Homeಮುಖಪುಟಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ ಹೇಳಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಿದ್ಧಾಂತವು (ಸಮಾಜ ಸುಧಾರಕರು) ಶಾಹು, ಫುಲೆ ಮತ್ತು ಅಂಬೇಡ್ಕರ್ ಅವರ ಪ್ರಗತಿಪರ ಆಲೋಚನೆಗಳನ್ನು ಆಧರಿಸಿದೆ” ಎಂದು ಎನ್‌ಸಿಪಿ ವಕ್ತಾರ ಆನಂದ್ ಪರಾಂಜಪೆ ಹೇಳಿದ್ದಾರೆ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಪವಾರ್ ಭೇಟಿ ನೀಡುವುದನ್ನು ತಪ್ಪಿಸಿಕೊಂಡಿದ್ದು ಇದೇ ಮೊದಲಲ್ಲ ಎಂದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

“ನಾವು ನಮ್ಮ ತತ್ವಗಳಿಗೆ ಬದ್ಧರಾಗಿದ್ದೇವೆ ಮತ್ತು ನಮ್ಮ ಗಮನ ರಾಜ್ಯದ ಅಭಿವೃದ್ಧಿಯಾಗಿದೆ” ಎಂದು ಪರಾಂಜಪೆ ಹೇಳಿದ್ದಾರೆ ಎಂದಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಆಡಳಿತಾರೂಢ ಬಿಜೆಪಿ, ಶಿವಸೇನೆ ಶಾಸಕರು ಭಾನುವಾರ ಬೆಳಿಗ್ಗೆ ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರೆ, ಪವಾರ್ ಮತ್ತು ಇತರ ಎನ್‌ಸಿಪಿ ನಾಯಕರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನವು ಪ್ರಸ್ತುತ ನಾಗ್ಪುರದಲ್ಲಿ ನಡೆಯುತ್ತಿದೆ.

ಪ್ರತಿ ವರ್ಷ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬಿಜೆಪಿ ಸಚಿವರು ಮತ್ತು ಶಾಸಕರು ರೇಶಿಂಬಾಗ್‌ನ ಸ್ಮೃತಿ ಮಂದಿರದಲ್ಲಿರುವ ಹೆಡ್ಗೆವಾರ್ ಮತ್ತು ಆರ್‌ಎಸ್‌ಎಸ್‌ನ ಎರಡನೇ ಸಂಘಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡುತ್ತಾರೆ.

ಕಳೆದ ವರ್ಷ ಕೂಡ ವಿಧಾನಸಭೆಯಲ್ಲಿ 41 ಶಾಸಕರನ್ನು ಹೊಂದಿದ್ದರೂ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಶಾಸಕರಾದ ರಾಜು ಕರೇಮೋರೆ ಮತ್ತು ರಾಜ್‌ಕುಮಾರ್ ಬಡೋಲೆ ಮಾತ್ರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

“ಸಚಿವ ಸಂಪುಟ ಸಭೆಗಳಲ್ಲಿ ಎನ್‌ಸಿಪಿ ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಕೇಳುತ್ತಿದೆ. ಅವರು ಅದನ್ನು ಒಪ್ಪಿಕೊಳ್ಳದ ಹೊರತು ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ” ಎಂದು ವಿರೋಧ ಪಕ್ಷ ಕಾಂಗ್ರೆಸ್‌ನ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಾವಂತ್ ಆರ್‌ಎಸ್‌ಎಸ್‌ ಅನ್ನು ಟೀಕಿಸಿದ್ದು, “ಅದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಸಿದ್ಧಾಂತಗಳನ್ನು ಉತ್ತೇಜಿಸುತ್ತದೆ” ಎಂದು ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಮತ್ತು ಶಿವಸೇನೆ ಶಾಸಕರು ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿರುವುದನ್ನು ಉಲ್ಲೇಖಿಸಿರುವ ಸಾವಂತ್, “ಹಣ ಹಂಚುವ ಮೂಲಕ ಹೇಗೆ ಅಧಿಕಾರ ಪಡೆಯುವುದು ಮತ್ತು ಹೇಗೆ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ನಾಶಮಾಡುವುದು” ಎಂಬುದರ ಮೇಲೆ ಅವರ ಗಮನವಿದೆ ಎಂದು ಟೀಕಿಸಿದ್ದಾರೆ.

“100 ವರ್ಷಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಹಿಂದುತ್ವ ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವಲ್ಲಿ ಆರ್‌ಎಸ್‌ಎಸ್ ವಿಫಲವಾಗಿದೆ” ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

“ಕನಿಷ್ಠ ಪಕ್ಷ ಈಗಲಾದರೂ ಹಿಂದುತ್ವ ಎಂದರೆ ಏನು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಆರ್‌ಎಸ್‌ಎಸ್‌ನಲ್ಲಿ ಉತ್ತಮ ಚರ್ಚೆಗಳು ನಡೆಯುವುದು ಕಡಿಮೆ, ಸಮಾಜವನ್ನು ವಿಭಜಿಸುವ ಚರ್ಚೆಗಳೇ ಹೆಚ್ಚು ಎಂದು ಸಚಿನ್ ಸಾವಂತ್ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...

ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು...