Homeಮುಖಪುಟಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಸೇರ್ಪಡೆಗೊಂಡಂತೆ ಸಿಎಂ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನಾ ಶಾಸಕ ಸಂಜಯ್ ಶಿರ್ಸಾತ್ ಮಾತನಾಡಿ, “ಪಕ್ಷದ ಕೆಲವು ನಾಯಕರು ಅಜಿತ್ ಪವಾರ್ ಅವರ ಎನ್‌ಸಿಪಿ ಬಣವನ್ನು ಸರ್ಕಾರಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಅಸಮಾಧಾನ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

“ರಾಜಕೀಯದಲ್ಲಿ ನಮ್ಮ ಎದುರಾಳಿ ಗ್ಯಾಂಗ್ ನಮ್ಮೊಂದಿಗೆ ಸೇರಲು ಬಯಸಿದಾಗ, ನಾವು ಅವರನ್ನು ತೆಗೆದುಕೊಳ್ಳಬೇಕು. ಹಾಗಾಗಿ ಬಿಜೆಪಿ ಅವರನ್ನು ಬರಮಾಡಿಕೊಂಡಿದೆ. ಆದರೆ ಎನ್‌ಸಿಪಿ ಶಾಸಕರು ನಮ್ಮೊಂದಿಗೆ ಸೇರಿಕೊಂಡ ನಂತರ ನಮ್ಮ ಗುಂಪಿನಲ್ಲಿರುವ ಜನರು ಅಸಮಾಧಾನಗೊಂಡಿದ್ದಾರೆ. ಏಕೆಂದರೆ ನಮ್ಮ ಕೆಲವು ಶಾಸಕರಿಗೆ ಅವರು ಬಯಸಿದ ಸ್ಥಾನಗಳು ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಿಂಧೆ ಸೇನೆಯ ಶಾಸಕರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಶಿವಸೇನೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ. ಇದು ಅವರ ಬಣದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಜಿತ್ ಪವಾರ್ ಅವರು ಶಿವಸೇನೆ ಶಾಸಕರಿಗೆ ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡುತ್ತಿದ್ದರು ಎಂದು ಹಲವು ಶಾಸಕರು ದೂರಿದ್ದರು. ತಾವು ಎಂವಿಎ ಸರ್ಕಾರದಿಂದ ಹೊರಬರಲು ಅದು ಸಹ ಒಂದು ಕಾರಣ ಎಂದು ಹೇಳಿದ್ದರು. ಆದರೆ ಈಗ ಅದೇ ಅಜಿತ್ ಪವಾರ್ ಶಿಂಧೆ ಸಂಪುಟದಲ್ಲಿಯೂ ಹಣಕಾಸು ಸಚಿವರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಶಿಂಧೆ ಬಣದ ಶಿವಸೇನೆ ಶಾಸಕರಿಗೆ ಇರಿಸು ಮುರಿಸು ಉಂಟು ಮಾಡಿದೆ.

ಇದನ್ನೂ ಓದಿ; ವಿಪಕ್ಷಗಳ ಮೈತ್ರಿ: ಬಿಜೆಪಿಯನ್ನು 2024ರಲ್ಲಿ ಅಧಿಕಾರದಿಂದ ದೂರವಿಡಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...