Homeಮುಖಪುಟಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ, ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಸ್ಪೀಕರ್

ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ, ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಸ್ಪೀಕರ್

- Advertisement -
- Advertisement -

ಕಳೆದ ವರ್ಷ ಜೂನ್‌ನಲ್ಲಿ ಶರದ್ ಪವಾರ್ ವಿರುದ್ಧ ಬಂಡಾಯವೆದ್ದಿದ್ದ 41 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಿರಸ್ಕರಿಸಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಅಜಿತ್ ಪವಾರ್ ಬಣವನ್ನು ‘ನೈಜ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ’ ಎಂದು ಹೇಳಿದೆ.

ಅಜಿತ್ ಪವಾರ್ ಅವರ ಚಿಕ್ಕಪ್ಪನ ವಿರುದ್ಧ ಬಂಡಾಯವೆದ್ದಿರುವ ಮತ್ತು ಬಿಜೆಪಿ-ಶಿವಸೇನೆಯ ಇದೇ ರೀತಿಯ ಒಡೆದುಹೋದ ಬಣದೊಂದಿಗೆ ಮೈತ್ರಿ ಮಾಡಿಕೊಂಡು ಹೊಸ ರಾಜ್ಯ ಸರ್ಕಾರ ರಚಿಸಲು ಅಜಿತ್ ಪವಾರ್ ಜೊತೆಗೂಡಿದದ್ದರು. ‘ಶಾಸಕರು ಪಕ್ಷದ ಇಚ್ಛೆಯಂತೆ ತೀರ್ಮಾನ ತಗೆದುಕೊಂಡಿರುವ ಕಾರಣ ಅವರನ್ನು ಅನರ್ಹಗೊಳಿಸಲಾಗುವುದಿಲ್ಲ’ ಎಂದು ನಾರ್ವೇಕರ್ ಹೇಳಿದರು.

‘ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಿಜವಾದ ರಾಜಕೀಯ ಪಕ್ಷ ಎಂದು ನಾನು ಭಾವಿಸುತ್ತೇನೆ. ಅಜಿತ್ ಪವಾರ್ 41 ಶಾಸಕರೊಂದಿಗೆ ಶಾಸಕಾಂಗ ಬಹುಮತವನ್ನು ಹೊಂದಿದ್ದಾರೆ. ಇದು ನಿರ್ವಿವಾದವಾಗಿದೆ’ ಎಂದು ಸ್ಪೀಕರ್ ಇಂದು ಸಂಜೆ ಹೇಳಿದರು.

53 ಶಾಸಕರನ್ನು ಹೊಂದಿದ್ದ ಎನ್‌ಸಿಪಿ:

53 ಶಾಸಕರನ್ನು ಹೊಂದಿದ್ದ ಎನ್‌ಸಿಪಿಯ 41 ಮಂದಿ ಅಜಿತ್ ಪವಾರ್ ಪರವಾಗಿ ನಿಂತರು, ಶರದ್ ಪವಾರ್ ಅವರು 1999 ರಲ್ಲಿ ಸ್ಥಾಪಿಸಿದ ಪಕ್ಷದ ಮೇಲೆ ಮತ್ತೆ ಹಿಡಿತ ಸಾಧಿಸಲು ಪ್ರಯತ್ನಿಸಿದಾಗ ಕೇವಲ 12 ಮಂದಿಯನ್ನು ಬಿಟ್ಟು, ಉಳಿದವರು ಅಜಿತ್ ಬೆಂಬಲಿಸಿದರು.

ಕಳೆದ ವಾರ ಚುನಾವಣಾ ಆಯೋಗವು ಅಜಿತ್ ಪವಾರ್ ಬಣವನ್ನು ‘ನಿಜವಾದ ಎನ್‌ಸಿಪಿ’ ಎಂದು ಗುರುತಿಸಲಾಗುವುದು, ಆ ಮೂಲಕ ಲೋಕಸಭೆ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆಗೆ ವಾರಗಳ ಮೊದಲು ಪಕ್ಷದ ಹೆಸರು ಮತ್ತು ಚಿಹ್ನೆ (ಗಡಿಯಾರ) ಮೇಲೆ ನಿಯಂತ್ರಣವನ್ನು ನೀಡುತ್ತದೆ.

ಚುನಾವಣಾ ಸಮಿತಿಯು ಶರದ್ ಪವಾರ್‌ಗೆ ಹೊಸ ಹೆಸರನ್ನು ನಿರ್ಧರಿಸಲು ಕೆಲವೇ ಗಂಟೆಗಳನ್ನು ನೀಡಿತು. ಅವರ ಬಣವನ್ನು ಅಂತಿಮವಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್‌ಚಂದ್ರ ಪವಾರ್ ಎಂದು ಮರುನಾಮಕರಣ ಮಾಡಲಾಯಿತು.

ಚುನಾವಣಾ ಆಯೋಗದ ಕ್ರಮಗಳನ್ನು ಎನ್‌ಸಿಪಿಯು  “ಪ್ರಜಾಪ್ರಭುತ್ವದ ಕೊಲೆ” ಎಂದು ಕರೆದಿದೆ. ‘ಎನ್‌ಸಿಪಿಯನ್ನು ಸ್ಥಾಪಿಸಿದವರು ಯಾರು ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹಾಗಾಗಿ ಚುನಾವಣಾ ಆಯೋಗ ಏನು ಮಾಡಿದೆ? ಪ್ರಜಾಪ್ರಭುತ್ವದ ಕೊಲೆಯಾಗಿದೆ…’ ಎಂದು ಮಾಜಿ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಇಸಿ ಆದೇಶದ ವಿರುದ್ಧ ಶರದ್ ಪವಾರ್ ಪಾಳಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಚುನಾವಣಾ ಆಯೋಗದ ನಿರ್ಧಾರವು ಶಿವಸೇನೆ ವಿರುದ್ಧ ಶಿವಸೇನೆ ಹೋರಾಟದಂತೆಯೇ ಹೋಲುತ್ತಿದೆ. ಇದರಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಣ (ಬಿಜೆಪಿಯೊಂದಿಗೆ ಬಂಡಾಯವೆದ್ದು ಮತ್ತು ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾದರು) ಮಾಜಿ ಮುಖ್ಯಮಂತ್ರಿ ಉದ್ಧವ್ ಅವರನ್ನು ಬಿಟ್ಟು ‘ನಿಜವಾದ ಸೇನೆ’ ಎಂದು ಗುರುತಿಸಲಾಯಿತು. ತನ್ನ ತಂದೆ ಸ್ಥಾಪಿಸಿದ ಪಕ್ಷಕ್ಕೆ ಹೊಸ ಗುರುತನ್ನು ಹುಡುಕಲು ಚುನಾವಣೆಗೆ ವಾರಗಳ ಮೊದಲು ಠಾಕ್ರೆ ಅರಸಾಹಸ ಪಟ್ಟರು.

ಇದನ್ನೂ ಓದಿ; ‘ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿಯಲಾಗಿದೆ..’; ಕೇಂದ್ರದ ಜತೆಗಿನ ಸಭೆ ಬಹಿಷ್ಕರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...