Homeಮುಖಪುಟಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ, ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಸ್ಪೀಕರ್

ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ, ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಸ್ಪೀಕರ್

- Advertisement -
- Advertisement -

ಕಳೆದ ವರ್ಷ ಜೂನ್‌ನಲ್ಲಿ ಶರದ್ ಪವಾರ್ ವಿರುದ್ಧ ಬಂಡಾಯವೆದ್ದಿದ್ದ 41 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಿರಸ್ಕರಿಸಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಅಜಿತ್ ಪವಾರ್ ಬಣವನ್ನು ‘ನೈಜ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ’ ಎಂದು ಹೇಳಿದೆ.

ಅಜಿತ್ ಪವಾರ್ ಅವರ ಚಿಕ್ಕಪ್ಪನ ವಿರುದ್ಧ ಬಂಡಾಯವೆದ್ದಿರುವ ಮತ್ತು ಬಿಜೆಪಿ-ಶಿವಸೇನೆಯ ಇದೇ ರೀತಿಯ ಒಡೆದುಹೋದ ಬಣದೊಂದಿಗೆ ಮೈತ್ರಿ ಮಾಡಿಕೊಂಡು ಹೊಸ ರಾಜ್ಯ ಸರ್ಕಾರ ರಚಿಸಲು ಅಜಿತ್ ಪವಾರ್ ಜೊತೆಗೂಡಿದದ್ದರು. ‘ಶಾಸಕರು ಪಕ್ಷದ ಇಚ್ಛೆಯಂತೆ ತೀರ್ಮಾನ ತಗೆದುಕೊಂಡಿರುವ ಕಾರಣ ಅವರನ್ನು ಅನರ್ಹಗೊಳಿಸಲಾಗುವುದಿಲ್ಲ’ ಎಂದು ನಾರ್ವೇಕರ್ ಹೇಳಿದರು.

‘ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಿಜವಾದ ರಾಜಕೀಯ ಪಕ್ಷ ಎಂದು ನಾನು ಭಾವಿಸುತ್ತೇನೆ. ಅಜಿತ್ ಪವಾರ್ 41 ಶಾಸಕರೊಂದಿಗೆ ಶಾಸಕಾಂಗ ಬಹುಮತವನ್ನು ಹೊಂದಿದ್ದಾರೆ. ಇದು ನಿರ್ವಿವಾದವಾಗಿದೆ’ ಎಂದು ಸ್ಪೀಕರ್ ಇಂದು ಸಂಜೆ ಹೇಳಿದರು.

53 ಶಾಸಕರನ್ನು ಹೊಂದಿದ್ದ ಎನ್‌ಸಿಪಿ:

53 ಶಾಸಕರನ್ನು ಹೊಂದಿದ್ದ ಎನ್‌ಸಿಪಿಯ 41 ಮಂದಿ ಅಜಿತ್ ಪವಾರ್ ಪರವಾಗಿ ನಿಂತರು, ಶರದ್ ಪವಾರ್ ಅವರು 1999 ರಲ್ಲಿ ಸ್ಥಾಪಿಸಿದ ಪಕ್ಷದ ಮೇಲೆ ಮತ್ತೆ ಹಿಡಿತ ಸಾಧಿಸಲು ಪ್ರಯತ್ನಿಸಿದಾಗ ಕೇವಲ 12 ಮಂದಿಯನ್ನು ಬಿಟ್ಟು, ಉಳಿದವರು ಅಜಿತ್ ಬೆಂಬಲಿಸಿದರು.

ಕಳೆದ ವಾರ ಚುನಾವಣಾ ಆಯೋಗವು ಅಜಿತ್ ಪವಾರ್ ಬಣವನ್ನು ‘ನಿಜವಾದ ಎನ್‌ಸಿಪಿ’ ಎಂದು ಗುರುತಿಸಲಾಗುವುದು, ಆ ಮೂಲಕ ಲೋಕಸಭೆ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆಗೆ ವಾರಗಳ ಮೊದಲು ಪಕ್ಷದ ಹೆಸರು ಮತ್ತು ಚಿಹ್ನೆ (ಗಡಿಯಾರ) ಮೇಲೆ ನಿಯಂತ್ರಣವನ್ನು ನೀಡುತ್ತದೆ.

ಚುನಾವಣಾ ಸಮಿತಿಯು ಶರದ್ ಪವಾರ್‌ಗೆ ಹೊಸ ಹೆಸರನ್ನು ನಿರ್ಧರಿಸಲು ಕೆಲವೇ ಗಂಟೆಗಳನ್ನು ನೀಡಿತು. ಅವರ ಬಣವನ್ನು ಅಂತಿಮವಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್‌ಚಂದ್ರ ಪವಾರ್ ಎಂದು ಮರುನಾಮಕರಣ ಮಾಡಲಾಯಿತು.

ಚುನಾವಣಾ ಆಯೋಗದ ಕ್ರಮಗಳನ್ನು ಎನ್‌ಸಿಪಿಯು  “ಪ್ರಜಾಪ್ರಭುತ್ವದ ಕೊಲೆ” ಎಂದು ಕರೆದಿದೆ. ‘ಎನ್‌ಸಿಪಿಯನ್ನು ಸ್ಥಾಪಿಸಿದವರು ಯಾರು ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹಾಗಾಗಿ ಚುನಾವಣಾ ಆಯೋಗ ಏನು ಮಾಡಿದೆ? ಪ್ರಜಾಪ್ರಭುತ್ವದ ಕೊಲೆಯಾಗಿದೆ…’ ಎಂದು ಮಾಜಿ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಇಸಿ ಆದೇಶದ ವಿರುದ್ಧ ಶರದ್ ಪವಾರ್ ಪಾಳಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಚುನಾವಣಾ ಆಯೋಗದ ನಿರ್ಧಾರವು ಶಿವಸೇನೆ ವಿರುದ್ಧ ಶಿವಸೇನೆ ಹೋರಾಟದಂತೆಯೇ ಹೋಲುತ್ತಿದೆ. ಇದರಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಣ (ಬಿಜೆಪಿಯೊಂದಿಗೆ ಬಂಡಾಯವೆದ್ದು ಮತ್ತು ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾದರು) ಮಾಜಿ ಮುಖ್ಯಮಂತ್ರಿ ಉದ್ಧವ್ ಅವರನ್ನು ಬಿಟ್ಟು ‘ನಿಜವಾದ ಸೇನೆ’ ಎಂದು ಗುರುತಿಸಲಾಯಿತು. ತನ್ನ ತಂದೆ ಸ್ಥಾಪಿಸಿದ ಪಕ್ಷಕ್ಕೆ ಹೊಸ ಗುರುತನ್ನು ಹುಡುಕಲು ಚುನಾವಣೆಗೆ ವಾರಗಳ ಮೊದಲು ಠಾಕ್ರೆ ಅರಸಾಹಸ ಪಟ್ಟರು.

ಇದನ್ನೂ ಓದಿ; ‘ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿಯಲಾಗಿದೆ..’; ಕೇಂದ್ರದ ಜತೆಗಿನ ಸಭೆ ಬಹಿಷ್ಕರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...