Homeಮುಖಪುಟಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ ಹೇಳಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಿದ್ಧಾಂತವು (ಸಮಾಜ ಸುಧಾರಕರು) ಶಾಹು, ಫುಲೆ ಮತ್ತು ಅಂಬೇಡ್ಕರ್ ಅವರ ಪ್ರಗತಿಪರ ಆಲೋಚನೆಗಳನ್ನು ಆಧರಿಸಿದೆ” ಎಂದು ಎನ್‌ಸಿಪಿ ವಕ್ತಾರ ಆನಂದ್ ಪರಾಂಜಪೆ ಹೇಳಿದ್ದಾರೆ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಪವಾರ್ ಭೇಟಿ ನೀಡುವುದನ್ನು ತಪ್ಪಿಸಿಕೊಂಡಿದ್ದು ಇದೇ ಮೊದಲಲ್ಲ ಎಂದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

“ನಾವು ನಮ್ಮ ತತ್ವಗಳಿಗೆ ಬದ್ಧರಾಗಿದ್ದೇವೆ ಮತ್ತು ನಮ್ಮ ಗಮನ ರಾಜ್ಯದ ಅಭಿವೃದ್ಧಿಯಾಗಿದೆ” ಎಂದು ಪರಾಂಜಪೆ ಹೇಳಿದ್ದಾರೆ ಎಂದಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಆಡಳಿತಾರೂಢ ಬಿಜೆಪಿ, ಶಿವಸೇನೆ ಶಾಸಕರು ಭಾನುವಾರ ಬೆಳಿಗ್ಗೆ ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರೆ, ಪವಾರ್ ಮತ್ತು ಇತರ ಎನ್‌ಸಿಪಿ ನಾಯಕರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನವು ಪ್ರಸ್ತುತ ನಾಗ್ಪುರದಲ್ಲಿ ನಡೆಯುತ್ತಿದೆ.

ಪ್ರತಿ ವರ್ಷ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬಿಜೆಪಿ ಸಚಿವರು ಮತ್ತು ಶಾಸಕರು ರೇಶಿಂಬಾಗ್‌ನ ಸ್ಮೃತಿ ಮಂದಿರದಲ್ಲಿರುವ ಹೆಡ್ಗೆವಾರ್ ಮತ್ತು ಆರ್‌ಎಸ್‌ಎಸ್‌ನ ಎರಡನೇ ಸಂಘಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡುತ್ತಾರೆ.

ಕಳೆದ ವರ್ಷ ಕೂಡ ವಿಧಾನಸಭೆಯಲ್ಲಿ 41 ಶಾಸಕರನ್ನು ಹೊಂದಿದ್ದರೂ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಶಾಸಕರಾದ ರಾಜು ಕರೇಮೋರೆ ಮತ್ತು ರಾಜ್‌ಕುಮಾರ್ ಬಡೋಲೆ ಮಾತ್ರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

“ಸಚಿವ ಸಂಪುಟ ಸಭೆಗಳಲ್ಲಿ ಎನ್‌ಸಿಪಿ ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಕೇಳುತ್ತಿದೆ. ಅವರು ಅದನ್ನು ಒಪ್ಪಿಕೊಳ್ಳದ ಹೊರತು ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ” ಎಂದು ವಿರೋಧ ಪಕ್ಷ ಕಾಂಗ್ರೆಸ್‌ನ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಾವಂತ್ ಆರ್‌ಎಸ್‌ಎಸ್‌ ಅನ್ನು ಟೀಕಿಸಿದ್ದು, “ಅದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಸಿದ್ಧಾಂತಗಳನ್ನು ಉತ್ತೇಜಿಸುತ್ತದೆ” ಎಂದು ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಮತ್ತು ಶಿವಸೇನೆ ಶಾಸಕರು ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿರುವುದನ್ನು ಉಲ್ಲೇಖಿಸಿರುವ ಸಾವಂತ್, “ಹಣ ಹಂಚುವ ಮೂಲಕ ಹೇಗೆ ಅಧಿಕಾರ ಪಡೆಯುವುದು ಮತ್ತು ಹೇಗೆ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ನಾಶಮಾಡುವುದು” ಎಂಬುದರ ಮೇಲೆ ಅವರ ಗಮನವಿದೆ ಎಂದು ಟೀಕಿಸಿದ್ದಾರೆ.

“100 ವರ್ಷಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಹಿಂದುತ್ವ ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವಲ್ಲಿ ಆರ್‌ಎಸ್‌ಎಸ್ ವಿಫಲವಾಗಿದೆ” ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

“ಕನಿಷ್ಠ ಪಕ್ಷ ಈಗಲಾದರೂ ಹಿಂದುತ್ವ ಎಂದರೆ ಏನು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಆರ್‌ಎಸ್‌ಎಸ್‌ನಲ್ಲಿ ಉತ್ತಮ ಚರ್ಚೆಗಳು ನಡೆಯುವುದು ಕಡಿಮೆ, ಸಮಾಜವನ್ನು ವಿಭಜಿಸುವ ಚರ್ಚೆಗಳೇ ಹೆಚ್ಚು ಎಂದು ಸಚಿನ್ ಸಾವಂತ್ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...