Homeಮುಖಪುಟಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡದಿದ್ದರೆ ಮಹಾರಾಷ್ಟ್ರದ ಮಹಾಯುತಿ ಸರ್ಕಾರಕ್ಕೆ “ಯಾವುದೇ ಅರ್ಥವಿಲ್ಲ” ಎಂದು ಪಕ್ಷದ ವಕ್ತಾರ ಅಮೋಲ್ ಮಿಟ್ಕರಿ ಗುರುವಾರ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅಜಿತ್ ಪವಾರ್ ಅವರು ಕಳೆದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದರು. ಅಜಿತ್‌ ಪವಾರ್‌ಗೆ

ನವೆಂಬರ್ 23 ರಂದು, ಮಹಾಯುತಿ ಮೈತ್ರಿಕೂಟ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣ ಇವೆ.

ಡಿಸೆಂಬರ್ 5 ರಂದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜೊತೆಗೆ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮೈತ್ರಿಕೂಟವು ತನ್ನ ಅಧಿಕಾರ ಹಂಚಿಕೆಯ ಭಾಗವಾಗಿ ಪ್ರಮುಖ ಸಚಿವ ಖಾತೆಗಳ ಬಗ್ಗೆ ಇನ್ನೂ ಘೋಷಣೆಗಳನ್ನು ಮಾಡಿಲ್ಲ. ಅಜಿತ್‌ ಪವಾರ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಜಿತ್ ಪವಾರ್ ಅವರು ತಮ್ಮ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರೊಂದಿಗೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಗುರುವಾರ ಮಿಟ್ಕರಿ ಅವರ ಹೇಳಿಕೆ ಹೊರಬಿದ್ದಿದೆ. ಈ ವೇಳೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಉಪಸ್ಥಿತರಿದ್ದರು.

2024ರ ಚುನಾವಣೆಯ ಮೊದಲು, ಇಡೀ ಮಹಾರಾಷ್ಟ್ರದಲ್ಲಿ ಲಡ್ಕಿ ಬಹಿನ್ ಯೋಜನೆ ಮತ್ತು ರೈತರ ವಿದ್ಯುತ್ ಬಿಲ್‌ಗಳ ಮನ್ನಾ ಮುಂತಾದ ಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ, ಅಜಿತ್ ಪವಾರ್ ಅವರು ಹಣಕಾಸು ಸಚಿವರಾಗಿ ರಾಜ್ಯವು ಹೆಚ್ಚುವರಿ ಆರ್ಥಿಕ ಹೊರೆಗೆ ಸಿಲುಕದಂತೆ ನೋಡಿಕೊಳ್ಳುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಆರ್ಥಿಕ ಶಿಸ್ತು ಖಾತ್ರಿಪಡಿಸಬೇಕಾದರೆ” ಹಣಕಾಸು ಖಾತೆ ಅಜಿತ್ ಪವಾರ್‌ ಅವರಿಗೆ ಹೋಗಬೇಕು ಎಂದು ಮಿಟ್ಕರಿ ಹೇಳಿದ್ದಾರೆ. ಗೃಹ ಸಚಿವಾಲಯವು “ಬಿಜೆಪಿಗೆ ಸರಿಹೊಂದುತ್ತದೆ” ಎಂದು ಅವರು ಹೇಳಿದ್ದು, ಹಣಕಾಸು ಸಚಿವಾಲಯವು “ಎನ್ಸಿಪಿಗೆ ಸರಿಹೊಂದುತ್ತದೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ, ಕಬ್ಬಿನ ಬೆಲೆಗೆ ಸಂಬಂಧಿಸಿದ ವಿಷಯಗಳನ್ನು ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. “ಕಬ್ಬು ದರವನ್ನು ಹೆಚ್ಚಿಸಲು ನಾನು ಅಮಿತ್ ಶಾಗೆ ಮನವಿ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಉಲ್ಲೇಖಿಸಿದೆ. “ಅವರು ಜನವರಿಯೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಶನಿವಾರ ಚರ್ಚೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿಯು ಆಗಿರುವ ಅವರು ತಿಳಿಸಿದ್ದಾರೆ.

ಆದರೆ, ದೆಹಲಿಯಲ್ಲಿದ್ದ ಫಡ್ನವೀಸ್ ಅವರು, ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ನಿರ್ಧರಿಸಲಾಗಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ. “ನಾನು ನನ್ನ ಪಕ್ಷದ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ನಾಯಕತ್ವದೊಂದಿಗೆ ನಮ್ಮ ಸಂಭಾವ್ಯ ಸಚಿವರ ಬಗ್ಗೆ ಚರ್ಚಿಸುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...