Homeಅಂಕಣಗಳುವಿಮಾನ ನಿಲ್ದಾಣ ತೆರೆಯಿತು, ವಿ.ಐ.ಎಸ್.ಎಲ್ ಮುಚ್ಚಿತು

ವಿಮಾನ ನಿಲ್ದಾಣ ತೆರೆಯಿತು, ವಿ.ಐ.ಎಸ್.ಎಲ್ ಮುಚ್ಚಿತು

- Advertisement -
- Advertisement -

ಶಿವಮೊಗ್ಗದ ಕಡೆಯಿಂದ ಎರಡು ಸುದ್ದಿಗಳು ಬಂದಿವೆ. ಮೊದಲನೆಯದಾಗಿ ನಾಲ್ಕು ನೂರು ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ವೇಗವಾಗಿ ರೆಡಿಯಾಗಿದೆ. ಅದೇ ಟೈಮಿಗೆ ಸರಿಯಾಗಿ ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಐರನ್ ಸ್ಟೀಲ್ ಕಂಪನಿ ಮುಚ್ಚುತ್ತಿದೆ. ವಿಶ್ವೇಶ್ವರಯ್ಯನವರೂ ಕೂಡ ನೂರು ವರ್ಷ ಬದುಕಿದ್ದರು. ಕಾರ್ಖಾನೆಗೂ ನೂರು ವರ್ಷ ತುಂಬಿದೆ. ಆದ್ರೂ ಯಾರೂ ಉಳಿಸಿಕೊಳ್ಳುವುದಕ್ಕಾಗಲಿಲ್ಲ ಎನ್ನುತ್ತಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ವೇಗದ ರೈಲು ಬಂದಿದೆ. ಕೇವಲ ಐದು ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಿಂದ ಬೆಂಗಳೂರು ತಲುಪುವ ರೈಲುಗಳಿವೆ. ಮನಸ್ಸು ಮಾಡಿದ್ದರೆ ಮೂರು ಗಂಟೆಯ ಅವಧಿಯಲ್ಲಿ ತಲುಪುವ ರೈಲು ತರಬಹುದಿತ್ತು. ಆಗ ವಿಮಾನ ನಿಲ್ದಾಣಕ್ಕೆ ಸುರಿಯುವ ನಾಲ್ಕು ನೂರು ಕೋಟಿಯನ್ನು ವಿ.ಐ.ಎಸ್.ಎಲ್‌ಗೆ ವಿನಿಯೋಗಿಸಿ ಸಾವಿರಾರು ಕಾರ್ಮಿಕರನ್ನು ಉಳಿಸಿಕೊಳ್ಳಬಹುದಿತ್ತು. ಆದರೇನು ಈ ರಾಜಕಾರಣಿಗಳಿಗೆ ಬಡವರ ಹೊಟ್ಟೆಗಿಂತ, ಅವರಿಂದ ದೂರವಿದ್ದು ಆಕಾಶದಲ್ಲಿ ಹಾರಾಡುವ ಚಪಲ. ಈಗಾಗಲೇ ಅರಗ ಜ್ಞಾನೇಂದ್ರರ ಮುಂದಾಳತ್ವದಲ್ಲಿ ಎಂ.ಪಿ.ಎಂ (ಮೈಸೂರ್ ಪೇಪರ್ ಮಿಲ್ಸ್) ಬಾಗಿ ಹಾಕಿ ಅದನ್ನು ಸ್ಮಾರಕವನ್ನಾಗಿಸಲಾಗಿದೆ ಈಗ ವಿ.ಐ.ಎಸ್.ಎಲ್ ಸರದಿ. ಅಂತೂ ಎಡೂರಪ್ಪನ ಕಾಲದಲ್ಲಿ ಭದ್ರಾವತಿಯ ಎರಡು ಪ್ರಮುಖ ಕಾರ್ಖಾನೆಗಳು ಗುಜರಿಯ ತಾಣವಾಗಿ ಹೋದವಲ್ಲಾ ಥೂತ್ತೇರಿ.

******

ಎಡೂರಪ್ಪ ಶಿವಮೊಗ್ಗಕ್ಕೆ ಹೋದ ಕೂಡಲೇ ಹೆಲಿಪ್ಯಾಡಿಗೆ ಓಡುವ ಮಾರಿಕೊಂಡ ಮಾಧ್ಯಮದವರು, ಅವರ ಹಿಂದೆಯೇ ಹೋಗಿ ಮನೆಯ ವರಾಂಡದಲ್ಲಿ ಠಳಾಯಿಸಿ ಎಡೂರಪ್ಪನವರ ಆತಿಥ್ಯ ಸ್ವೀಕರಿಸಿ ಅವರು ಊರು ಬಿಡುವವರೆಗೂ ಸುತ್ತುವರೆದಿದ್ದರೂ, ಅಪ್ಪಿತಪ್ಪಿ ವಿ.ಐ.ಎಸ್.ಎಲ್ ಕತೆ ಕೇಳಲಿಲ್ಲವಂತಲ್ಲಾ. ಹಾಳಾಗಿ ಹೋಗಲಿ ಭದ್ರಾವತಿಗಾದರೂ ಹೋಗಿ ಕೊನೆಯುಸಿರಿನ ಕಾರ್ಖಾನೆಯ ಅಂತಿಮ ದರ್ಶನ ಪಡೆಯಬಹುದಿತ್ತಲ್ಲಾ. ಏಕೆಂದರೆ ವಿ.ಐ.ಎಸ್.ಎಲ್‌ನ ಕಾರ್ಮಿಕರು ಬರಿ ಕಾರ್ಮಿಕರಾಗಿರಲಿಲ್ಲ. ನಮ್ಮ ಸಂಸ್ಕೃತಿಯ ವಕ್ತಾರರಾಗಿದ್ದರು. ಅವರು ಸ್ಥಾಪಿಸಿಕೊಂಡ ಸಂಘದಿಂದ ನಾಟಕ ಕಲಿತು ಆಡಿದರು, ಇಡೀ ನಾಡಿನಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ತಂದರು. ಅವರಾಡಿದಂತೆ ಜೋಕುಮಾರಸ್ವಾಮಿ ಮತ್ತು ಹಯವದನ ನಾಟಕ ಇನ್ನಾರೂ ಆಡಲಿಲ್ಲ. ಕೆಲವರು ಸಿನಿಮಾಕ್ಕೂ ಹೋದರು. ನೂರು ವರ್ಷದಲ್ಲಿ ಭವ್ಯ ಇತಿಹಾಸ ಹೊಂದಿದ ವಿ.ಐ.ಎಸ್.ಎಲ್‌ಗೆ ಕಬ್ಬಿಣದ ಅದಿರಿನ ಕೊರತೆಯಿರಲಿಲ್ಲ. ನಮ್ಮ ನಾಡಿನ ಗಣಿ ಗುಡ್ಡಗಳು ಚೀನಾದಲ್ಲಿ ಶೇಖರಗೊಂಡಿರುವಾಗ ವಿ.ಐ.ಎಸ್.ಎಲ್‌ಗೆ ಅದಿರಿನ ಕೊರತೆಯಿತ್ತೇ? ಆದರೇನು, ನಮ್ಮ ರಾಜಕಾರಣಿಗಳು ಎಲ್ಲವನ್ನು ಸರ್ವನಾಶ ಮಾಡುತ್ತಿದ್ದಾರೆ. ಜನರ ಮನಸ್ಸನ್ನ ಬೇರೆಡೆಗೆ ತಿರುಗಿಸಲು ಉತ್ಸವ ಮಾಡುತ್ತಿದ್ದಾರೆ. ಇದೇ ಎಡೂರಪ್ಪನವರು ಮಾಡಿರುವ ದಾಖಲೆಗಳಲ್ಲಿ ಎಂ.ಪಿ.ಎಂ, ವಿ.ಐ.ಎಸ್.ಎಲ್ ಮುಳುಗಿ ಹೋದ ಘಟನೆಗಳೂ ಸೇರಿವೆಯಂತಲ್ಲಾ, ಥೂತ್ತೇರಿ.

*****

ಬ್ರಾಹ್ಮಣ್ಯದ ಕೈಗೆ ಸಿಕ್ಕಿ ಸಾವಿರಾರು ವರ್ಷದಿಂದ ಶೂದ್ರ ಸಮೂಹ ನರಳುತ್ತಿರುವಾಗ ಬ್ರಾಹ್ಮಣರು ಎಂದೂ ವಿಶ್ವಾಸದ್ರೋಹಿಗಳಲ್ಲ ಎಂದು ಸೋದೆ ಮಠದ ವಿಶ್ವವಲ್ಲಭ ತೀರ್ಥಸ್ವಾಮಿ ಘೋಷಿಸಿದ್ದಾರಲ್ಲಾ. ಈ ಬಗ್ಗೆ ಅವರನ್ನೇ ಕೇಳಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್, “ತಪ್ಪು ನೋಡದೆ ಬಂದೆಯಾ ಎನ್ನಯ ತಂದೆ ತಪ್ಪನೊಡದೆ ಬಂದೆಯಾ…..”

“ಹಲೋ ಯಾರು?”

“ಸ್ವಾಮೀಜಿ, ನಾನು ಯಾಹು ಅಂತ ಪತ್ರಕರ್ತ.”

“ಪತ್ರಕರ್ತರು ಅಂದ ಮೇಲೆ ಪ್ರಶ್ನೆ ವುಂಟಲ್ಲಾ ಕೇಳಿ.”

“ಏನಿಲ್ಲ ತಾವು ಈಚೆಗೆ ಬ್ರಾಹ್ಮಣರು ವಿಶ್ವಾಸದ್ರೋಹಿಗಳಲ್ಲ ಅಂತ ಹೇಳೀದ್ದಿರಿ..”

“ಹೌದು ಹೇಳಿದ್ದೇನೆ.”

“ಈ ಮಾತು ಅಪರಾಧವಾಗುತ್ತೆ ಸ್ವಾಮಿ.”

“ಯಂತಕ್ಕೆ?”

“ನಮ್ಮ ಶ್ರೇಣೀಕರಣದ ವ್ಯವಸ್ಥೆಯಲ್ಲಿ ಬ್ರಾಹ್ಮಣ ಹಿಂದೂ ಧರ್ಮದ ಕಳಸ ಪ್ರಾಯವಾಗಿ ತುದೀಲಿದೆ, ಇನ್ನುಳಿದ ಜಾತಿಗಳು ಕೆಳಗಿವೆ. ಬ್ರಾಹ್ಮಣ ವಿಶ್ವಾಸದ್ರೋಹಿಯಲ್ಲ ಅಂದಕೂಡಲೇ ವಿಶ್ವಾಸದ್ರೋಹದ ಜಾತಿ ಹುಟ್ಟಿಕೊಳ್ಳುತ್ತೆ ಅದ್ಯಾವುದು ಅಂತ?”

“ನಾನು ನಮ್ಮ ಬ್ರಾಹ್ಮಣರ ಬಗ್ಗೆ ಹೇಳಿದ್ದು.”

“ಅದೇ ಸ್ವಾಮಿ ನೀವು ವಿಶ್ವಾಸಿಗರು ಅನ್ನದಾದ್ರೆ ವಿಶ್ವಾಸದ್ರೋಹಿಗಳು ಯಾರಾದರೂ ಇರಬೇಕಲ್ಲವ?”

“ಅದು ನಮಗೆ ಗೊತ್ತಿಲ್ಲ.”

“ಮತ್ತೆ ಬ್ರಾಹ್ಮಣ ಬುದ್ಧಿಶಕ್ತಿಯಿಂದ ಕೆಲಸ ಮಾಡ್ತನೆ ಅಂದಿದ್ದಿರಿ.”

“ಅದು ಹೌದು”

“ಹಾಗಾದರೆ ಉಳಿದವರು ಯಾವ ಶಕ್ತಿ ಬಳಸಿ ಕೆಲಸ ಮಾಡ್ತರೆ?”

“ಅದು ನನಗೆ ಗೊತ್ತಿಲ್ಲ.”

“ಅಂಬೇಡ್ಕರ್ ಯಾವ ಶಕ್ತಿ ಬಳಸಿ ಸಂವಿಧಾನ ಬರೆದರು?”

“ನಾನು ಹೇಳಿದ ಅರ್ಥ ಬೇರೆ.”

“ಯಾವ ಅರ್ಥನೂ ಇಲ್ಲ. ಬ್ರಾಹ್ಮಣ ವಿಶ್ವಾಸದ್ರೋಹಿಯಲ್ಲ, ಆತ ಬುದ್ಧಿಶಕ್ತಿಯಿಂದ ಕೆಲಸ ಮಾಡ್ತನೆ ಅನ್ನೊ ನಿಮ್ಮ ಮಾತನ್ನ ವಿಸ್ತರಿಸೋದಾದ್ರೆ ತನ್ನ ಬುದ್ಧಿಶಕ್ತಿಯಿಂದ ವಿಶ್ವಾಸದ್ರೋಹ ಕಾಣದಂಗೆ ಮಾಡ್ತನಲ್ಲವೆ?”

“ಇದು ಅತಿಯಾಯ್ತು.”

“ಇಲ್ಲ ಸ್ವಾಮಿ ಈ ರಾಷ್ಟ್ರದಲ್ಲಿ ವಿಶ್ವಾಸದ್ರೋಹ ಮಾಡಿದ ನೂರಾರು ಬ್ರಾಹ್ಮಣರ ಪಟ್ಟಿಕೊಡಬಲ್ಲೆ. ಆ ಪಟ್ಟಿ ವಳಗಡೆ ನಿಮ್ಮ ಉಡುಪಿ ಮಠದ ಯತಿಗಳೂ ಅವುರೆ. ರಾಮಚಂದ್ರಾಪುರ ಮಠದ ಯತಿಗಳಂತೂ ಮುಂಚೂಣಿಲವುರೆ. ರಾಜಕೀಯವಾಗಿ ನಿಮಗೆ ಉತ್ತರ ಕೊಡದಾದ್ರೆ ರಾಮಕೃಷ್ಣ ಹೆಗಡೆ ಬ್ರಾಹ್ಮಣರಲ್ಲವ?”

“ಅವರು ಹವ್ಯಕರು.”

“ಹವ್ಯಕ ಬ್ರಾಹ್ಮಣರು ಅನ್ನಿ. ಉಪಪಂಗಡದ ವಿಷಯ ತೆಗೆದು ನುಣುಚಿಕೊಬೇಡಿ.”

“ಇಲ್ಲ ಹೇಳಿ.”

“ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.”

“ಹೌದು ಆಗಿದ್ದರು.”

“ಚುನಾವಣೆಲಿ ದೇವೇಗೌಡ್ರು ಬಂಗಾರಪ್ಪ ಇಡೀ ನಾಡನ್ನ ತಿರುಗಿ ಅವರಿಗಾಗಿ ಮತ ಕೇಳಿದ್ರು.”

“ನನಗೆ ಗೊತ್ತಿಲ್ಲ.”

“ಅದಕ್ಕೆ ಐತಿಹಾಸಿಕ ದಾಖಲೆಗಳಿವೆ ಕೇಳಿ. ಆಗ ಜನತಾರಂಗ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಆಯ್ಕೆ ಮಾಡುವಾಗ ಹೆಗಡೆ ಮುಂಚೂಣಿಗೆ ಬಂದ್ರು.”

“ಅವರ ಬುದ್ಧಿಶಕ್ತಿ ದೊಡ್ಡದಿತ್ತು. ಅದಕ್ಕೆ ಬಂದರು.”

“ಆಯ್ತು ಅವರ ಬುದ್ಧಿಶಕ್ತಿ ಬಗ್ಗೆ ಎಲ್ಲರಿಗೂ ಗೌರವ ಇತ್ತು. ಆಗ ಭಾರತದ ಪಾದಯಾತ್ರೆ ಮಾಡುತಿದ್ದ ಚಂದ್ರಶೇಖರ್ ಕರ್ನಾಟಕವನ್ನ ಸರಿದಾರಿಗೆ ತಂದು ಕೇಂದ್ರಕ್ಕೆ ಬನ್ನಿ. ದೇವೇಗೌಡರನ್ನ ಚೆನ್ನಾಗಿ ನೋಡಿಕೊಳ್ಳಿ ಅಂತ ಹೇಳಿದ್ರು.”

“ನನಗೆ ಗೊತ್ತಿಲ್ಲ.”

“ಗೊತ್ತಿಲ್ಲ ಅಂದ್ರೆ ಕೇಳಿ; ಮುಂದೆ ನಿಮ್ಮ ಹೆಗಡೆ ದೇವೇಗೌಡರ ವಿರುದ್ದ ಪಿತೂರಿ ಮಾಡಿ ಅವರ ವಿರುದ್ಧ ತನಿಖಾ ಆಯೋಗ ಮಾಡಿದ್ರು.”

“ಇದೂ ಕೂಡ ನನಗೆ ಗೊತ್ತಿಲ್ಲ.”

“ಗೊತ್ತಿಲ್ಲದ ಮ್ಯಾಲೆ ಸಾರಾಸಗಟು ನಮ್ಮವರು ದ್ರೋಹಿಗಳಲ್ಲ ಅಂತ ಯಾಕೆ ಪ್ರವಚನ ಕೊಡ್ತೀರಿ? ನಿಮ್ಮ ಕೆಲವು ಮಠಗಳಲ್ಲಿರೋ ಕಾಮುಕರು ಗೋಮುಖರು ಏನೇನು ಮಾಡ್ತ ಅವುರೆ ಅಂತ ದಾಖಲೆ ಕೊಡ್ಲಾ?”

“ನಮಗೆ ಯಂತಕ್ಕೆ ಅದು?”

“ಇರಲಿ, ಮುಂದೆ ನೋಡಿಕಂಡು ಮಾತಾಡಿ. ಒಳ್ಳೆಯ ನಡವಳಿಕೆ ಯಾವ ಜನಾಂಗದ ಸೊತ್ತು ಅಲ್ಲ, ಹಾಗೇನೆ ನೀಚತನವೂ ಯಾವ ಜನಾಂಗದ ಸೊತ್ತೂ ಅಲ್ಲ. ಎಲ್ಲ ಜಾತಿಗಳಲ್ಲಿ ಒಳ್ಳೆತನ ಕೆಟ್ಟತನ ಸಮಾನವಾಗಿರತ್ತೆ. ಕಾಲಮಾನದ ಕಾರಣಕ್ಕೆ ಕೆಟ್ಟತನ ಎಲ್ಲರಲ್ಲೂ ಜಾಸ್ತಿಯಾಗ್ತಾ ಇದೆ. ಇದಕ್ಕೆ ಕಾರಣವನ್ನು ನಿಮ್ಮಂತವರು ಕಂಡು ಹಿಡಿಯಬೇಕು, ಅದು ಬಿಟ್ಟು ನಮ್ಮವರು ಸತ್ಯವಂತರು, ನೀತಿವಂತರು, ಧರ್ಮವಂತರು, ಬುದ್ಧಿವಂತರು ಅಂತ ಬೊಬ್ಬೆ ಹೊಡದ್ರೆ ನೀವು ಹಾಸ್ಯಾಸ್ಪದವಾಗ್ತೀರಿ. ರಿಪೇರಿ ಸಾಧ್ಯವಾಗದ ಸ್ಥಿತಿ ತಲುಪ್ತಿರಿ.”

“ಜಗದ್ಗುರುಗಳಿಗೆ ಹೀಗೆ ಹೇಳುವುದು ಬೇಡ.”

“ತಮ್ಮದ್ಯಾವ ಜಗತ್ತೂ!”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...