Homeನ್ಯಾಯ ಪಥಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

ಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

- Advertisement -
- Advertisement -

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳಲ್ಲೇ ಅವರ ಮೇಲಿದ್ದ ವಿದರ್ಭ ನೀರಾವರಿ ಹಗರಣ ಪ್ರಕರಣವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ ಮುಕ್ತಾಯಗೊಳಿಸಿದೆ.

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಎಸಿಬಿ ಮಹಾನಿರ್ದೇಶಕ ಬಿಪಿನ್ ಕುಮಾರ್ ಸಿಂಗ್ ನೀರಾವರಿ ಸಂಬಂಧಿ 9 ಹಗರಣಗಳನ್ನು ಮುಕ್ತಾಯ ಮಾಡಿದ್ದಾರೆ. ಆ ಪತ್ರದಲ್ಲಿ ಎಲ್ಲಿಯೂ ಅಜಿತ್ ಪವಾರ್ ಹೆಸರಿಲ್ಲದಿರುವುದು ಪ್ರಶ್ನಾರ್ಹವಾಗಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳನ್ನು ಅಜಿತ್ ಪವಾರ್ ವಿರುದ್ಧ ದಾಖಲಿಸಲಾಗಿತ್ತು. ವಿದರ್ಭ ವಲಯದ ವಾಪಿಮ್, ಯಾವತ್ಮಾಲ್, ಅಮ್ರಾವತಿ, ಬುಲ್ದಾನ ಪ್ರದೇಶದಲ್ಲಿ ಹಗರಣ ನಡೆದಿದ್ದು 2018ರಲ್ಲಿ ಅಜಿತ್ ವಿರುದ್ದ ಎಸಿಬಿ ಪ್ರಕರಣ ದಾಖಲಿಸಿತ್ತು.

ಎಸಿಬಿ ಪ್ರಸ್ತುತ 3000 ವಿವಿಧ ಟೆಂಡರ್ ಗಳ ಕುರಿತು ತನಿಖೆ ನಡೆಸುತ್ತಿರುವುದನ್ನು ಕೈಬಿಡಲಾಗಿದೆ. ಇದು ವಾಡಿಕೆಯ ಕೆಲಸ. ಆದರೆ ಪ್ರಮುಖ ತನಿಖೆಗೆ ಮುಂದುವರೆದಿದೆ ಎಂದು ಎಸಿಬಿ ಹೇಳಿದೆ

ಇದರಲ್ಲಿ ಆಶ್ಚರ್ಯವೇನಿಲ್ಲ, ಇದು “ಸಾರ್ವಜನಿಕ ಹಿತಾಸಕ್ತಿ”ಗಾಗಿ ಬಿಜೆಪಿ ತೆಗೆದುಕೊಂಡ ಏಕೈಕ ನಿರ್ಧಾರವಾಗಿದೆ. ಅಜಿತ್‌ ಪವಾರ್‌ರವರ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಎಲ್ಲಾ ಪ್ರಕರಣಗಳನ್ನು ಮುಚ್ಚುವುದು ಸಾರ್ವಜನಿಕ ಜೀವನದಲ್ಲಿ ಬಿಜೆಪಿ ಸಂಭವನೀಯತೆಯ ಮಾರ್ಗವಾಗಿದೆ ”ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಎಂದಿಗೂ, ಎಂದಿಗೂ, ಎಂದಿಗೂ ಶಾಶ್ವತವಾಗಿ, ಶಾಶ್ವತವಾಗಿ, ಶಾಶ್ವತವಾಗಿ. ತಾತ್ಕಾಲಿಕ ಸಿಎಂ ತನ್ನ ತಾತ್ಕಾಲಿಕ ಉಪಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವ ಮೊದಲ ಆದೇಶಕ್ಕೆ ಸಹಿ ಹಾಕಿದ್ದೀರಾ? ”ಎಂದು ಶಿವಸೇನೆಯ ಪ್ರಿಯಾಂಕ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರ್, ಅಜಿತ್ ಪವಾರ್ ವಿರುದ್ದ ಇದ್ದ ನೀರಾವರಿ ಹಗಣವನ್ನುಎಸಿಬಿ ಕೈಬಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಎದ್ದಿದ್ದವು ಅದು ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದರು. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ ಎಂದು. ಆ ಘೋಷಣೆ ಏನು? ಯಾರಿಗಾಗಿ ಎಲ್ಲವೂ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಅಜಿತ್‌ ಪವಾರ್ ಅವರು 1999 ರಿಂದ ಸುಮಾರು ಒಂದು ದಶಕಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ 32 ನೀರಾವರಿ ಯೋಜನೆಗಳ ವೆಚ್ಚ ಹೆಚ್ಚಳವನ್ನು 17,000 ಕೋಟಿ ರೂ.ಗಳಿಗಿಂತ ಹೆಚ್ಚು ತೆರವುಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪದ ನಂತರ, ಪವಾರ್ ಅವರು ಮೂರು ತಿಂಗಳು ಸಂಪುಟದಿಂದ ಹೊರಬಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...