Homeಮುಖಪುಟಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

- Advertisement -
- Advertisement -

ಕೇರಳದಲ್ಲಿ ಈಗಲೇ ವಿಧಾನಸಭಾ ಚುನಾವಣೆ ನಡೆದರೂ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಎಡರಂಗ ಸರ್ಕಾರವೇ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಏಷ್ಯಾನೆಟ್ – ಸಿಫೋರ್ ನಡೆಸಿರುವ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಸಿಎಂ ಯಾರಾಗಬೇಕು ಎಂಬ ಪ್ರಶ್ನೆಗೆ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್‌ಗೆ ಜೈ ಅಂದಿದ್ದಾರೆ.

ಕೇರಳದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಸಮೀಕ್ಷೆ ನಡೆಸಿರುವ ಏಷ್ಯಾನೆಟ್-ಸಿಫೋರ್ ಸಂಸ್ಥೆಗಳು ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈಗ ಚುನಾವಣೆ ನಡೆದರೂ ಎಡರಂಗ 77-83 ಸೀಟುಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದರು.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆದು ಮತ್ತೆ ಎಲ್.ಡಿ.ಎಫ್ ಅಧಿಕಾರಕ್ಕೆ ಏರಲಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 54-60 ಸ್ಥಾನಗಳನ್ನು ಪಡೆದರೆ, ಬಿಜೆಪಿ 3 ರಿಂದ 7 ಸ್ಥಾನ ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಶೇಕಡ 42ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶೇ.39ರಷ್ಟು ಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಶೇ.18ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

ಸರ್ವೇಯಲ್ಲಿ ಭಾಗವಹಿಸಿದ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಕ್ರಿಯೆ ನೀಡಿದ್ದರೆ ಪ್ರತಿಪಕ್ಷ ಕಾಂಗ್ರೆಸ್ ನ ಒಮನ್ ಚಾಂಡಿ ಗೆ ಶೇ. 23ರಷ್ಟು ಮಂದಿ ಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿಪಿಎಂ ನಾಯಕಿ, ಪ್ರಸಕ್ತ ಆರೋಗ್ಯ ಸಚಿವೆ ಕೆ.ಕೆ. ಶೈಲಜ ಅವರಿಗೆ ಶೇ.12ರಷ್ಟು ಮಂದಿ ಬೆಂಬಲ ನೀಡಿದ್ದಾರೆ. 2018ರಲ್ಲಿ ನಿಫಾ ಸೋಂಕು ಮತ್ತು 2020ರಲ್ಲಿ ಕೊರೊನ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿಯಾದ ನಂತರ ಅವರು ದೇಶ ಮತ್ತು ವಿಶ್ವಾದ್ಯಂತ ಹೆಸರು ಗಳಿಸಿದ್ದಾರೆ ಎಂದು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಆರೋಗ್ಯ ಮಂತ್ರಿ ಕೆ.ಕೆ ಶೈಲಜ

ಬಿಜೆಪಿ ರಾಜ್ಯಧ್ಯಕ್ಷ ಕೆ.ಸುರೇಂದ್ರನ್ ಸಿಎಂ ಆಗುವುದನ್ನು ಶೇ.7ರಷ್ಟು ಮಂದಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಲ ಅವರಿಗೆ ಶೇ.5ರಷ್ಟು ಬೆಂಬಲ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ರಾಜ್ಯವು ಕೋವಿಡ್ ಅನ್ನು ನಿಭಾಯಿಸಿದ ರೀತಿಗೆ ಪ್ರಪಂಚಾದ್ಯಂತ ಹೆಸರುವಾಸಿಯಾಗಿದೆ. ಸದ್ಯಕ್ಕೆ ಅಲ್ಲಿ 5000 ಕ್ಕಿಂತ ಕಡಿಮೆ ಪ್ರಕರಣಗಳಿದ್ದರೆ ದಕ್ಷಿಣದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿವೆ. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಇದು ಜನರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ವಿಜಯನ್ ಸಾಧನೆಯ ವಿಚಾರದಲ್ಲಿ ಶೇ.16 ರಷ್ಟು ಜನ ಅತ್ಯುತ್ತಮ ಎಂದಿದ್ದಾರೆ. ಶೇ.51 ರಷ್ಟು ಜನರು ಉತ್ತಮ ಎಂದಿದ್ದಾರೆ. ಹಾಗೆಯೇ ಶೇ.16 ರಷ್ಟು ಜನರು ಕಳಪೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.86% ಜನರು ಒಟ್ಟಾರೆ ಸರ್ಕಾರ ಉತ್ತಮವಾಗಿ ಸಾಂಕ್ರಾಮಿಕವನ್ನು ನಿರ್ವಹಿಸಿದೆ ಎಂದು ಸೂಚಿಸಿದ್ದಾರೆ.

ಸಮೀಕ್ಷೆಯ ಪ್ರಮುಖ ವಿಷಯವೇನೆಂದರೆ ಕೇರಳದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯದಲ್ಲಿ ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬಿಜೆಪಿಯು ಒಮ್ಮೆಗೇ ಶೇ.18ರಷ್ಟು ಮತ ಪಡೆಯಲಿದೆ ಎಂದು ಹೇಳಲಾಗಿದೆ.

ಜೂನ್18 ರಿಂದ 29ರವರೆಗೆ ನಡೆದ ಈ ಸಮೀಕ್ಷೆಯು 50 ವಿಧಾನಸಭಾ ಕ್ಷೇತ್ರಗಳ 10409 ಜನರನ್ನು ಮಾತಾಡಿಸಿ ಅಭಿಪ್ರಾಯ ಪಡೆದಿದೆ.


ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ಇದನ್ನೂ ಓದಿ: ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...