಮ ಹೆಗಡೆ ದೇವೇಗೌಡರ ವಿರುದ್ದ ಪಿತೂರಿ ಮಾಡಿ ಅವರ ವಿರುದ್ಧ ತನಿಖಾ ಆಯೋಗ ಮಾಡಿದ್ರು.”

“ಇದೂ ಕೂಡ ನನಗೆ ಗೊತ್ತಿಲ್ಲ.”

“ಗೊತ್ತಿಲ್ಲದ ಮ್ಯಾಲೆ ಸಾರಾಸಗಟು ನಮ್ಮವರು ದ್ರೋಹಿಗಳಲ್ಲ ಅಂತ ಯಾಕೆ ಪ್ರವಚನ ಕೊಡ್ತೀರಿ? ನಿಮ್ಮ ಕೆಲವು ಮಠಗಳಲ್ಲಿರೋ ಕಾಮುಕರು ಗೋಮುಖರು ಏನೇನು ಮಾಡ್ತ ಅವುರೆ ಅಂತ ದಾಖಲೆ ಕೊಡ್ಲಾ?”

“ನಮಗೆ ಯಂತಕ್ಕೆ ಅದು?”

“ಇರಲಿ, ಮುಂದೆ ನೋಡಿಕಂಡು ಮಾತಾಡಿ. ಒಳ್ಳೆಯ ನಡವಳಿಕೆ ಯಾವ ಜನಾಂಗದ ಸೊತ್ತು ಅಲ್ಲ, ಹಾಗೇನೆ ನೀಚತನವೂ ಯಾವ ಜನಾಂಗದ ಸೊತ್ತೂ ಅಲ್ಲ. ಎಲ್ಲ ಜಾತಿಗಳಲ್ಲಿ ಒಳ್ಳೆತನ ಕೆಟ್ಟತನ ಸಮಾನವಾಗಿರತ್ತೆ. ಕಾಲಮಾನದ ಕಾರಣಕ್ಕೆ ಕೆಟ್ಟತನ ಎಲ್ಲರಲ್ಲೂ ಜಾಸ್ತಿಯಾಗ್ತಾ ಇದೆ. ಇದಕ್ಕೆ ಕಾರಣವನ್ನು ನಿಮ್ಮಂತವರು ಕಂಡು ಹಿಡಿಯಬೇಕು, ಅದು ಬಿಟ್ಟು ನಮ್ಮವರು ಸತ್ಯವಂತರು, ನೀತಿವಂತರು, ಧರ್ಮವಂತರು, ಬುದ್ಧಿವಂತರು ಅಂತ ಬೊಬ್ಬೆ ಹೊಡದ್ರೆ ನೀವು ಹಾಸ್ಯಾಸ್ಪದವಾಗ್ತೀರಿ. ರಿಪೇರಿ ಸಾಧ್ಯವಾಗದ ಸ್ಥಿತಿ ತಲುಪ್ತಿರಿ.”

“ಜಗದ್ಗುರುಗಳಿಗೆ ಹೀಗೆ ಹೇಳುವುದು ಬೇಡ.”

“ತಮ್ಮದ್ಯಾವ ಜಗತ್ತೂ!”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...