Homeಮುಖಪುಟಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಸೇರ್ಪಡೆಗೊಂಡಂತೆ ಸಿಎಂ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನಾ ಶಾಸಕ ಸಂಜಯ್ ಶಿರ್ಸಾತ್ ಮಾತನಾಡಿ, “ಪಕ್ಷದ ಕೆಲವು ನಾಯಕರು ಅಜಿತ್ ಪವಾರ್ ಅವರ ಎನ್‌ಸಿಪಿ ಬಣವನ್ನು ಸರ್ಕಾರಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಅಸಮಾಧಾನ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

“ರಾಜಕೀಯದಲ್ಲಿ ನಮ್ಮ ಎದುರಾಳಿ ಗ್ಯಾಂಗ್ ನಮ್ಮೊಂದಿಗೆ ಸೇರಲು ಬಯಸಿದಾಗ, ನಾವು ಅವರನ್ನು ತೆಗೆದುಕೊಳ್ಳಬೇಕು. ಹಾಗಾಗಿ ಬಿಜೆಪಿ ಅವರನ್ನು ಬರಮಾಡಿಕೊಂಡಿದೆ. ಆದರೆ ಎನ್‌ಸಿಪಿ ಶಾಸಕರು ನಮ್ಮೊಂದಿಗೆ ಸೇರಿಕೊಂಡ ನಂತರ ನಮ್ಮ ಗುಂಪಿನಲ್ಲಿರುವ ಜನರು ಅಸಮಾಧಾನಗೊಂಡಿದ್ದಾರೆ. ಏಕೆಂದರೆ ನಮ್ಮ ಕೆಲವು ಶಾಸಕರಿಗೆ ಅವರು ಬಯಸಿದ ಸ್ಥಾನಗಳು ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಿಂಧೆ ಸೇನೆಯ ಶಾಸಕರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಶಿವಸೇನೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ. ಇದು ಅವರ ಬಣದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಜಿತ್ ಪವಾರ್ ಅವರು ಶಿವಸೇನೆ ಶಾಸಕರಿಗೆ ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡುತ್ತಿದ್ದರು ಎಂದು ಹಲವು ಶಾಸಕರು ದೂರಿದ್ದರು. ತಾವು ಎಂವಿಎ ಸರ್ಕಾರದಿಂದ ಹೊರಬರಲು ಅದು ಸಹ ಒಂದು ಕಾರಣ ಎಂದು ಹೇಳಿದ್ದರು. ಆದರೆ ಈಗ ಅದೇ ಅಜಿತ್ ಪವಾರ್ ಶಿಂಧೆ ಸಂಪುಟದಲ್ಲಿಯೂ ಹಣಕಾಸು ಸಚಿವರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಶಿಂಧೆ ಬಣದ ಶಿವಸೇನೆ ಶಾಸಕರಿಗೆ ಇರಿಸು ಮುರಿಸು ಉಂಟು ಮಾಡಿದೆ.

ಇದನ್ನೂ ಓದಿ; ವಿಪಕ್ಷಗಳ ಮೈತ್ರಿ: ಬಿಜೆಪಿಯನ್ನು 2024ರಲ್ಲಿ ಅಧಿಕಾರದಿಂದ ದೂರವಿಡಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...