Homeಮುಖಪುಟನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

ನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತು ಅಜಿತ್‌ ಪವಾರ್‌ರವರೆ ನಮ್ಮನ್ನು ಮೊದಲು ಸಂಪರ್ಕಿಸಿದ್ದರು.  ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯನ್ನು ಅರ್ಧವನ್ನಷ್ಟೆ ಅವರು ನಮಗೆ ಹೇಳಿದ್ದರು. ನಾವದನ್ನು ನಂಬಿದ್ದೆವು ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮರಾಠಿ ಸುದ್ದಿ ಚಾನೆಲ್ ಝೀ 24 ತಾಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ತಾವು ಏಕೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಅವರೇ ಸ್ವಯಂ ಇಚ್ಛೆಯಿಂದ ತಮ್ಮ ಬಳಿಗೆ ಬಂದರು ಮತ್ತು ಅವರು ಸರ್ಕಾರವನ್ನು ರಚಿಸಲು ಕೈಜೋಡಿಸಿದರು. ಇದೆಲ್ಲವೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರಿಗೆ ತಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಭೇಟಿಯ ವೇಳೆ ಈ ಎಲ್ಲಾ ವಿಚಾರಗಳನ್ನು ಮಾತನಾಡಿದ್ದಾರೆ, ಹಾಗಾಗಿ ಸರ್ಕಾರ ರಚಿಸಲು ಅಡ್ಡಿಯಿಲ್ಲ ಎಂದು ತಮಗೆ ಬೇಕಾಗ ಹಾಗೆ ಮಾಹಿತಿನ್ನು ನೀಡಿದ್ದರು ಎಂದ ಫಡ್ನವೀಸ್, ಅದರ ಬಗ್ಗೆ ಉಳಿದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯವಾಗದ ಕಾರಣ ಹೆಚ್ಚಿನ ಎನ್‌ಸಿಪಿ ಶಾಸಕರು ಬಿಜೆಪಿಯೊಂದಿಗೆ ಹೋಗಲು ಬಯಸಿದ್ದಾರೆ ಎಂದು ಅಜಿತ್ ಪವಾರ್ ಹೇಳಿದ್ದರು. ಜೊತೆಗೆ ಕೆಲವು ಶಾಸಕರಿಗೆ ಫೋನ್ ಮಾಡಿಸಿ ನನ್ನೊಡನೆ ಮಾತನಾಡಿಸಿದ್ದರು. ಫಲಿತಾಂಶ ಪ್ರಕಟವಾಗಿ ತಿಂಗಳಾದರೂ “ಅಜಿತ್ ಪವಾರ್ ನಮ್ಮನ್ನು ಸಂಪರ್ಕಿಸುವವರೆಗೂ ನಾವು ಯಾವುದೇ ಶಾಸಕರನ್ನು ಸೆಳೆಯುವ ಅಥವಾ ಯಾವುದೇ ಪಕ್ಷವನ್ನು ವಿಭಜಿಸುವ ಪ್ರಯತ್ನ ಮಾಡಿರಲಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.

ನವೆಂಬರ್ 23 ರಂದು ಪ್ರಮಾಣವಚನ ಸ್ವೀಕಾರಕ್ಕೆ ಸುಮಾರು ಒಂದೆರಡು ದಿನ ಮುಂಚಿತವಾಗಿ, ಅಜಿತ್ ಪವಾರ್ ನಮ್ಮ ಬಳಿಗೆ ಬಂದರು. ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಲು ತಮ್ಮ ಇಡೀ ಪಕ್ಷ ಸಿದ್ಧವಾಗಿದೆ ಎಂದರು. ಈ ಕ್ರಮದ ಬಗ್ಗೆ ಶರದ್ ಪವಾರ್ ಅವರಿಗೆ ಸಂಪೂರ್ಣ ತಿಳಿದಿದೆ ಎಂದು ಅವರು ನಮಗೆ ತಿಳಿಸಿದರು. ಇದು ಜೂಜಾಟ ಎಂದು ನಮಗೆ ತಿಳಿದಿತ್ತು, ಆದರೆ ರಾಜಕೀಯದಲ್ಲಿ ಜೂಜು ಅನಿವಾರ್ಯವಾಗಿದೆ, ಆದರೂ ಈ ಸಂದರ್ಭದಲ್ಲಿ ಅದು ವಿಫಲವಾಗಿದೆ ಎಂದು ಫಡ್ನವಿಸ್‌ ತಿಳಿಸಿದ್ದಾರೆ.

ನವೆಂಬರ್ 23 ರಂದು ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು, ನಂತರ ಸರ್ಕಾರ ರಚಿಸಲು 54 ಎನ್‌ಸಿಪಿ ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಲಾಯಿತು. ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ಶಾಸಕರು ಯಾರೂ ಅಜಿತ್‌ ಪವಾರ್‌ ಜೊತೆ ಹೋಗಲು ಬಿಡಲಿಲ್ಲ. ಎನ್‌ಸಿಪಿ ಶಾಸಕರು ತಮ್ಮೊಂದಿಗೆ ಇಲ್ಲ ಎಂದು ತಿಳಿದ ನಂತರ ಇಬ್ಬರೂ ಮೂರು ದಿನಗಳಲ್ಲಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಇತ್ತೀಚಿನ ಸಂದರ್ಶನವೊಂದರಲ್ಲಿ, ಶರದ್ ಪವಾರ್ ಅವರು ನವೆಂಬರ್ 20 ರಂದು ನಡೆದ ಸಭೆಯಲ್ಲಿ ನರೇಂದ್ರ ಮೋದಿಯವರು ಜೊತೆಗೂಡಿ ಕೆಲಸ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದರು. ಜೊತೆಗೆ ಪವಾರ್‌ ಅವರ ಪುತ್ರಿ ಸುಪ್ರಿಯ ಸುಳೆಗೆ ಕೇಂದ್ರ ಮಂತ್ರಿ ಸ್ಥಾನ ನೀಡುವ ಆಫರ್‌ ಸಹ ನೀಡಿದ್ದರು. ಆದರೆ ನನು ಅದನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...