Homeನ್ಯಾಯ ಪಥಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

ಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

- Advertisement -
- Advertisement -

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳಲ್ಲೇ ಅವರ ಮೇಲಿದ್ದ ವಿದರ್ಭ ನೀರಾವರಿ ಹಗರಣ ಪ್ರಕರಣವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ ಮುಕ್ತಾಯಗೊಳಿಸಿದೆ.

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಎಸಿಬಿ ಮಹಾನಿರ್ದೇಶಕ ಬಿಪಿನ್ ಕುಮಾರ್ ಸಿಂಗ್ ನೀರಾವರಿ ಸಂಬಂಧಿ 9 ಹಗರಣಗಳನ್ನು ಮುಕ್ತಾಯ ಮಾಡಿದ್ದಾರೆ. ಆ ಪತ್ರದಲ್ಲಿ ಎಲ್ಲಿಯೂ ಅಜಿತ್ ಪವಾರ್ ಹೆಸರಿಲ್ಲದಿರುವುದು ಪ್ರಶ್ನಾರ್ಹವಾಗಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳನ್ನು ಅಜಿತ್ ಪವಾರ್ ವಿರುದ್ಧ ದಾಖಲಿಸಲಾಗಿತ್ತು. ವಿದರ್ಭ ವಲಯದ ವಾಪಿಮ್, ಯಾವತ್ಮಾಲ್, ಅಮ್ರಾವತಿ, ಬುಲ್ದಾನ ಪ್ರದೇಶದಲ್ಲಿ ಹಗರಣ ನಡೆದಿದ್ದು 2018ರಲ್ಲಿ ಅಜಿತ್ ವಿರುದ್ದ ಎಸಿಬಿ ಪ್ರಕರಣ ದಾಖಲಿಸಿತ್ತು.

ಎಸಿಬಿ ಪ್ರಸ್ತುತ 3000 ವಿವಿಧ ಟೆಂಡರ್ ಗಳ ಕುರಿತು ತನಿಖೆ ನಡೆಸುತ್ತಿರುವುದನ್ನು ಕೈಬಿಡಲಾಗಿದೆ. ಇದು ವಾಡಿಕೆಯ ಕೆಲಸ. ಆದರೆ ಪ್ರಮುಖ ತನಿಖೆಗೆ ಮುಂದುವರೆದಿದೆ ಎಂದು ಎಸಿಬಿ ಹೇಳಿದೆ

ಇದರಲ್ಲಿ ಆಶ್ಚರ್ಯವೇನಿಲ್ಲ, ಇದು “ಸಾರ್ವಜನಿಕ ಹಿತಾಸಕ್ತಿ”ಗಾಗಿ ಬಿಜೆಪಿ ತೆಗೆದುಕೊಂಡ ಏಕೈಕ ನಿರ್ಧಾರವಾಗಿದೆ. ಅಜಿತ್‌ ಪವಾರ್‌ರವರ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಎಲ್ಲಾ ಪ್ರಕರಣಗಳನ್ನು ಮುಚ್ಚುವುದು ಸಾರ್ವಜನಿಕ ಜೀವನದಲ್ಲಿ ಬಿಜೆಪಿ ಸಂಭವನೀಯತೆಯ ಮಾರ್ಗವಾಗಿದೆ ”ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಎಂದಿಗೂ, ಎಂದಿಗೂ, ಎಂದಿಗೂ ಶಾಶ್ವತವಾಗಿ, ಶಾಶ್ವತವಾಗಿ, ಶಾಶ್ವತವಾಗಿ. ತಾತ್ಕಾಲಿಕ ಸಿಎಂ ತನ್ನ ತಾತ್ಕಾಲಿಕ ಉಪಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವ ಮೊದಲ ಆದೇಶಕ್ಕೆ ಸಹಿ ಹಾಕಿದ್ದೀರಾ? ”ಎಂದು ಶಿವಸೇನೆಯ ಪ್ರಿಯಾಂಕ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರ್, ಅಜಿತ್ ಪವಾರ್ ವಿರುದ್ದ ಇದ್ದ ನೀರಾವರಿ ಹಗಣವನ್ನುಎಸಿಬಿ ಕೈಬಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಎದ್ದಿದ್ದವು ಅದು ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದರು. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ ಎಂದು. ಆ ಘೋಷಣೆ ಏನು? ಯಾರಿಗಾಗಿ ಎಲ್ಲವೂ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಅಜಿತ್‌ ಪವಾರ್ ಅವರು 1999 ರಿಂದ ಸುಮಾರು ಒಂದು ದಶಕಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ 32 ನೀರಾವರಿ ಯೋಜನೆಗಳ ವೆಚ್ಚ ಹೆಚ್ಚಳವನ್ನು 17,000 ಕೋಟಿ ರೂ.ಗಳಿಗಿಂತ ಹೆಚ್ಚು ತೆರವುಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪದ ನಂತರ, ಪವಾರ್ ಅವರು ಮೂರು ತಿಂಗಳು ಸಂಪುಟದಿಂದ ಹೊರಬಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...