Homeನ್ಯಾಯ ಪಥಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

ಅಜಿತ್ ಪವಾರ್ ಮೇಲಿನ ಕುಖ್ಯಾತ ವಿದರ್ಭ ನೀರಾವರಿ ಹಗರಣದ ಕೇಸ್‌ ವಾಪಸ್!

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

- Advertisement -
- Advertisement -

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳಲ್ಲೇ ಅವರ ಮೇಲಿದ್ದ ವಿದರ್ಭ ನೀರಾವರಿ ಹಗರಣ ಪ್ರಕರಣವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ ಮುಕ್ತಾಯಗೊಳಿಸಿದೆ.

70 ಸಾವಿರ ಕೋಟಿ ರೂಪಾಯಿ ಕುಖ್ಯಾತ ನೀರಾವರಿ ಹಗರಣವೆಂದೇ ಕರೆಯುವ ಈ ಪ್ರಕರಣವನ್ನು ಕಾನ್ಫಿಡೆನ್ಸಿಯಲ್ ಎಂದು ಹೇಳಿ ವಾಪಸ್ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಎಸಿಬಿ ಮಹಾನಿರ್ದೇಶಕ ಬಿಪಿನ್ ಕುಮಾರ್ ಸಿಂಗ್ ನೀರಾವರಿ ಸಂಬಂಧಿ 9 ಹಗರಣಗಳನ್ನು ಮುಕ್ತಾಯ ಮಾಡಿದ್ದಾರೆ. ಆ ಪತ್ರದಲ್ಲಿ ಎಲ್ಲಿಯೂ ಅಜಿತ್ ಪವಾರ್ ಹೆಸರಿಲ್ಲದಿರುವುದು ಪ್ರಶ್ನಾರ್ಹವಾಗಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳನ್ನು ಅಜಿತ್ ಪವಾರ್ ವಿರುದ್ಧ ದಾಖಲಿಸಲಾಗಿತ್ತು. ವಿದರ್ಭ ವಲಯದ ವಾಪಿಮ್, ಯಾವತ್ಮಾಲ್, ಅಮ್ರಾವತಿ, ಬುಲ್ದಾನ ಪ್ರದೇಶದಲ್ಲಿ ಹಗರಣ ನಡೆದಿದ್ದು 2018ರಲ್ಲಿ ಅಜಿತ್ ವಿರುದ್ದ ಎಸಿಬಿ ಪ್ರಕರಣ ದಾಖಲಿಸಿತ್ತು.

ಎಸಿಬಿ ಪ್ರಸ್ತುತ 3000 ವಿವಿಧ ಟೆಂಡರ್ ಗಳ ಕುರಿತು ತನಿಖೆ ನಡೆಸುತ್ತಿರುವುದನ್ನು ಕೈಬಿಡಲಾಗಿದೆ. ಇದು ವಾಡಿಕೆಯ ಕೆಲಸ. ಆದರೆ ಪ್ರಮುಖ ತನಿಖೆಗೆ ಮುಂದುವರೆದಿದೆ ಎಂದು ಎಸಿಬಿ ಹೇಳಿದೆ

ಇದರಲ್ಲಿ ಆಶ್ಚರ್ಯವೇನಿಲ್ಲ, ಇದು “ಸಾರ್ವಜನಿಕ ಹಿತಾಸಕ್ತಿ”ಗಾಗಿ ಬಿಜೆಪಿ ತೆಗೆದುಕೊಂಡ ಏಕೈಕ ನಿರ್ಧಾರವಾಗಿದೆ. ಅಜಿತ್‌ ಪವಾರ್‌ರವರ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಎಲ್ಲಾ ಪ್ರಕರಣಗಳನ್ನು ಮುಚ್ಚುವುದು ಸಾರ್ವಜನಿಕ ಜೀವನದಲ್ಲಿ ಬಿಜೆಪಿ ಸಂಭವನೀಯತೆಯ ಮಾರ್ಗವಾಗಿದೆ ”ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಎಂದಿಗೂ, ಎಂದಿಗೂ, ಎಂದಿಗೂ ಶಾಶ್ವತವಾಗಿ, ಶಾಶ್ವತವಾಗಿ, ಶಾಶ್ವತವಾಗಿ. ತಾತ್ಕಾಲಿಕ ಸಿಎಂ ತನ್ನ ತಾತ್ಕಾಲಿಕ ಉಪಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವ ಮೊದಲ ಆದೇಶಕ್ಕೆ ಸಹಿ ಹಾಕಿದ್ದೀರಾ? ”ಎಂದು ಶಿವಸೇನೆಯ ಪ್ರಿಯಾಂಕ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರ್, ಅಜಿತ್ ಪವಾರ್ ವಿರುದ್ದ ಇದ್ದ ನೀರಾವರಿ ಹಗಣವನ್ನುಎಸಿಬಿ ಕೈಬಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಎದ್ದಿದ್ದವು ಅದು ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದರು. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ ಎಂದು. ಆ ಘೋಷಣೆ ಏನು? ಯಾರಿಗಾಗಿ ಎಲ್ಲವೂ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಅಜಿತ್‌ ಪವಾರ್ ಅವರು 1999 ರಿಂದ ಸುಮಾರು ಒಂದು ದಶಕಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ 32 ನೀರಾವರಿ ಯೋಜನೆಗಳ ವೆಚ್ಚ ಹೆಚ್ಚಳವನ್ನು 17,000 ಕೋಟಿ ರೂ.ಗಳಿಗಿಂತ ಹೆಚ್ಚು ತೆರವುಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪದ ನಂತರ, ಪವಾರ್ ಅವರು ಮೂರು ತಿಂಗಳು ಸಂಪುಟದಿಂದ ಹೊರಬಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...