Homeಮುಖಪುಟಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ ಹೇಳಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಿದ್ಧಾಂತವು (ಸಮಾಜ ಸುಧಾರಕರು) ಶಾಹು, ಫುಲೆ ಮತ್ತು ಅಂಬೇಡ್ಕರ್ ಅವರ ಪ್ರಗತಿಪರ ಆಲೋಚನೆಗಳನ್ನು ಆಧರಿಸಿದೆ” ಎಂದು ಎನ್‌ಸಿಪಿ ವಕ್ತಾರ ಆನಂದ್ ಪರಾಂಜಪೆ ಹೇಳಿದ್ದಾರೆ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಪವಾರ್ ಭೇಟಿ ನೀಡುವುದನ್ನು ತಪ್ಪಿಸಿಕೊಂಡಿದ್ದು ಇದೇ ಮೊದಲಲ್ಲ ಎಂದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

“ನಾವು ನಮ್ಮ ತತ್ವಗಳಿಗೆ ಬದ್ಧರಾಗಿದ್ದೇವೆ ಮತ್ತು ನಮ್ಮ ಗಮನ ರಾಜ್ಯದ ಅಭಿವೃದ್ಧಿಯಾಗಿದೆ” ಎಂದು ಪರಾಂಜಪೆ ಹೇಳಿದ್ದಾರೆ ಎಂದಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಆಡಳಿತಾರೂಢ ಬಿಜೆಪಿ, ಶಿವಸೇನೆ ಶಾಸಕರು ಭಾನುವಾರ ಬೆಳಿಗ್ಗೆ ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರೆ, ಪವಾರ್ ಮತ್ತು ಇತರ ಎನ್‌ಸಿಪಿ ನಾಯಕರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನವು ಪ್ರಸ್ತುತ ನಾಗ್ಪುರದಲ್ಲಿ ನಡೆಯುತ್ತಿದೆ.

ಪ್ರತಿ ವರ್ಷ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬಿಜೆಪಿ ಸಚಿವರು ಮತ್ತು ಶಾಸಕರು ರೇಶಿಂಬಾಗ್‌ನ ಸ್ಮೃತಿ ಮಂದಿರದಲ್ಲಿರುವ ಹೆಡ್ಗೆವಾರ್ ಮತ್ತು ಆರ್‌ಎಸ್‌ಎಸ್‌ನ ಎರಡನೇ ಸಂಘಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡುತ್ತಾರೆ.

ಕಳೆದ ವರ್ಷ ಕೂಡ ವಿಧಾನಸಭೆಯಲ್ಲಿ 41 ಶಾಸಕರನ್ನು ಹೊಂದಿದ್ದರೂ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಶಾಸಕರಾದ ರಾಜು ಕರೇಮೋರೆ ಮತ್ತು ರಾಜ್‌ಕುಮಾರ್ ಬಡೋಲೆ ಮಾತ್ರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

“ಸಚಿವ ಸಂಪುಟ ಸಭೆಗಳಲ್ಲಿ ಎನ್‌ಸಿಪಿ ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಕೇಳುತ್ತಿದೆ. ಅವರು ಅದನ್ನು ಒಪ್ಪಿಕೊಳ್ಳದ ಹೊರತು ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ” ಎಂದು ವಿರೋಧ ಪಕ್ಷ ಕಾಂಗ್ರೆಸ್‌ನ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಾವಂತ್ ಆರ್‌ಎಸ್‌ಎಸ್‌ ಅನ್ನು ಟೀಕಿಸಿದ್ದು, “ಅದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಸಿದ್ಧಾಂತಗಳನ್ನು ಉತ್ತೇಜಿಸುತ್ತದೆ” ಎಂದು ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಮತ್ತು ಶಿವಸೇನೆ ಶಾಸಕರು ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿರುವುದನ್ನು ಉಲ್ಲೇಖಿಸಿರುವ ಸಾವಂತ್, “ಹಣ ಹಂಚುವ ಮೂಲಕ ಹೇಗೆ ಅಧಿಕಾರ ಪಡೆಯುವುದು ಮತ್ತು ಹೇಗೆ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ನಾಶಮಾಡುವುದು” ಎಂಬುದರ ಮೇಲೆ ಅವರ ಗಮನವಿದೆ ಎಂದು ಟೀಕಿಸಿದ್ದಾರೆ.

“100 ವರ್ಷಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಹಿಂದುತ್ವ ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವಲ್ಲಿ ಆರ್‌ಎಸ್‌ಎಸ್ ವಿಫಲವಾಗಿದೆ” ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

“ಕನಿಷ್ಠ ಪಕ್ಷ ಈಗಲಾದರೂ ಹಿಂದುತ್ವ ಎಂದರೆ ಏನು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಆರ್‌ಎಸ್‌ಎಸ್‌ನಲ್ಲಿ ಉತ್ತಮ ಚರ್ಚೆಗಳು ನಡೆಯುವುದು ಕಡಿಮೆ, ಸಮಾಜವನ್ನು ವಿಭಜಿಸುವ ಚರ್ಚೆಗಳೇ ಹೆಚ್ಚು ಎಂದು ಸಚಿನ್ ಸಾವಂತ್ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...