Homeಮುಖಪುಟಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

- Advertisement -
- Advertisement -

ಕೇರಳದಲ್ಲಿ ಈಗಲೇ ವಿಧಾನಸಭಾ ಚುನಾವಣೆ ನಡೆದರೂ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಎಡರಂಗ ಸರ್ಕಾರವೇ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಏಷ್ಯಾನೆಟ್ – ಸಿಫೋರ್ ನಡೆಸಿರುವ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಸಿಎಂ ಯಾರಾಗಬೇಕು ಎಂಬ ಪ್ರಶ್ನೆಗೆ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್‌ಗೆ ಜೈ ಅಂದಿದ್ದಾರೆ.

ಕೇರಳದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಸಮೀಕ್ಷೆ ನಡೆಸಿರುವ ಏಷ್ಯಾನೆಟ್-ಸಿಫೋರ್ ಸಂಸ್ಥೆಗಳು ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈಗ ಚುನಾವಣೆ ನಡೆದರೂ ಎಡರಂಗ 77-83 ಸೀಟುಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದರು.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆದು ಮತ್ತೆ ಎಲ್.ಡಿ.ಎಫ್ ಅಧಿಕಾರಕ್ಕೆ ಏರಲಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 54-60 ಸ್ಥಾನಗಳನ್ನು ಪಡೆದರೆ, ಬಿಜೆಪಿ 3 ರಿಂದ 7 ಸ್ಥಾನ ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಶೇಕಡ 42ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶೇ.39ರಷ್ಟು ಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಶೇ.18ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

ಸರ್ವೇಯಲ್ಲಿ ಭಾಗವಹಿಸಿದ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಕ್ರಿಯೆ ನೀಡಿದ್ದರೆ ಪ್ರತಿಪಕ್ಷ ಕಾಂಗ್ರೆಸ್ ನ ಒಮನ್ ಚಾಂಡಿ ಗೆ ಶೇ. 23ರಷ್ಟು ಮಂದಿ ಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿಪಿಎಂ ನಾಯಕಿ, ಪ್ರಸಕ್ತ ಆರೋಗ್ಯ ಸಚಿವೆ ಕೆ.ಕೆ. ಶೈಲಜ ಅವರಿಗೆ ಶೇ.12ರಷ್ಟು ಮಂದಿ ಬೆಂಬಲ ನೀಡಿದ್ದಾರೆ. 2018ರಲ್ಲಿ ನಿಫಾ ಸೋಂಕು ಮತ್ತು 2020ರಲ್ಲಿ ಕೊರೊನ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿಯಾದ ನಂತರ ಅವರು ದೇಶ ಮತ್ತು ವಿಶ್ವಾದ್ಯಂತ ಹೆಸರು ಗಳಿಸಿದ್ದಾರೆ ಎಂದು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಆರೋಗ್ಯ ಮಂತ್ರಿ ಕೆ.ಕೆ ಶೈಲಜ

ಬಿಜೆಪಿ ರಾಜ್ಯಧ್ಯಕ್ಷ ಕೆ.ಸುರೇಂದ್ರನ್ ಸಿಎಂ ಆಗುವುದನ್ನು ಶೇ.7ರಷ್ಟು ಮಂದಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಲ ಅವರಿಗೆ ಶೇ.5ರಷ್ಟು ಬೆಂಬಲ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ರಾಜ್ಯವು ಕೋವಿಡ್ ಅನ್ನು ನಿಭಾಯಿಸಿದ ರೀತಿಗೆ ಪ್ರಪಂಚಾದ್ಯಂತ ಹೆಸರುವಾಸಿಯಾಗಿದೆ. ಸದ್ಯಕ್ಕೆ ಅಲ್ಲಿ 5000 ಕ್ಕಿಂತ ಕಡಿಮೆ ಪ್ರಕರಣಗಳಿದ್ದರೆ ದಕ್ಷಿಣದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿವೆ. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಇದು ಜನರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ವಿಜಯನ್ ಸಾಧನೆಯ ವಿಚಾರದಲ್ಲಿ ಶೇ.16 ರಷ್ಟು ಜನ ಅತ್ಯುತ್ತಮ ಎಂದಿದ್ದಾರೆ. ಶೇ.51 ರಷ್ಟು ಜನರು ಉತ್ತಮ ಎಂದಿದ್ದಾರೆ. ಹಾಗೆಯೇ ಶೇ.16 ರಷ್ಟು ಜನರು ಕಳಪೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.86% ಜನರು ಒಟ್ಟಾರೆ ಸರ್ಕಾರ ಉತ್ತಮವಾಗಿ ಸಾಂಕ್ರಾಮಿಕವನ್ನು ನಿರ್ವಹಿಸಿದೆ ಎಂದು ಸೂಚಿಸಿದ್ದಾರೆ.

ಸಮೀಕ್ಷೆಯ ಪ್ರಮುಖ ವಿಷಯವೇನೆಂದರೆ ಕೇರಳದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯದಲ್ಲಿ ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬಿಜೆಪಿಯು ಒಮ್ಮೆಗೇ ಶೇ.18ರಷ್ಟು ಮತ ಪಡೆಯಲಿದೆ ಎಂದು ಹೇಳಲಾಗಿದೆ.

ಜೂನ್18 ರಿಂದ 29ರವರೆಗೆ ನಡೆದ ಈ ಸಮೀಕ್ಷೆಯು 50 ವಿಧಾನಸಭಾ ಕ್ಷೇತ್ರಗಳ 10409 ಜನರನ್ನು ಮಾತಾಡಿಸಿ ಅಭಿಪ್ರಾಯ ಪಡೆದಿದೆ.


ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ಇದನ್ನೂ ಓದಿ: ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...