Homeನ್ಯಾಯ ಪಥಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

ಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

- Advertisement -
- Advertisement -

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳಲ್ಲೇ ಅವರ ಮೇಲಿದ್ದ ವಿದರ್ಭ ನೀರಾವರಿ ಹಗರಣ ಪ್ರಕರಣವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ ಮುಕ್ತಾಯಗೊಳಿಸಿದೆ.

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಎಸಿಬಿ ಮಹಾನಿರ್ದೇಶಕ ಬಿಪಿನ್ ಕುಮಾರ್ ಸಿಂಗ್ ನೀರಾವರಿ ಸಂಬಂಧಿ 9 ಹಗರಣಗಳನ್ನು ಮುಕ್ತಾಯ ಮಾಡಿದ್ದಾರೆ. ಆ ಪತ್ರದಲ್ಲಿ ಎಲ್ಲಿಯೂ ಅಜಿತ್ ಪವಾರ್ ಹೆಸರಿಲ್ಲದಿರುವುದು ಪ್ರಶ್ನಾರ್ಹವಾಗಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳನ್ನು ಅಜಿತ್ ಪವಾರ್ ವಿರುದ್ಧ ದಾಖಲಿಸಲಾಗಿತ್ತು. ವಿದರ್ಭ ವಲಯದ ವಾಪಿಮ್, ಯಾವತ್ಮಾಲ್, ಅಮ್ರಾವತಿ, ಬುಲ್ದಾನ ಪ್ರದೇಶದಲ್ಲಿ ಹಗರಣ ನಡೆದಿದ್ದು 2018ರಲ್ಲಿ ಅಜಿತ್ ವಿರುದ್ದ ಎಸಿಬಿ ಪ್ರಕರಣ ದಾಖಲಿಸಿತ್ತು.

ಎಸಿಬಿ ಪ್ರಸ್ತುತ 3000 ವಿವಿಧ ಟೆಂಡರ್ ಗಳ ಕುರಿತು ತನಿಖೆ ನಡೆಸುತ್ತಿರುವುದನ್ನು ಕೈಬಿಡಲಾಗಿದೆ. ಇದು ವಾಡಿಕೆಯ ಕೆಲಸ. ಆದರೆ ಪ್ರಮುಖ ತನಿಖೆಗೆ ಮುಂದುವರೆದಿದೆ ಎಂದು ಎಸಿಬಿ ಹೇಳಿದೆ

ಇದರಲ್ಲಿ ಆಶ್ಚರ್ಯವೇನಿಲ್ಲ, ಇದು “ಸಾರ್ವಜನಿಕ ಹಿತಾಸಕ್ತಿ”ಗಾಗಿ ಬಿಜೆಪಿ ತೆಗೆದುಕೊಂಡ ಏಕೈಕ ನಿರ್ಧಾರವಾಗಿದೆ. ಅಜಿತ್‌ ಪವಾರ್‌ರವರ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಎಲ್ಲಾ ಪ್ರಕರಣಗಳನ್ನು ಮುಚ್ಚುವುದು ಸಾರ್ವಜನಿಕ ಜೀವನದಲ್ಲಿ ಬಿಜೆಪಿ ಸಂಭವನೀಯತೆಯ ಮಾರ್ಗವಾಗಿದೆ ”ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಎಂದಿಗೂ, ಎಂದಿಗೂ, ಎಂದಿಗೂ ಶಾಶ್ವತವಾಗಿ, ಶಾಶ್ವತವಾಗಿ, ಶಾಶ್ವತವಾಗಿ. ತಾತ್ಕಾಲಿಕ ಸಿಎಂ ತನ್ನ ತಾತ್ಕಾಲಿಕ ಉಪಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವ ಮೊದಲ ಆದೇಶಕ್ಕೆ ಸಹಿ ಹಾಕಿದ್ದೀರಾ? ”ಎಂದು ಶಿವಸೇನೆಯ ಪ್ರಿಯಾಂಕ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರ್, ಅಜಿತ್ ಪವಾರ್ ವಿರುದ್ದ ಇದ್ದ ನೀರಾವರಿ ಹಗಣವನ್ನುಎಸಿಬಿ ಕೈಬಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಎದ್ದಿದ್ದವು ಅದು ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದರು. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ ಎಂದು. ಆ ಘೋಷಣೆ ಏನು? ಯಾರಿಗಾಗಿ ಎಲ್ಲವೂ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಅಜಿತ್‌ ಪವಾರ್ ಅವರು 1999 ರಿಂದ ಸುಮಾರು ಒಂದು ದಶಕಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ 32 ನೀರಾವರಿ ಯೋಜನೆಗಳ ವೆಚ್ಚ ಹೆಚ್ಚಳವನ್ನು 17,000 ಕೋಟಿ ರೂ.ಗಳಿಗಿಂತ ಹೆಚ್ಚು ತೆರವುಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪದ ನಂತರ, ಪವಾರ್ ಅವರು ಮೂರು ತಿಂಗಳು ಸಂಪುಟದಿಂದ ಹೊರಬಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...