Homeಮುಖಪುಟನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

ನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತು ಅಜಿತ್‌ ಪವಾರ್‌ರವರೆ ನಮ್ಮನ್ನು ಮೊದಲು ಸಂಪರ್ಕಿಸಿದ್ದರು.  ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯನ್ನು ಅರ್ಧವನ್ನಷ್ಟೆ ಅವರು ನಮಗೆ ಹೇಳಿದ್ದರು. ನಾವದನ್ನು ನಂಬಿದ್ದೆವು ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮರಾಠಿ ಸುದ್ದಿ ಚಾನೆಲ್ ಝೀ 24 ತಾಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ತಾವು ಏಕೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಅವರೇ ಸ್ವಯಂ ಇಚ್ಛೆಯಿಂದ ತಮ್ಮ ಬಳಿಗೆ ಬಂದರು ಮತ್ತು ಅವರು ಸರ್ಕಾರವನ್ನು ರಚಿಸಲು ಕೈಜೋಡಿಸಿದರು. ಇದೆಲ್ಲವೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರಿಗೆ ತಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಭೇಟಿಯ ವೇಳೆ ಈ ಎಲ್ಲಾ ವಿಚಾರಗಳನ್ನು ಮಾತನಾಡಿದ್ದಾರೆ, ಹಾಗಾಗಿ ಸರ್ಕಾರ ರಚಿಸಲು ಅಡ್ಡಿಯಿಲ್ಲ ಎಂದು ತಮಗೆ ಬೇಕಾಗ ಹಾಗೆ ಮಾಹಿತಿನ್ನು ನೀಡಿದ್ದರು ಎಂದ ಫಡ್ನವೀಸ್, ಅದರ ಬಗ್ಗೆ ಉಳಿದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯವಾಗದ ಕಾರಣ ಹೆಚ್ಚಿನ ಎನ್‌ಸಿಪಿ ಶಾಸಕರು ಬಿಜೆಪಿಯೊಂದಿಗೆ ಹೋಗಲು ಬಯಸಿದ್ದಾರೆ ಎಂದು ಅಜಿತ್ ಪವಾರ್ ಹೇಳಿದ್ದರು. ಜೊತೆಗೆ ಕೆಲವು ಶಾಸಕರಿಗೆ ಫೋನ್ ಮಾಡಿಸಿ ನನ್ನೊಡನೆ ಮಾತನಾಡಿಸಿದ್ದರು. ಫಲಿತಾಂಶ ಪ್ರಕಟವಾಗಿ ತಿಂಗಳಾದರೂ “ಅಜಿತ್ ಪವಾರ್ ನಮ್ಮನ್ನು ಸಂಪರ್ಕಿಸುವವರೆಗೂ ನಾವು ಯಾವುದೇ ಶಾಸಕರನ್ನು ಸೆಳೆಯುವ ಅಥವಾ ಯಾವುದೇ ಪಕ್ಷವನ್ನು ವಿಭಜಿಸುವ ಪ್ರಯತ್ನ ಮಾಡಿರಲಿಲ್ಲ ಎಂದು ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.

ನವೆಂಬರ್ 23 ರಂದು ಪ್ರಮಾಣವಚನ ಸ್ವೀಕಾರಕ್ಕೆ ಸುಮಾರು ಒಂದೆರಡು ದಿನ ಮುಂಚಿತವಾಗಿ, ಅಜಿತ್ ಪವಾರ್ ನಮ್ಮ ಬಳಿಗೆ ಬಂದರು. ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಲು ತಮ್ಮ ಇಡೀ ಪಕ್ಷ ಸಿದ್ಧವಾಗಿದೆ ಎಂದರು. ಈ ಕ್ರಮದ ಬಗ್ಗೆ ಶರದ್ ಪವಾರ್ ಅವರಿಗೆ ಸಂಪೂರ್ಣ ತಿಳಿದಿದೆ ಎಂದು ಅವರು ನಮಗೆ ತಿಳಿಸಿದರು. ಇದು ಜೂಜಾಟ ಎಂದು ನಮಗೆ ತಿಳಿದಿತ್ತು, ಆದರೆ ರಾಜಕೀಯದಲ್ಲಿ ಜೂಜು ಅನಿವಾರ್ಯವಾಗಿದೆ, ಆದರೂ ಈ ಸಂದರ್ಭದಲ್ಲಿ ಅದು ವಿಫಲವಾಗಿದೆ ಎಂದು ಫಡ್ನವಿಸ್‌ ತಿಳಿಸಿದ್ದಾರೆ.

ನವೆಂಬರ್ 23 ರಂದು ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು, ನಂತರ ಸರ್ಕಾರ ರಚಿಸಲು 54 ಎನ್‌ಸಿಪಿ ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಲಾಯಿತು. ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ಶಾಸಕರು ಯಾರೂ ಅಜಿತ್‌ ಪವಾರ್‌ ಜೊತೆ ಹೋಗಲು ಬಿಡಲಿಲ್ಲ. ಎನ್‌ಸಿಪಿ ಶಾಸಕರು ತಮ್ಮೊಂದಿಗೆ ಇಲ್ಲ ಎಂದು ತಿಳಿದ ನಂತರ ಇಬ್ಬರೂ ಮೂರು ದಿನಗಳಲ್ಲಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಇತ್ತೀಚಿನ ಸಂದರ್ಶನವೊಂದರಲ್ಲಿ, ಶರದ್ ಪವಾರ್ ಅವರು ನವೆಂಬರ್ 20 ರಂದು ನಡೆದ ಸಭೆಯಲ್ಲಿ ನರೇಂದ್ರ ಮೋದಿಯವರು ಜೊತೆಗೂಡಿ ಕೆಲಸ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದರು. ಜೊತೆಗೆ ಪವಾರ್‌ ಅವರ ಪುತ್ರಿ ಸುಪ್ರಿಯ ಸುಳೆಗೆ ಕೇಂದ್ರ ಮಂತ್ರಿ ಸ್ಥಾನ ನೀಡುವ ಆಫರ್‌ ಸಹ ನೀಡಿದ್ದರು. ಆದರೆ ನನು ಅದನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...