Homeಚಳವಳಿನಿರುದ್ಯೋಗದ ಸೈನ್ಯ ಮುಚ್ಚಿಹಾಕುವ ಹುನ್ನಾರ ಆರೋಪ: ನಾಲ್ಕು ವರ್ಷಗಳ ಪದವಿ ವ್ಯಾಸಂಗಕ್ಕೆ ವಿರೋಧ

ನಿರುದ್ಯೋಗದ ಸೈನ್ಯ ಮುಚ್ಚಿಹಾಕುವ ಹುನ್ನಾರ ಆರೋಪ: ನಾಲ್ಕು ವರ್ಷಗಳ ಪದವಿ ವ್ಯಾಸಂಗಕ್ಕೆ ವಿರೋಧ

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಭಾಗವಾಗಿ, ಪದವಿ ವ್ಯಾಸಂಗವನ್ನು ಮೂರು ವರ್ಷಗಳಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಎಡ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಅದೇ ರೀತಿಯಲ್ಲಿ ಮೂರು ವರ್ಷಗಳ ಪದವಿ ವ್ಯಾಸಂಗದ ಸಂದರ್ಭದಲ್ಲಿದ್ದ ನಾಲ್ಕು ಸೆಮಿಸ್ಟರ್‌ಗಳ ಕನ್ನಡ ಭಾಷಾ ವ್ಯಾಸಂಗವನ್ನು ಎರಡು ಸೆಮಿಸ್ಟರ್‌ಗಳಿಗೆ ಮೊಟಕುಗೊಳಿಸಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ AISF- SFI – AIDSO – AISA – KVS ವಿದ್ಯಾರ್ಥಿಗಳು ಸಂಘಟನೆಗಳು ಪತ್ರ ಬರೆದಿವೆ.

ರಾಜ್ಯ ಸರಕಾರದ ಈ ಎರಡು ಕ್ರಮಗಳು ವಿದ್ಯಾರ್ಥಿ ಹಾಗೂ ಕನ್ನಡ ವಿರೋಧಿ ಮತ್ತು ರಾಜ್ಯದ ಅಭಿವೃದ್ದಿ ವಿರೋಧಿ ಕ್ರಮಗಳಾಗಿವೆ. ತಕ್ಷಣವೇ ಈ ಜನ ವಿರೋಧಿ ಶಿಕ್ಷಣ ಕ್ರಮಗಳನ್ನು ವಾಪಾಸು ಪಡೆಯುವಂತೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ʻʻಪದವಿ ವ್ಯಾಸಂಗವನ್ನು ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದು ಕೇವಲ ಮೂರು ವರ್ಷಗಳಲ್ಲೆ ಪದವಿ ವ್ಯಾಸಂಗ ಮುಗಿಸಿ, ನಿರುದ್ಯೋಗ ಸೈನ್ಯ ಸೇರುವವರನ್ನು ಕನಿಷ್ಠ ಒಂದು ವರ್ಷ ನಿಯಂತ್ರಿಸುವ ದುಷ್ಟ ಯೋಚನೆಯಾಗಿದೆ. ವಿದ್ಯಾರ್ಥಿ ಹಾಗೂ ಪೋಷಕರು ಮತ್ತೊಂದು ವರ್ಷದ ವ್ಯಾಸಂಗಕ್ಕೆ ದುಬಾರಿ ಶುಲ್ಕ, ಮತ್ತಿತರೇ ವೆಚ್ಚ ಭರಿಸುವ ಹೊರೆಯನ್ನು ಹೇರುವ ಮತ್ತು ಆ ಮೂಲಕ ಖಾಸಗೀ ಶಿಕ್ಷಣ ಸಂಸ್ಥೆಗಳ ಲೂಟಿಯ ಹರಿವನ್ನು ವಿಸ್ತರಿಸುವ ಸಂಚಾಗಿದೆʼʼ ಎಂದು ವಿದ್ಯಾರ್ಥಿ ಸಂಘಟನೆಗಳು ಕಿಡಿಕಾರಿವೆ.

ಕನ್ನಡ ಭಾಷೆ ಕಲಿಕೆಯನ್ನು ನಾಲ್ಕು ಸೆಮಿಸ್ಟರ್ ಗಳ ಅವಧಿಗಳಿಂದ ಎರಡು ಸೆಮಿಸ್ಟರ್ ಗಳ ಅವಧಿಗೆ ಮೊಟಕು ಮಾಡಿರುವುದು ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಕಲಿಕೆಯನ್ನು ಮೊಟಕು ಮಾಡುವ ಹುನ್ನಾರವಾಗಿದೆ. ಆದ್ದರಿಂದ, ಈ ಕ್ರಮಗಳನ್ನು ಹಿಂಪಡೆದು ಎರಡು ವರ್ಷಗಳ ಭಾಷಾ ಕಲಿಕೆಯನ್ನು ಮುಂದುವರೆಸುವಂತೆ ಒತ್ತಾಯಿಸಿವೆ.


ಇದನ್ನೂ ಓದಿ: ಪದವಿ ಶಿಕ್ಷಣ ನಾಲ್ಕು ವರ್ಷಕ್ಕೆ ಏರಿಸುವುದಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...