Homeಮುಖಪುಟಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

- Advertisement -
- Advertisement -

ಕೇರಳದಲ್ಲಿ ಈಗಲೇ ವಿಧಾನಸಭಾ ಚುನಾವಣೆ ನಡೆದರೂ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಎಡರಂಗ ಸರ್ಕಾರವೇ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಏಷ್ಯಾನೆಟ್ – ಸಿಫೋರ್ ನಡೆಸಿರುವ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಸಿಎಂ ಯಾರಾಗಬೇಕು ಎಂಬ ಪ್ರಶ್ನೆಗೆ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್‌ಗೆ ಜೈ ಅಂದಿದ್ದಾರೆ.

ಕೇರಳದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಸಮೀಕ್ಷೆ ನಡೆಸಿರುವ ಏಷ್ಯಾನೆಟ್-ಸಿಫೋರ್ ಸಂಸ್ಥೆಗಳು ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈಗ ಚುನಾವಣೆ ನಡೆದರೂ ಎಡರಂಗ 77-83 ಸೀಟುಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದರು.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆದು ಮತ್ತೆ ಎಲ್.ಡಿ.ಎಫ್ ಅಧಿಕಾರಕ್ಕೆ ಏರಲಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 54-60 ಸ್ಥಾನಗಳನ್ನು ಪಡೆದರೆ, ಬಿಜೆಪಿ 3 ರಿಂದ 7 ಸ್ಥಾನ ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಶೇಕಡ 42ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶೇ.39ರಷ್ಟು ಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಶೇ.18ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

ಸರ್ವೇಯಲ್ಲಿ ಭಾಗವಹಿಸಿದ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಕ್ರಿಯೆ ನೀಡಿದ್ದರೆ ಪ್ರತಿಪಕ್ಷ ಕಾಂಗ್ರೆಸ್ ನ ಒಮನ್ ಚಾಂಡಿ ಗೆ ಶೇ. 23ರಷ್ಟು ಮಂದಿ ಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿಪಿಎಂ ನಾಯಕಿ, ಪ್ರಸಕ್ತ ಆರೋಗ್ಯ ಸಚಿವೆ ಕೆ.ಕೆ. ಶೈಲಜ ಅವರಿಗೆ ಶೇ.12ರಷ್ಟು ಮಂದಿ ಬೆಂಬಲ ನೀಡಿದ್ದಾರೆ. 2018ರಲ್ಲಿ ನಿಫಾ ಸೋಂಕು ಮತ್ತು 2020ರಲ್ಲಿ ಕೊರೊನ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿಯಾದ ನಂತರ ಅವರು ದೇಶ ಮತ್ತು ವಿಶ್ವಾದ್ಯಂತ ಹೆಸರು ಗಳಿಸಿದ್ದಾರೆ ಎಂದು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಆರೋಗ್ಯ ಮಂತ್ರಿ ಕೆ.ಕೆ ಶೈಲಜ

ಬಿಜೆಪಿ ರಾಜ್ಯಧ್ಯಕ್ಷ ಕೆ.ಸುರೇಂದ್ರನ್ ಸಿಎಂ ಆಗುವುದನ್ನು ಶೇ.7ರಷ್ಟು ಮಂದಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಲ ಅವರಿಗೆ ಶೇ.5ರಷ್ಟು ಬೆಂಬಲ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ರಾಜ್ಯವು ಕೋವಿಡ್ ಅನ್ನು ನಿಭಾಯಿಸಿದ ರೀತಿಗೆ ಪ್ರಪಂಚಾದ್ಯಂತ ಹೆಸರುವಾಸಿಯಾಗಿದೆ. ಸದ್ಯಕ್ಕೆ ಅಲ್ಲಿ 5000 ಕ್ಕಿಂತ ಕಡಿಮೆ ಪ್ರಕರಣಗಳಿದ್ದರೆ ದಕ್ಷಿಣದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿವೆ. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಇದು ಜನರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ವಿಜಯನ್ ಸಾಧನೆಯ ವಿಚಾರದಲ್ಲಿ ಶೇ.16 ರಷ್ಟು ಜನ ಅತ್ಯುತ್ತಮ ಎಂದಿದ್ದಾರೆ. ಶೇ.51 ರಷ್ಟು ಜನರು ಉತ್ತಮ ಎಂದಿದ್ದಾರೆ. ಹಾಗೆಯೇ ಶೇ.16 ರಷ್ಟು ಜನರು ಕಳಪೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.86% ಜನರು ಒಟ್ಟಾರೆ ಸರ್ಕಾರ ಉತ್ತಮವಾಗಿ ಸಾಂಕ್ರಾಮಿಕವನ್ನು ನಿರ್ವಹಿಸಿದೆ ಎಂದು ಸೂಚಿಸಿದ್ದಾರೆ.

ಸಮೀಕ್ಷೆಯ ಪ್ರಮುಖ ವಿಷಯವೇನೆಂದರೆ ಕೇರಳದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯದಲ್ಲಿ ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬಿಜೆಪಿಯು ಒಮ್ಮೆಗೇ ಶೇ.18ರಷ್ಟು ಮತ ಪಡೆಯಲಿದೆ ಎಂದು ಹೇಳಲಾಗಿದೆ.

ಜೂನ್18 ರಿಂದ 29ರವರೆಗೆ ನಡೆದ ಈ ಸಮೀಕ್ಷೆಯು 50 ವಿಧಾನಸಭಾ ಕ್ಷೇತ್ರಗಳ 10409 ಜನರನ್ನು ಮಾತಾಡಿಸಿ ಅಭಿಪ್ರಾಯ ಪಡೆದಿದೆ.


ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ಇದನ್ನೂ ಓದಿ: ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...