Homeಮುಖಪುಟನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

ನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತು ಅಜಿತ್‌ ಪವಾರ್‌ರವರೆ ನಮ್ಮನ್ನು ಮೊದಲು ಸಂಪರ್ಕಿಸಿದ್ದರು.  ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯನ್ನು ಅರ್ಧವನ್ನಷ್ಟೆ ಅವರು ನಮಗೆ ಹೇಳಿದ್ದರು. ನಾವದನ್ನು ನಂಬಿದ್ದೆವು ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮರಾಠಿ ಸುದ್ದಿ ಚಾನೆಲ್ ಝೀ 24 ತಾಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ತಾವು ಏಕೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಅವರೇ ಸ್ವಯಂ ಇಚ್ಛೆಯಿಂದ ತಮ್ಮ ಬಳಿಗೆ ಬಂದರು ಮತ್ತು ಅವರು ಸರ್ಕಾರವನ್ನು ರಚಿಸಲು ಕೈಜೋಡಿಸಿದರು. ಇದೆಲ್ಲವೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರಿಗೆ ತಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಭೇಟಿಯ ವೇಳೆ ಈ ಎಲ್ಲಾ ವಿಚಾರಗಳನ್ನು ಮಾತನಾಡಿದ್ದಾರೆ, ಹಾಗಾಗಿ ಸರ್ಕಾರ ರಚಿಸಲು ಅಡ್ಡಿಯಿಲ್ಲ ಎಂದು ತಮಗೆ ಬೇಕಾಗ ಹಾಗೆ ಮಾಹಿತಿನ್ನು ನೀಡಿದ್ದರು ಎಂದ ಫಡ್ನವೀಸ್, ಅದರ ಬಗ್ಗೆ ಉಳಿದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯವಾಗದ ಕಾರಣ ಹೆಚ್ಚಿನ ಎನ್‌ಸಿಪಿ ಶಾಸಕರು ಬಿಜೆಪಿಯೊಂದಿಗೆ ಹೋಗಲು ಬಯಸಿದ್ದಾರೆ ಎಂದು ಅಜಿತ್ ಪವಾರ್ ಹೇಳಿದ್ದರು. ಜೊತೆಗೆ ಕೆಲವು ಶಾಸಕರಿಗೆ ಫೋನ್ ಮಾಡಿಸಿ ನನ್ನೊಡನೆ ಮಾತನಾಡಿಸಿದ್ದರು. ಫಲಿತಾಂಶ ಪ್ರಕಟವಾಗಿ ತಿಂಗಳಾದರೂ “ಅಜಿತ್ ಪವಾರ್ ನಮ್ಮನ್ನು ಸಂಪರ್ಕಿಸುವವರೆಗೂ ನಾವು ಯಾವುದೇ ಶಾಸಕರನ್ನು ಸೆಳೆಯುವ ಅಥವಾ ಯಾವುದೇ ಪಕ್ಷವನ್ನು ವಿಭಜಿಸುವ ಪ್ರಯತ್ನ ಮಾಡಿರಲಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.

ನವೆಂಬರ್ 23 ರಂದು ಪ್ರಮಾಣವಚನ ಸ್ವೀಕಾರಕ್ಕೆ ಸುಮಾರು ಒಂದೆರಡು ದಿನ ಮುಂಚಿತವಾಗಿ, ಅಜಿತ್ ಪವಾರ್ ನಮ್ಮ ಬಳಿಗೆ ಬಂದರು. ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಲು ತಮ್ಮ ಇಡೀ ಪಕ್ಷ ಸಿದ್ಧವಾಗಿದೆ ಎಂದರು. ಈ ಕ್ರಮದ ಬಗ್ಗೆ ಶರದ್ ಪವಾರ್ ಅವರಿಗೆ ಸಂಪೂರ್ಣ ತಿಳಿದಿದೆ ಎಂದು ಅವರು ನಮಗೆ ತಿಳಿಸಿದರು. ಇದು ಜೂಜಾಟ ಎಂದು ನಮಗೆ ತಿಳಿದಿತ್ತು, ಆದರೆ ರಾಜಕೀಯದಲ್ಲಿ ಜೂಜು ಅನಿವಾರ್ಯವಾಗಿದೆ, ಆದರೂ ಈ ಸಂದರ್ಭದಲ್ಲಿ ಅದು ವಿಫಲವಾಗಿದೆ ಎಂದು ಫಡ್ನವಿಸ್‌ ತಿಳಿಸಿದ್ದಾರೆ.

ನವೆಂಬರ್ 23 ರಂದು ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು, ನಂತರ ಸರ್ಕಾರ ರಚಿಸಲು 54 ಎನ್‌ಸಿಪಿ ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಲಾಯಿತು. ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ಶಾಸಕರು ಯಾರೂ ಅಜಿತ್‌ ಪವಾರ್‌ ಜೊತೆ ಹೋಗಲು ಬಿಡಲಿಲ್ಲ. ಎನ್‌ಸಿಪಿ ಶಾಸಕರು ತಮ್ಮೊಂದಿಗೆ ಇಲ್ಲ ಎಂದು ತಿಳಿದ ನಂತರ ಇಬ್ಬರೂ ಮೂರು ದಿನಗಳಲ್ಲಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಇತ್ತೀಚಿನ ಸಂದರ್ಶನವೊಂದರಲ್ಲಿ, ಶರದ್ ಪವಾರ್ ಅವರು ನವೆಂಬರ್ 20 ರಂದು ನಡೆದ ಸಭೆಯಲ್ಲಿ ನರೇಂದ್ರ ಮೋದಿಯವರು ಜೊತೆಗೂಡಿ ಕೆಲಸ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದರು. ಜೊತೆಗೆ ಪವಾರ್‌ ಅವರ ಪುತ್ರಿ ಸುಪ್ರಿಯ ಸುಳೆಗೆ ಕೇಂದ್ರ ಮಂತ್ರಿ ಸ್ಥಾನ ನೀಡುವ ಆಫರ್‌ ಸಹ ನೀಡಿದ್ದರು. ಆದರೆ ನನು ಅದನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...