Homeಮುಖಪುಟಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

- Advertisement -
- Advertisement -

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳು ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಖಚಿತಪಡಿಸಿದೆ.

ವಿಮಾನ ಅಪಘಾತದ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ಬಾರಾಮತಿಯಲ್ಲಿ ಅಪಘಾತಕ್ಕೀಡಾದ ಲಿಯರ್‌ಜೆಟ್ 45 ಏರ್‌ಕ್ರಾಫ್ಟ್‌ VT-SSKಗೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಈ ತನಿಖೆಯನ್ನು ವಿಮಾನ (ಅಪಘಾತಗಳು ಮತ್ತು ಘಟನೆಗಳ ತನಿಖೆ) ನಿಯಮಗಳು, 2017ರ ಪ್ರಕಾರ ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ಅನೆಕ್ಸ್ 13ರ ಅಂತಾರಾಷ್ಟ್ರೀಯ ಮಾನದಂಡಗಳು ಹಾಗೂ ಶಿಫಾರಸುಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಹೇಳಿದೆ.

ವಿಮಾನವು ಎರಡು ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳನ್ನು ಹೊಂದಿತ್ತು. ಅಪಘಾತದ ಸಮಯದಲ್ಲಿ ಈ ಎರಡೂ ರೆಕಾರ್ಡರ್‌ಗಳು ದೀರ್ಘಕಾಲದವರೆಗೆ ಅತಿಯಾದ ಶಾಖಕ್ಕೆ ಒಡ್ಡಿಕೊಂಡಿದ್ದರಿಂದ, ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.

ಎಲ್3-ಕಮ್ಯುನಿಕೇಷನ್ಸ್ ಸಂಸ್ಥೆ ತಯಾರಿಸಿರುವ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (ಡಿಎಫ್‌ಡಿಆರ್) ಅನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ)ದ ಫ್ಲೈಟ್ ರೆಕಾರ್ಡರ್ ಪ್ರಯೋಗಾಲಯದಲ್ಲಿ ಯಶಸ್ವಿಯಾಗಿ ಡೌನ್‌ಲೋಡ್ ಮಾಡಲಾಗಿದೆ. ವಿಮಾನದ ಹಾರಾಟದ ದತ್ತಾಂಶಗಳನ್ನು ಹೊಂದಿರುವ ಈ ರೆಕಾರ್ಡರ್ ತನಿಖೆಗೆ ಅತ್ಯಂತ ಪ್ರಮುಖವಾಗಿದೆ. ಆದರೆ, ಹನಿವೆಲ್ ಕಂಪನಿ ತಯಾರಿಸಿರುವ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ತೀವ್ರವಾಗಿ ಹಾನಿಗೊಳಗಾಗಿರುವ ಕಾರಣ, ಅದರಿಂದ ಮಾಹಿತಿ ಪಡೆಯಲು ತಯಾರಕ ರಾಷ್ಟ್ರವಾದ ಅಮೆರಿಕದ ತಜ್ಞರ ನೆರವನ್ನು ಕೋರಲಾಗಿದೆ.

ಸಂಪೂರ್ಣ, ವಸ್ತುನಿಷ್ಠ ಮತ್ತು ಪುರಾವೆ ಆಧಾರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಎಎಐಬಿ ಸಂಸ್ಥೆಯು ಸೂಚಿಸಲಾದ ಎಲ್ಲಾ ತಾಂತ್ರಿಕ ಮತ್ತು ಕಾರ್ಯವಿಧಾನದ ನಿಯಮಾವಳಿಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಪೂರ್ಣ ಪಾರದರ್ಶಕತೆಗೆ ಬ್ಯೂರೋ (ಎಎಐಬಿ) ಬದ್ಧವಾಗಿದ್ದು, ತನಿಖೆಯ ಸೂಕ್ತ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಹೇಳಲಾಗಿದೆ.

ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಮತ್ತು ಸಂಸ್ಥೆಗಳು ಈ ಘಟನೆಯ ಬಗ್ಗೆ ಊಹಾಪೋಹಗಳನ್ನು ಹರಡಬಾರದು ಮತ್ತು ನಿಗದಿಪಡಿಸಿದ ಕಾರ್ಯವಿಧಾನಗಳ ಪ್ರಕಾರ ತನಿಖಾ ಪ್ರಕ್ರಿಯೆಯು ಮುಂದುವರಿಯಲು ಸಹಕರಿಸಬೇಕೆಂದು ಎಎಐಬಿ ಗೌರವಪೂರ್ವಕವಾಗಿ ವಿನಂತಿಸುತ್ತದೆ ಎಂದು ಅಧಿಕೃತ ಹೇಳಿಕೆಯು ಮನವಿ ಮಾಡಿದೆ.

ಜನವರಿ 28, 2026 ರಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...