Homeಮುಖಪುಟನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

ನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತು ಅಜಿತ್‌ ಪವಾರ್‌ರವರೆ ನಮ್ಮನ್ನು ಮೊದಲು ಸಂಪರ್ಕಿಸಿದ್ದರು.  ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯನ್ನು ಅರ್ಧವನ್ನಷ್ಟೆ ಅವರು ನಮಗೆ ಹೇಳಿದ್ದರು. ನಾವದನ್ನು ನಂಬಿದ್ದೆವು ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮರಾಠಿ ಸುದ್ದಿ ಚಾನೆಲ್ ಝೀ 24 ತಾಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ತಾವು ಏಕೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಅವರೇ ಸ್ವಯಂ ಇಚ್ಛೆಯಿಂದ ತಮ್ಮ ಬಳಿಗೆ ಬಂದರು ಮತ್ತು ಅವರು ಸರ್ಕಾರವನ್ನು ರಚಿಸಲು ಕೈಜೋಡಿಸಿದರು. ಇದೆಲ್ಲವೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರಿಗೆ ತಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಭೇಟಿಯ ವೇಳೆ ಈ ಎಲ್ಲಾ ವಿಚಾರಗಳನ್ನು ಮಾತನಾಡಿದ್ದಾರೆ, ಹಾಗಾಗಿ ಸರ್ಕಾರ ರಚಿಸಲು ಅಡ್ಡಿಯಿಲ್ಲ ಎಂದು ತಮಗೆ ಬೇಕಾಗ ಹಾಗೆ ಮಾಹಿತಿನ್ನು ನೀಡಿದ್ದರು ಎಂದ ಫಡ್ನವೀಸ್, ಅದರ ಬಗ್ಗೆ ಉಳಿದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯವಾಗದ ಕಾರಣ ಹೆಚ್ಚಿನ ಎನ್‌ಸಿಪಿ ಶಾಸಕರು ಬಿಜೆಪಿಯೊಂದಿಗೆ ಹೋಗಲು ಬಯಸಿದ್ದಾರೆ ಎಂದು ಅಜಿತ್ ಪವಾರ್ ಹೇಳಿದ್ದರು. ಜೊತೆಗೆ ಕೆಲವು ಶಾಸಕರಿಗೆ ಫೋನ್ ಮಾಡಿಸಿ ನನ್ನೊಡನೆ ಮಾತನಾಡಿಸಿದ್ದರು. ಫಲಿತಾಂಶ ಪ್ರಕಟವಾಗಿ ತಿಂಗಳಾದರೂ “ಅಜಿತ್ ಪವಾರ್ ನಮ್ಮನ್ನು ಸಂಪರ್ಕಿಸುವವರೆಗೂ ನಾವು ಯಾವುದೇ ಶಾಸಕರನ್ನು ಸೆಳೆಯುವ ಅಥವಾ ಯಾವುದೇ ಪಕ್ಷವನ್ನು ವಿಭಜಿಸುವ ಪ್ರಯತ್ನ ಮಾಡಿರಲಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.

ನವೆಂಬರ್ 23 ರಂದು ಪ್ರಮಾಣವಚನ ಸ್ವೀಕಾರಕ್ಕೆ ಸುಮಾರು ಒಂದೆರಡು ದಿನ ಮುಂಚಿತವಾಗಿ, ಅಜಿತ್ ಪವಾರ್ ನಮ್ಮ ಬಳಿಗೆ ಬಂದರು. ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಲು ತಮ್ಮ ಇಡೀ ಪಕ್ಷ ಸಿದ್ಧವಾಗಿದೆ ಎಂದರು. ಈ ಕ್ರಮದ ಬಗ್ಗೆ ಶರದ್ ಪವಾರ್ ಅವರಿಗೆ ಸಂಪೂರ್ಣ ತಿಳಿದಿದೆ ಎಂದು ಅವರು ನಮಗೆ ತಿಳಿಸಿದರು. ಇದು ಜೂಜಾಟ ಎಂದು ನಮಗೆ ತಿಳಿದಿತ್ತು, ಆದರೆ ರಾಜಕೀಯದಲ್ಲಿ ಜೂಜು ಅನಿವಾರ್ಯವಾಗಿದೆ, ಆದರೂ ಈ ಸಂದರ್ಭದಲ್ಲಿ ಅದು ವಿಫಲವಾಗಿದೆ ಎಂದು ಫಡ್ನವಿಸ್‌ ತಿಳಿಸಿದ್ದಾರೆ.

ನವೆಂಬರ್ 23 ರಂದು ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು, ನಂತರ ಸರ್ಕಾರ ರಚಿಸಲು 54 ಎನ್‌ಸಿಪಿ ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಲಾಯಿತು. ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ಶಾಸಕರು ಯಾರೂ ಅಜಿತ್‌ ಪವಾರ್‌ ಜೊತೆ ಹೋಗಲು ಬಿಡಲಿಲ್ಲ. ಎನ್‌ಸಿಪಿ ಶಾಸಕರು ತಮ್ಮೊಂದಿಗೆ ಇಲ್ಲ ಎಂದು ತಿಳಿದ ನಂತರ ಇಬ್ಬರೂ ಮೂರು ದಿನಗಳಲ್ಲಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಇತ್ತೀಚಿನ ಸಂದರ್ಶನವೊಂದರಲ್ಲಿ, ಶರದ್ ಪವಾರ್ ಅವರು ನವೆಂಬರ್ 20 ರಂದು ನಡೆದ ಸಭೆಯಲ್ಲಿ ನರೇಂದ್ರ ಮೋದಿಯವರು ಜೊತೆಗೂಡಿ ಕೆಲಸ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದರು. ಜೊತೆಗೆ ಪವಾರ್‌ ಅವರ ಪುತ್ರಿ ಸುಪ್ರಿಯ ಸುಳೆಗೆ ಕೇಂದ್ರ ಮಂತ್ರಿ ಸ್ಥಾನ ನೀಡುವ ಆಫರ್‌ ಸಹ ನೀಡಿದ್ದರು. ಆದರೆ ನನು ಅದನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...