Homeನ್ಯಾಯ ಪಥಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

ಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

- Advertisement -
- Advertisement -

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳಲ್ಲೇ ಅವರ ಮೇಲಿದ್ದ ವಿದರ್ಭ ನೀರಾವರಿ ಹಗರಣ ಪ್ರಕರಣವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ ಮುಕ್ತಾಯಗೊಳಿಸಿದೆ.

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಎಸಿಬಿ ಮಹಾನಿರ್ದೇಶಕ ಬಿಪಿನ್ ಕುಮಾರ್ ಸಿಂಗ್ ನೀರಾವರಿ ಸಂಬಂಧಿ 9 ಹಗರಣಗಳನ್ನು ಮುಕ್ತಾಯ ಮಾಡಿದ್ದಾರೆ. ಆ ಪತ್ರದಲ್ಲಿ ಎಲ್ಲಿಯೂ ಅಜಿತ್ ಪವಾರ್ ಹೆಸರಿಲ್ಲದಿರುವುದು ಪ್ರಶ್ನಾರ್ಹವಾಗಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳನ್ನು ಅಜಿತ್ ಪವಾರ್ ವಿರುದ್ಧ ದಾಖಲಿಸಲಾಗಿತ್ತು. ವಿದರ್ಭ ವಲಯದ ವಾಪಿಮ್, ಯಾವತ್ಮಾಲ್, ಅಮ್ರಾವತಿ, ಬುಲ್ದಾನ ಪ್ರದೇಶದಲ್ಲಿ ಹಗರಣ ನಡೆದಿದ್ದು 2018ರಲ್ಲಿ ಅಜಿತ್ ವಿರುದ್ದ ಎಸಿಬಿ ಪ್ರಕರಣ ದಾಖಲಿಸಿತ್ತು.

ಎಸಿಬಿ ಪ್ರಸ್ತುತ 3000 ವಿವಿಧ ಟೆಂಡರ್ ಗಳ ಕುರಿತು ತನಿಖೆ ನಡೆಸುತ್ತಿರುವುದನ್ನು ಕೈಬಿಡಲಾಗಿದೆ. ಇದು ವಾಡಿಕೆಯ ಕೆಲಸ. ಆದರೆ ಪ್ರಮುಖ ತನಿಖೆಗೆ ಮುಂದುವರೆದಿದೆ ಎಂದು ಎಸಿಬಿ ಹೇಳಿದೆ

ಇದರಲ್ಲಿ ಆಶ್ಚರ್ಯವೇನಿಲ್ಲ, ಇದು “ಸಾರ್ವಜನಿಕ ಹಿತಾಸಕ್ತಿ”ಗಾಗಿ ಬಿಜೆಪಿ ತೆಗೆದುಕೊಂಡ ಏಕೈಕ ನಿರ್ಧಾರವಾಗಿದೆ. ಅಜಿತ್‌ ಪವಾರ್‌ರವರ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಎಲ್ಲಾ ಪ್ರಕರಣಗಳನ್ನು ಮುಚ್ಚುವುದು ಸಾರ್ವಜನಿಕ ಜೀವನದಲ್ಲಿ ಬಿಜೆಪಿ ಸಂಭವನೀಯತೆಯ ಮಾರ್ಗವಾಗಿದೆ ”ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಎಂದಿಗೂ, ಎಂದಿಗೂ, ಎಂದಿಗೂ ಶಾಶ್ವತವಾಗಿ, ಶಾಶ್ವತವಾಗಿ, ಶಾಶ್ವತವಾಗಿ. ತಾತ್ಕಾಲಿಕ ಸಿಎಂ ತನ್ನ ತಾತ್ಕಾಲಿಕ ಉಪಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವ ಮೊದಲ ಆದೇಶಕ್ಕೆ ಸಹಿ ಹಾಕಿದ್ದೀರಾ? ”ಎಂದು ಶಿವಸೇನೆಯ ಪ್ರಿಯಾಂಕ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರ್, ಅಜಿತ್ ಪವಾರ್ ವಿರುದ್ದ ಇದ್ದ ನೀರಾವರಿ ಹಗಣವನ್ನುಎಸಿಬಿ ಕೈಬಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಎದ್ದಿದ್ದವು ಅದು ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದರು. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ ಎಂದು. ಆ ಘೋಷಣೆ ಏನು? ಯಾರಿಗಾಗಿ ಎಲ್ಲವೂ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಅಜಿತ್‌ ಪವಾರ್ ಅವರು 1999 ರಿಂದ ಸುಮಾರು ಒಂದು ದಶಕಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ 32 ನೀರಾವರಿ ಯೋಜನೆಗಳ ವೆಚ್ಚ ಹೆಚ್ಚಳವನ್ನು 17,000 ಕೋಟಿ ರೂ.ಗಳಿಗಿಂತ ಹೆಚ್ಚು ತೆರವುಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪದ ನಂತರ, ಪವಾರ್ ಅವರು ಮೂರು ತಿಂಗಳು ಸಂಪುಟದಿಂದ ಹೊರಬಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...