Homeಮುಖಪುಟಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

- Advertisement -
- Advertisement -

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳು ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಖಚಿತಪಡಿಸಿದೆ.

ವಿಮಾನ ಅಪಘಾತದ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ಬಾರಾಮತಿಯಲ್ಲಿ ಅಪಘಾತಕ್ಕೀಡಾದ ಲಿಯರ್‌ಜೆಟ್ 45 ಏರ್‌ಕ್ರಾಫ್ಟ್‌ VT-SSKಗೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಈ ತನಿಖೆಯನ್ನು ವಿಮಾನ (ಅಪಘಾತಗಳು ಮತ್ತು ಘಟನೆಗಳ ತನಿಖೆ) ನಿಯಮಗಳು, 2017ರ ಪ್ರಕಾರ ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ಅನೆಕ್ಸ್ 13ರ ಅಂತಾರಾಷ್ಟ್ರೀಯ ಮಾನದಂಡಗಳು ಹಾಗೂ ಶಿಫಾರಸುಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಹೇಳಿದೆ.

ವಿಮಾನವು ಎರಡು ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳನ್ನು ಹೊಂದಿತ್ತು. ಅಪಘಾತದ ಸಮಯದಲ್ಲಿ ಈ ಎರಡೂ ರೆಕಾರ್ಡರ್‌ಗಳು ದೀರ್ಘಕಾಲದವರೆಗೆ ಅತಿಯಾದ ಶಾಖಕ್ಕೆ ಒಡ್ಡಿಕೊಂಡಿದ್ದರಿಂದ, ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.

ಎಲ್3-ಕಮ್ಯುನಿಕೇಷನ್ಸ್ ಸಂಸ್ಥೆ ತಯಾರಿಸಿರುವ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (ಡಿಎಫ್‌ಡಿಆರ್) ಅನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ)ದ ಫ್ಲೈಟ್ ರೆಕಾರ್ಡರ್ ಪ್ರಯೋಗಾಲಯದಲ್ಲಿ ಯಶಸ್ವಿಯಾಗಿ ಡೌನ್‌ಲೋಡ್ ಮಾಡಲಾಗಿದೆ. ವಿಮಾನದ ಹಾರಾಟದ ದತ್ತಾಂಶಗಳನ್ನು ಹೊಂದಿರುವ ಈ ರೆಕಾರ್ಡರ್ ತನಿಖೆಗೆ ಅತ್ಯಂತ ಪ್ರಮುಖವಾಗಿದೆ. ಆದರೆ, ಹನಿವೆಲ್ ಕಂಪನಿ ತಯಾರಿಸಿರುವ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ತೀವ್ರವಾಗಿ ಹಾನಿಗೊಳಗಾಗಿರುವ ಕಾರಣ, ಅದರಿಂದ ಮಾಹಿತಿ ಪಡೆಯಲು ತಯಾರಕ ರಾಷ್ಟ್ರವಾದ ಅಮೆರಿಕದ ತಜ್ಞರ ನೆರವನ್ನು ಕೋರಲಾಗಿದೆ.

ಸಂಪೂರ್ಣ, ವಸ್ತುನಿಷ್ಠ ಮತ್ತು ಪುರಾವೆ ಆಧಾರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಎಎಐಬಿ ಸಂಸ್ಥೆಯು ಸೂಚಿಸಲಾದ ಎಲ್ಲಾ ತಾಂತ್ರಿಕ ಮತ್ತು ಕಾರ್ಯವಿಧಾನದ ನಿಯಮಾವಳಿಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಪೂರ್ಣ ಪಾರದರ್ಶಕತೆಗೆ ಬ್ಯೂರೋ (ಎಎಐಬಿ) ಬದ್ಧವಾಗಿದ್ದು, ತನಿಖೆಯ ಸೂಕ್ತ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಹೇಳಲಾಗಿದೆ.

ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಮತ್ತು ಸಂಸ್ಥೆಗಳು ಈ ಘಟನೆಯ ಬಗ್ಗೆ ಊಹಾಪೋಹಗಳನ್ನು ಹರಡಬಾರದು ಮತ್ತು ನಿಗದಿಪಡಿಸಿದ ಕಾರ್ಯವಿಧಾನಗಳ ಪ್ರಕಾರ ತನಿಖಾ ಪ್ರಕ್ರಿಯೆಯು ಮುಂದುವರಿಯಲು ಸಹಕರಿಸಬೇಕೆಂದು ಎಎಐಬಿ ಗೌರವಪೂರ್ವಕವಾಗಿ ವಿನಂತಿಸುತ್ತದೆ ಎಂದು ಅಧಿಕೃತ ಹೇಳಿಕೆಯು ಮನವಿ ಮಾಡಿದೆ.

ಜನವರಿ 28, 2026 ರಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...