Homeಮುಖಪುಟಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡದಿದ್ದರೆ ಮಹಾರಾಷ್ಟ್ರದ ಮಹಾಯುತಿ ಸರ್ಕಾರಕ್ಕೆ “ಯಾವುದೇ ಅರ್ಥವಿಲ್ಲ” ಎಂದು ಪಕ್ಷದ ವಕ್ತಾರ ಅಮೋಲ್ ಮಿಟ್ಕರಿ ಗುರುವಾರ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅಜಿತ್ ಪವಾರ್ ಅವರು ಕಳೆದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದರು. ಅಜಿತ್‌ ಪವಾರ್‌ಗೆ

ನವೆಂಬರ್ 23 ರಂದು, ಮಹಾಯುತಿ ಮೈತ್ರಿಕೂಟ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣ ಇವೆ.

ಡಿಸೆಂಬರ್ 5 ರಂದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜೊತೆಗೆ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮೈತ್ರಿಕೂಟವು ತನ್ನ ಅಧಿಕಾರ ಹಂಚಿಕೆಯ ಭಾಗವಾಗಿ ಪ್ರಮುಖ ಸಚಿವ ಖಾತೆಗಳ ಬಗ್ಗೆ ಇನ್ನೂ ಘೋಷಣೆಗಳನ್ನು ಮಾಡಿಲ್ಲ. ಅಜಿತ್‌ ಪವಾರ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಜಿತ್ ಪವಾರ್ ಅವರು ತಮ್ಮ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರೊಂದಿಗೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಗುರುವಾರ ಮಿಟ್ಕರಿ ಅವರ ಹೇಳಿಕೆ ಹೊರಬಿದ್ದಿದೆ. ಈ ವೇಳೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಉಪಸ್ಥಿತರಿದ್ದರು.

2024ರ ಚುನಾವಣೆಯ ಮೊದಲು, ಇಡೀ ಮಹಾರಾಷ್ಟ್ರದಲ್ಲಿ ಲಡ್ಕಿ ಬಹಿನ್ ಯೋಜನೆ ಮತ್ತು ರೈತರ ವಿದ್ಯುತ್ ಬಿಲ್‌ಗಳ ಮನ್ನಾ ಮುಂತಾದ ಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ, ಅಜಿತ್ ಪವಾರ್ ಅವರು ಹಣಕಾಸು ಸಚಿವರಾಗಿ ರಾಜ್ಯವು ಹೆಚ್ಚುವರಿ ಆರ್ಥಿಕ ಹೊರೆಗೆ ಸಿಲುಕದಂತೆ ನೋಡಿಕೊಳ್ಳುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಆರ್ಥಿಕ ಶಿಸ್ತು ಖಾತ್ರಿಪಡಿಸಬೇಕಾದರೆ” ಹಣಕಾಸು ಖಾತೆ ಅಜಿತ್ ಪವಾರ್‌ ಅವರಿಗೆ ಹೋಗಬೇಕು ಎಂದು ಮಿಟ್ಕರಿ ಹೇಳಿದ್ದಾರೆ. ಗೃಹ ಸಚಿವಾಲಯವು “ಬಿಜೆಪಿಗೆ ಸರಿಹೊಂದುತ್ತದೆ” ಎಂದು ಅವರು ಹೇಳಿದ್ದು, ಹಣಕಾಸು ಸಚಿವಾಲಯವು “ಎನ್ಸಿಪಿಗೆ ಸರಿಹೊಂದುತ್ತದೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ, ಕಬ್ಬಿನ ಬೆಲೆಗೆ ಸಂಬಂಧಿಸಿದ ವಿಷಯಗಳನ್ನು ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. “ಕಬ್ಬು ದರವನ್ನು ಹೆಚ್ಚಿಸಲು ನಾನು ಅಮಿತ್ ಶಾಗೆ ಮನವಿ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಉಲ್ಲೇಖಿಸಿದೆ. “ಅವರು ಜನವರಿಯೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಶನಿವಾರ ಚರ್ಚೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿಯು ಆಗಿರುವ ಅವರು ತಿಳಿಸಿದ್ದಾರೆ.

ಆದರೆ, ದೆಹಲಿಯಲ್ಲಿದ್ದ ಫಡ್ನವೀಸ್ ಅವರು, ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ನಿರ್ಧರಿಸಲಾಗಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ. “ನಾನು ನನ್ನ ಪಕ್ಷದ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ನಾಯಕತ್ವದೊಂದಿಗೆ ನಮ್ಮ ಸಂಭಾವ್ಯ ಸಚಿವರ ಬಗ್ಗೆ ಚರ್ಚಿಸುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...