Homeಮುಖಪುಟಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

ಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

- Advertisement -
- Advertisement -

ಏಕನಾಥ್ ಶಿಂಧೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಬಂಡಾಯ ಎನ್‌ಸಿಪಿ) ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಗಡ್ಚಿರೋಲಿ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಡೆತ್ತಿವಾರ್, ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ  ನಂತರ ಅವರ ಆರೋಗ್ಯದ ಕಾರಣ ಹೇಳಿ ಶಿಂಧೆ ಅವರನ್ನು ಬದಲಿಸಿ ಬಂಡಾಯ ಎನ್‌ಸಿಪಿ ಎಂಎಲ್‌ನ ಗುಂಪಿನ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಸಿಎಂ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಬಂಡಾಯ ಎನ್‌ಸಿಪಿ ಶಾಸಕರ ಗುಂಪಿನ ಮುಖ್ಯಸ್ಥರಾದ ಅಜಿತ್ ಪವಾರ್ ಅವರು ಇತ್ತೀಚೆಗೆ ಪುಣೆಯಲ್ಲಿ ಭೇಟಿಯಾದರು.ಅಜಿತ್‌ಗೆ ನಿಷ್ಠರಾಗಿರುವ ಶಾಸಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಸಿಎಂ 24 ಗಂಟೆಗಳ ಕಾಲ ಕೆಲಸ ಮಾಡುತ್ತಿರುವುದರಿಂದ ಸಿಎಂ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅವರ ಬೆಂಬಲಿಗ ಮತ್ತು ಶಾಸಕ ಸಂಜಯ್ ಶಿರ್ಸತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.ಏಕನಾಥ್ ಶಿಂಧೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮತ್ತು ಅವರ ಬದಲಿಗೆ ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಹೊರಬರುತ್ತಿದೆ ಎಂದು ವಡೆತ್ತಿವಾರ್ ಹೇಳಿದರು.

ಶಿಂಧೆ ಅವರು ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಕೂಡ ಹೇಳಿಕೆ ನೀಡಿದ್ದಾರೆ ಎಂದು  ವಾಡೆತ್ತಿವಾರ್ ಹೇಳಿದ್ದಾರೆ. ಅವರು ಶಿಂಧೆ ಅವರನ್ನು ಎರಡು ತಿಂಗಳ ಕಾಲ ಆಸ್ಪತ್ರೆಗೆ ದಾಖಲಿಸಬಹುದು ಮತ್ತು ವೈದ್ಯಕೀಯ ಕಾರಣ ನೀಡಿ ಅವರನ್ನು ಬದಲಾಯಿಸಬಹುದು ಎಂದು ನಾನು ಭಯಪಡುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನಾ ಮುಖವಾಣಿ ಸಾಮ್ನಾ, ಸಿಎಂ ಶಿಂಧೆ ಅವರ ‘ಅನಾರೋಗ್ಯ’ದ ಬಗ್ಗೆ ಶಾಸಕ ಶಿರ್ಸತ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ. ಶಿಂಧೆ ಅವರು 24 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ, ಆದರೆ ಇದು ರಾಜ್ಯದಲ್ಲಿ ಎಲ್ಲಿಯೂ ಪ್ರತಿಫಲಿಸಿರುವುದು ಕಂಡಿಲ್ಲ. ಅವರು ಹುದ್ದೆ ಕಳೆದುಕೊಳ್ಳುವ ಭಯದಿಂದ ನಿದ್ದೆ ಕಳೆದುಕೊಂಡಿರಬಹುದು ಎಂದು ಹೇಳಿದೆ.

ಶಿರ್ಸತ್ ಅವರ ಹೇಳಿಕೆಗಳು ನಿಜವಾಗಿದ್ದರೆ, ಶಿಂಧೆ ಅವರನ್ನು ಐಸಿಯುಗೆ ಸೇರಿಸಬೇಕು ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ಭೇಟಿಯಾಗದಂತೆ ದೂರ ಇಡಬೇಕು. ಶಿಂಧೆ ಅವರನ್ನು ಮುಂಬೈ ಅಥವಾ ಥಾಣೆಯಲ್ಲಿರುವ ಒಳ್ಳೆಯ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸಾಮ್ನಾ ಸಂಪಾದಕೀಯ ವ್ಯಂಗ್ಯವಾಗಿ ಹೇಳಿದೆ.

ಇದನ್ನು ಓದಿ: ಮೋದಿಯವರ ‘ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ’: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...