Homeಮುಖಪುಟಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡದಿದ್ದರೆ ಮಹಾರಾಷ್ಟ್ರದ ಮಹಾಯುತಿ ಸರ್ಕಾರಕ್ಕೆ “ಯಾವುದೇ ಅರ್ಥವಿಲ್ಲ” ಎಂದು ಪಕ್ಷದ ವಕ್ತಾರ ಅಮೋಲ್ ಮಿಟ್ಕರಿ ಗುರುವಾರ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅಜಿತ್ ಪವಾರ್ ಅವರು ಕಳೆದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದರು. ಅಜಿತ್‌ ಪವಾರ್‌ಗೆ

ನವೆಂಬರ್ 23 ರಂದು, ಮಹಾಯುತಿ ಮೈತ್ರಿಕೂಟ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣ ಇವೆ.

ಡಿಸೆಂಬರ್ 5 ರಂದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜೊತೆಗೆ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮೈತ್ರಿಕೂಟವು ತನ್ನ ಅಧಿಕಾರ ಹಂಚಿಕೆಯ ಭಾಗವಾಗಿ ಪ್ರಮುಖ ಸಚಿವ ಖಾತೆಗಳ ಬಗ್ಗೆ ಇನ್ನೂ ಘೋಷಣೆಗಳನ್ನು ಮಾಡಿಲ್ಲ. ಅಜಿತ್‌ ಪವಾರ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಜಿತ್ ಪವಾರ್ ಅವರು ತಮ್ಮ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರೊಂದಿಗೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಗುರುವಾರ ಮಿಟ್ಕರಿ ಅವರ ಹೇಳಿಕೆ ಹೊರಬಿದ್ದಿದೆ. ಈ ವೇಳೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಉಪಸ್ಥಿತರಿದ್ದರು.

2024ರ ಚುನಾವಣೆಯ ಮೊದಲು, ಇಡೀ ಮಹಾರಾಷ್ಟ್ರದಲ್ಲಿ ಲಡ್ಕಿ ಬಹಿನ್ ಯೋಜನೆ ಮತ್ತು ರೈತರ ವಿದ್ಯುತ್ ಬಿಲ್‌ಗಳ ಮನ್ನಾ ಮುಂತಾದ ಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ, ಅಜಿತ್ ಪವಾರ್ ಅವರು ಹಣಕಾಸು ಸಚಿವರಾಗಿ ರಾಜ್ಯವು ಹೆಚ್ಚುವರಿ ಆರ್ಥಿಕ ಹೊರೆಗೆ ಸಿಲುಕದಂತೆ ನೋಡಿಕೊಳ್ಳುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಆರ್ಥಿಕ ಶಿಸ್ತು ಖಾತ್ರಿಪಡಿಸಬೇಕಾದರೆ” ಹಣಕಾಸು ಖಾತೆ ಅಜಿತ್ ಪವಾರ್‌ ಅವರಿಗೆ ಹೋಗಬೇಕು ಎಂದು ಮಿಟ್ಕರಿ ಹೇಳಿದ್ದಾರೆ. ಗೃಹ ಸಚಿವಾಲಯವು “ಬಿಜೆಪಿಗೆ ಸರಿಹೊಂದುತ್ತದೆ” ಎಂದು ಅವರು ಹೇಳಿದ್ದು, ಹಣಕಾಸು ಸಚಿವಾಲಯವು “ಎನ್ಸಿಪಿಗೆ ಸರಿಹೊಂದುತ್ತದೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ, ಕಬ್ಬಿನ ಬೆಲೆಗೆ ಸಂಬಂಧಿಸಿದ ವಿಷಯಗಳನ್ನು ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. “ಕಬ್ಬು ದರವನ್ನು ಹೆಚ್ಚಿಸಲು ನಾನು ಅಮಿತ್ ಶಾಗೆ ಮನವಿ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಉಲ್ಲೇಖಿಸಿದೆ. “ಅವರು ಜನವರಿಯೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಶನಿವಾರ ಚರ್ಚೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿಯು ಆಗಿರುವ ಅವರು ತಿಳಿಸಿದ್ದಾರೆ.

ಆದರೆ, ದೆಹಲಿಯಲ್ಲಿದ್ದ ಫಡ್ನವೀಸ್ ಅವರು, ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ನಿರ್ಧರಿಸಲಾಗಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ. “ನಾನು ನನ್ನ ಪಕ್ಷದ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ನಾಯಕತ್ವದೊಂದಿಗೆ ನಮ್ಮ ಸಂಭಾವ್ಯ ಸಚಿವರ ಬಗ್ಗೆ ಚರ್ಚಿಸುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...